Advertisement
Exclusive - Mirror Hunt

ಸುಳ್ಯದಲ್ಲಿ ಮಿತಿಮೀರಿದ “ಭ್ರಷ್ಟಾಚಾರ”…. ಇದೇನ್ ಸಾರ್ ಹೀಂಗೆ ಹಣ ತೆಗೀತೀರಾ…! ,

Share

ಸುಳ್ಯ: ಸುಳ್ಯದ ಪ್ರಮುಖ ಕಚೇರಿಯೊಂದರಲ್ಲಿ  ಭ್ರಷ್ಟಾಚಾರ ಮಿತಿಮೀರಿದೆ ಎಂಬ ಆರೋಪ ಕಳೆದ ಹಲವಾರು ಸಮಯಗಳಿಂದ ಕೇಳಿಬರುತ್ತಿತ್ತು. ಪ್ರತಿಯೊಂದಕ್ಕೂ ಲಂಚಾವತಾರ ಹೆಚ್ಚಾಗಿದೆ ಎಂದು ದೂರು ಇತ್ತು. ಅದಕ್ಕೆ ಪೂರಕವಾಗಿ ವಿಡಿಯೋವೊಂದು “ಸುಳ್ಯನ್ಯೂಸ್.ಕಾಂ” ಗೆ ಲಭಿಸಿದೆ.

ಸುಳ್ಯದ ಉಪನೋಂದಣಿ ಕಚೇರಿಯಲ್ಲಿ  ಅಧಿಕಾರಿಯೊಬ್ಬರು ಹಣ ಪಡೆಯುತ್ತಿರುವುದು  ಹಾಗೂ ಹಣಕ್ಕಾಗಿ  ಚರ್ಚೆ ಮಾಡುತ್ತಿರುವ ದೃಶ್ಯ  ವಿಡಿಯೋದಲ್ಲಿದೆ . ಈಗ ಎಲ್ಲವೂ ಆನ್ ಲೈನ್ ಮೂಲಕ ಪಾವತಿಯಾಗುತ್ತಿರುವ ಸಂದರ್ಭ ಇಷ್ಟೊಂದು ಹಣ ಪಡೆಯುತ್ತಿರುವುದು ಏಕೆ ಎಂಬ ಪ್ರಶ್ನೆ ಒಂದು ಕಡೆಯಾದರೆ, ಕಚೇರಿಯಲ್ಲಿ  ಹೀಗೆಲ್ಲಾ ಹಣ ಪಡೆಯುವುದು ಯಾವುದೇ ಅಧಿಕಾರಿಗಳ ಗಮನಕ್ಕೂ ಬಾರದೇ ಇರುವುದು  ಸೋಜಿಗ ಎನಿಸಿದೆ.  ಹೀಗಾಗಿ ಎಚ್ಚೆತ್ತುಕೊಳ್ಳುವ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾಮಾಜಿಕ ಸಂಘಟನೆಗಳು ಇದರ ವಿರುದ್ಧ ಹೋರಾಟ ನಡೆಸಲೇಬೇಕಾದ ಅನಿವಾರ್ಯತೆ ಇದೆ. ಕೆಲವೊಮ್ಮೆ ಜನರೇ ತಮ್ಮ ಕೆಲಸಗಳಿಗಾಗಿ ಹಣ ನೀಡುತ್ತಾರೆ. ಆದರೆ ಇದು ಅದಲ್ಲ, ಒತ್ತಾಯ ಪೂರ್ವಕವಾಗಿ ಚರ್ಚೆ ಮಾಡಿ ಹಣ ಪಡೆಯುವುದು  ಈ ವಿಡಿಯೋದಲ್ಲಿ  ತಿಳಿಯುತ್ತದೆ. ಎಲ್ಲಿಗೆ ಬಂದು ನಿಂತಿದೆ ನಮ್ಮ ವ್ಯವಸ್ಥೆ…!

 

ಈ ನಡುವೆ ವಿಡಿಯೋದಲ್ಲಿ ಕೇಳಿಸುವಂತೆ ಹಾಗೂ ಹಣ ತೆಗೆಯುವ ಸಂದರ್ಭ ನಮಗೆ ಬೇರೆದಕ್ಕೂ ಕೊಡಲಿದೆ ಎಂದು ಹೇಳುವುದು  ಕೇಳಿಸುತ್ತದೆ. ಇದು ಕೂಡಾ ಚರ್ಚೆಗೆ ಕಾರಣವಾಗಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಸುಳ್ಯದ ಆಡಳಿತ ಪಕ್ಷಗಳು, ಶಾಸಕರು , ಸರಕಾರ, ವಿಪಕ್ಷಗಳು ಸುಮ್ಮನೆ ಕುಳಿತಿರುವುದೇಕೆ ಎಂಬುದೇ ಪ್ರಶ್ನೆಯಾಗಿದೆ.

 

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago