ಸುಳ್ಯ: ಸುಳ್ಯದ ಪ್ರಮುಖ ಕಚೇರಿಯೊಂದರಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಆರೋಪ ಕಳೆದ ಹಲವಾರು ಸಮಯಗಳಿಂದ ಕೇಳಿಬರುತ್ತಿತ್ತು. ಪ್ರತಿಯೊಂದಕ್ಕೂ ಲಂಚಾವತಾರ ಹೆಚ್ಚಾಗಿದೆ ಎಂದು ದೂರು ಇತ್ತು. ಅದಕ್ಕೆ ಪೂರಕವಾಗಿ ವಿಡಿಯೋವೊಂದು “ಸುಳ್ಯನ್ಯೂಸ್.ಕಾಂ” ಗೆ ಲಭಿಸಿದೆ.
ಸುಳ್ಯದ ಉಪನೋಂದಣಿ ಕಚೇರಿಯಲ್ಲಿ ಅಧಿಕಾರಿಯೊಬ್ಬರು ಹಣ ಪಡೆಯುತ್ತಿರುವುದು ಹಾಗೂ ಹಣಕ್ಕಾಗಿ ಚರ್ಚೆ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ . ಈಗ ಎಲ್ಲವೂ ಆನ್ ಲೈನ್ ಮೂಲಕ ಪಾವತಿಯಾಗುತ್ತಿರುವ ಸಂದರ್ಭ ಇಷ್ಟೊಂದು ಹಣ ಪಡೆಯುತ್ತಿರುವುದು ಏಕೆ ಎಂಬ ಪ್ರಶ್ನೆ ಒಂದು ಕಡೆಯಾದರೆ, ಕಚೇರಿಯಲ್ಲಿ ಹೀಗೆಲ್ಲಾ ಹಣ ಪಡೆಯುವುದು ಯಾವುದೇ ಅಧಿಕಾರಿಗಳ ಗಮನಕ್ಕೂ ಬಾರದೇ ಇರುವುದು ಸೋಜಿಗ ಎನಿಸಿದೆ. ಹೀಗಾಗಿ ಎಚ್ಚೆತ್ತುಕೊಳ್ಳುವ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾಮಾಜಿಕ ಸಂಘಟನೆಗಳು ಇದರ ವಿರುದ್ಧ ಹೋರಾಟ ನಡೆಸಲೇಬೇಕಾದ ಅನಿವಾರ್ಯತೆ ಇದೆ. ಕೆಲವೊಮ್ಮೆ ಜನರೇ ತಮ್ಮ ಕೆಲಸಗಳಿಗಾಗಿ ಹಣ ನೀಡುತ್ತಾರೆ. ಆದರೆ ಇದು ಅದಲ್ಲ, ಒತ್ತಾಯ ಪೂರ್ವಕವಾಗಿ ಚರ್ಚೆ ಮಾಡಿ ಹಣ ಪಡೆಯುವುದು ಈ ವಿಡಿಯೋದಲ್ಲಿ ತಿಳಿಯುತ್ತದೆ. ಎಲ್ಲಿಗೆ ಬಂದು ನಿಂತಿದೆ ನಮ್ಮ ವ್ಯವಸ್ಥೆ…!
ಈ ನಡುವೆ ವಿಡಿಯೋದಲ್ಲಿ ಕೇಳಿಸುವಂತೆ ಹಾಗೂ ಹಣ ತೆಗೆಯುವ ಸಂದರ್ಭ ನಮಗೆ ಬೇರೆದಕ್ಕೂ ಕೊಡಲಿದೆ ಎಂದು ಹೇಳುವುದು ಕೇಳಿಸುತ್ತದೆ. ಇದು ಕೂಡಾ ಚರ್ಚೆಗೆ ಕಾರಣವಾಗಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಸುಳ್ಯದ ಆಡಳಿತ ಪಕ್ಷಗಳು, ಶಾಸಕರು , ಸರಕಾರ, ವಿಪಕ್ಷಗಳು ಸುಮ್ಮನೆ ಕುಳಿತಿರುವುದೇಕೆ ಎಂಬುದೇ ಪ್ರಶ್ನೆಯಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…