ಸುಳ್ಯ: ಸುಳ್ಯದ ಪ್ರಮುಖ ಕಚೇರಿಯೊಂದರಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂಬ ಆರೋಪ ಕಳೆದ ಹಲವಾರು ಸಮಯಗಳಿಂದ ಕೇಳಿಬರುತ್ತಿತ್ತು. ಪ್ರತಿಯೊಂದಕ್ಕೂ ಲಂಚಾವತಾರ ಹೆಚ್ಚಾಗಿದೆ ಎಂದು ದೂರು ಇತ್ತು. ಅದಕ್ಕೆ ಪೂರಕವಾಗಿ ವಿಡಿಯೋವೊಂದು “ಸುಳ್ಯನ್ಯೂಸ್.ಕಾಂ” ಗೆ ಲಭಿಸಿದೆ.
ಸುಳ್ಯದ ಉಪನೋಂದಣಿ ಕಚೇರಿಯಲ್ಲಿ ಅಧಿಕಾರಿಯೊಬ್ಬರು ಹಣ ಪಡೆಯುತ್ತಿರುವುದು ಹಾಗೂ ಹಣಕ್ಕಾಗಿ ಚರ್ಚೆ ಮಾಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ . ಈಗ ಎಲ್ಲವೂ ಆನ್ ಲೈನ್ ಮೂಲಕ ಪಾವತಿಯಾಗುತ್ತಿರುವ ಸಂದರ್ಭ ಇಷ್ಟೊಂದು ಹಣ ಪಡೆಯುತ್ತಿರುವುದು ಏಕೆ ಎಂಬ ಪ್ರಶ್ನೆ ಒಂದು ಕಡೆಯಾದರೆ, ಕಚೇರಿಯಲ್ಲಿ ಹೀಗೆಲ್ಲಾ ಹಣ ಪಡೆಯುವುದು ಯಾವುದೇ ಅಧಿಕಾರಿಗಳ ಗಮನಕ್ಕೂ ಬಾರದೇ ಇರುವುದು ಸೋಜಿಗ ಎನಿಸಿದೆ. ಹೀಗಾಗಿ ಎಚ್ಚೆತ್ತುಕೊಳ್ಳುವ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾಮಾಜಿಕ ಸಂಘಟನೆಗಳು ಇದರ ವಿರುದ್ಧ ಹೋರಾಟ ನಡೆಸಲೇಬೇಕಾದ ಅನಿವಾರ್ಯತೆ ಇದೆ. ಕೆಲವೊಮ್ಮೆ ಜನರೇ ತಮ್ಮ ಕೆಲಸಗಳಿಗಾಗಿ ಹಣ ನೀಡುತ್ತಾರೆ. ಆದರೆ ಇದು ಅದಲ್ಲ, ಒತ್ತಾಯ ಪೂರ್ವಕವಾಗಿ ಚರ್ಚೆ ಮಾಡಿ ಹಣ ಪಡೆಯುವುದು ಈ ವಿಡಿಯೋದಲ್ಲಿ ತಿಳಿಯುತ್ತದೆ. ಎಲ್ಲಿಗೆ ಬಂದು ನಿಂತಿದೆ ನಮ್ಮ ವ್ಯವಸ್ಥೆ…!
ಈ ನಡುವೆ ವಿಡಿಯೋದಲ್ಲಿ ಕೇಳಿಸುವಂತೆ ಹಾಗೂ ಹಣ ತೆಗೆಯುವ ಸಂದರ್ಭ ನಮಗೆ ಬೇರೆದಕ್ಕೂ ಕೊಡಲಿದೆ ಎಂದು ಹೇಳುವುದು ಕೇಳಿಸುತ್ತದೆ. ಇದು ಕೂಡಾ ಚರ್ಚೆಗೆ ಕಾರಣವಾಗಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಸುಳ್ಯದ ಆಡಳಿತ ಪಕ್ಷಗಳು, ಶಾಸಕರು , ಸರಕಾರ, ವಿಪಕ್ಷಗಳು ಸುಮ್ಮನೆ ಕುಳಿತಿರುವುದೇಕೆ ಎಂಬುದೇ ಪ್ರಶ್ನೆಯಾಗಿದೆ.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…