ನಮ್ಮೂರ ಸುದ್ದಿ

ಇನ್ನರ್ ವೀಲ್ ಕ್ಲಬ್ ಸುಳ್ಯ : ಜಿಲ್ಲಾಧ್ಯಕ್ಷರ ಭೇಟಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಇನ್ನರ್‍ವ್ಹೀಲ್ ಕ್ಲಬ್ ಸುಳ್ಯ ಇದರ ಜಿಲ್ಲಾಧ್ಯಕ್ಷರ ಭೇಟಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಹರ್ಷಿತಾ ಪುರುಷೋತ್ತಮ್ ವಹಿಸಿದ್ದರು.

Advertisement

ಜಿಲ್ಲಾ 318ರ ಜಿಲ್ಲಾಧ್ಯಕ್ಷೆ  ಅನುರಾಧ ನಂದಕುಮಾರ್ ಮಾತನಾಡಿ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ಚಿತ್ರಕಲೆಯಲ್ಲಿ ಸಾಧನೆ ಮಾಡಿದ ಕು. ಚಂದನಾ ಗೌಡರವರನ್ನು ಸನ್ಮಾನಿಸಿ, ವಿವಿಧ ಶಾಲೆಗಳಗೆ ಕೊಡುಗೆಗಳನ್ನು ನೀಡಲಾಯಿತು. ಈ ಸಂಧರ್ಭದಲ್ಲಿ ನೂತನ ಸದಸ್ಯರಾಗಿ ಡಾ. ತಾರಾ ನಂದನ್, ಡಾ. ಶ್ರಮಿಕಾ ಸೂಂತೋಡು, ಸವಿತಾ ನಾರ್ಕೋಡು, ಮಮತಾ ನಾರ್ಕೋಡು, ಸೌಮ್ಯಾ ಮಾಣಿಬೆಟ್ಟು ಮತ್ತು ಕೃಪಾ ದಿನೇಶ್ ರವರು ಕ್ಲಬ್‍ಗೆ ಸೇರ್ಪಡೆಗೊಂಡರು.

ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷೆ ಮಮತಾ ಸತೀಶ್, ಕಾರ್ಯದರ್ಶಿ ಜಯಮಣಿ ಮಾಧವ, ಖಜಾಂಜಿ ಪೂಜಾ ಸಂತೋಷ್, ಉಪಾಧ್ಯಕ್ಷೆ ವಿನುತಾ ಶೇಟ್, ಲಿಟ್ರೆಸಿ ಸಂಯೋಜಕಿ ಜಯಲಕ್ಷ್ಮೀ ಜೆ.ಕೆ. ರೈ, ಐ.ಎಸ್.ಒ. ಪ್ರಜ್ಞಾ ಮನುಜೇಶ್, ಜತೆ ಕಾರ್ಯದರ್ಶಿ ಸವಿತಾ ಸಿ.ಕೆ., ಸಂಪಾದಕಿ ಮಧುರಾ ಜಗದೀಶ್ ಉಪಸ್ಥಿತರಿದ್ದರು.

ಡಾ. ಹರ್ಷಿತಾ ಪುರುಷೋತ್ತಮ್ ಸ್ವಾಗತಿಸಿ, ಜಯಮಣಿ ಮಾಧವ್ ವರದಿ ವಾಚಿಸಿದರು. ವಿನುತಾ ಶೇಟ್ ವಂದಿಸಿ, ಶ್ರೀದೇವಿ ನಾಗರಾಜ್ ಹಾಗೂ ಆಶಿತಾ ಕೇಶವ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

6 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

6 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

6 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

17 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago

ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…

1 day ago