ಸುಳ್ಯ: ಇನ್ನರ್ವ್ಹೀಲ್ ಕ್ಲಬ್ ಸುಳ್ಯ ಇದರ ಜಿಲ್ಲಾಧ್ಯಕ್ಷರ ಭೇಟಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಹರ್ಷಿತಾ ಪುರುಷೋತ್ತಮ್ ವಹಿಸಿದ್ದರು.
ಜಿಲ್ಲಾ 318ರ ಜಿಲ್ಲಾಧ್ಯಕ್ಷೆ ಅನುರಾಧ ನಂದಕುಮಾರ್ ಮಾತನಾಡಿ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ಚಿತ್ರಕಲೆಯಲ್ಲಿ ಸಾಧನೆ ಮಾಡಿದ ಕು. ಚಂದನಾ ಗೌಡರವರನ್ನು ಸನ್ಮಾನಿಸಿ, ವಿವಿಧ ಶಾಲೆಗಳಗೆ ಕೊಡುಗೆಗಳನ್ನು ನೀಡಲಾಯಿತು. ಈ ಸಂಧರ್ಭದಲ್ಲಿ ನೂತನ ಸದಸ್ಯರಾಗಿ ಡಾ. ತಾರಾ ನಂದನ್, ಡಾ. ಶ್ರಮಿಕಾ ಸೂಂತೋಡು, ಸವಿತಾ ನಾರ್ಕೋಡು, ಮಮತಾ ನಾರ್ಕೋಡು, ಸೌಮ್ಯಾ ಮಾಣಿಬೆಟ್ಟು ಮತ್ತು ಕೃಪಾ ದಿನೇಶ್ ರವರು ಕ್ಲಬ್ಗೆ ಸೇರ್ಪಡೆಗೊಂಡರು.
ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷೆ ಮಮತಾ ಸತೀಶ್, ಕಾರ್ಯದರ್ಶಿ ಜಯಮಣಿ ಮಾಧವ, ಖಜಾಂಜಿ ಪೂಜಾ ಸಂತೋಷ್, ಉಪಾಧ್ಯಕ್ಷೆ ವಿನುತಾ ಶೇಟ್, ಲಿಟ್ರೆಸಿ ಸಂಯೋಜಕಿ ಜಯಲಕ್ಷ್ಮೀ ಜೆ.ಕೆ. ರೈ, ಐ.ಎಸ್.ಒ. ಪ್ರಜ್ಞಾ ಮನುಜೇಶ್, ಜತೆ ಕಾರ್ಯದರ್ಶಿ ಸವಿತಾ ಸಿ.ಕೆ., ಸಂಪಾದಕಿ ಮಧುರಾ ಜಗದೀಶ್ ಉಪಸ್ಥಿತರಿದ್ದರು.
ಡಾ. ಹರ್ಷಿತಾ ಪುರುಷೋತ್ತಮ್ ಸ್ವಾಗತಿಸಿ, ಜಯಮಣಿ ಮಾಧವ್ ವರದಿ ವಾಚಿಸಿದರು. ವಿನುತಾ ಶೇಟ್ ವಂದಿಸಿ, ಶ್ರೀದೇವಿ ನಾಗರಾಜ್ ಹಾಗೂ ಆಶಿತಾ ಕೇಶವ್ ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…