ಇನ್ನೊಂದು ಚಂಡಮಾರುತದ ಸುಳಿವು ನೀಡಿದ ಕಡಲು

November 4, 2019
12:06 PM

ಮಂಗಳೂರು: ಎರಡು ಚಂಡಮಾರುತ ದಾಟಿ ಹೋಯಿತು. ಇದೀಗ ಇನ್ನೊಂದು ಚಂಡಮಾರುತ ಏಳುವ ಸೂಚನೆ ಇದೆ. ಕ್ಯಾರ್ ಬಳಿಕ ಮಹಾ ಚಂಡಮಾರುತ ಜೊತೆ ಜೊತೆಯಾಗಿಯೇ ಬಂದರೂ ಎಲ್ಲೂ ಭಾರೀ ಅಪಾಯವಾಗದೆ ದೂರವಾಗಿದೆ. ಈಗ ಮಹಾ ಚಂಡಮಾರುತವು ಗುಜರಾತ್ ಪ್ರದೇಶದಲ್ಲಿ  ಕಂಡುಬಂದರೆ ಕ್ಯಾರ್ ದುರ್ಬಲವಾಗುತ್ತಾ ಒಮನ್ ಪ್ರದೇಶದಲ್ಲಿ  ಹಾದು ಹೋಗಿದೆ.ಈಗ ಹಿಂದು ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುವ  ಸಾಧ್ಯತೆ ಇದೆ. ಈ ಹಿಂದೆಯೇ ಈ ಬಗ್ಗೆ ಹವಾಮಾನ ವರದಿಗಳು ಹೇಳಿದ್ದವು.

ಅರಬ್ಬೀ ಸಮುದ್ರದಲ್ಲಿ ಎರಡು ಚಂಡಮಾರುತಗಳು ಒಮ್ಮೆಲೇ ಕಾಣಿಸಿಕೊಂಡ  ಅಪರೂಪದ ಘಟನೆಗೆ ದೇಶ ಸಾಕ್ಷಿಯಾಯಿತು. ಕ್ಯಾರ್ ಹಾಗೂ ಮಹಾ ಚಂಡಮಾರುತ ಇದು.  54 ವರ್ಷಗಳ ಹಿಂದೆ ಅಂದರೆ 1965 ರಲ್ಲಿ ಇಂತಹ ವಿದ್ಯಮಾನ ಜರುಗಿತ್ತು.

‘ಮಹಾ’ ಗುಜರಾತ್‌ ಕಡೆಗೆ: ‘ಮಹಾ’ ಚಂಡಮಾರುತ ಗುಜರಾತ್‌ ಹಾಗೂ ಮಹಾರಾಷ್ಟ್ರ ಕಡೆಗೆ ಚಲಿಸಿದೆ. ಇದರಿಂದ ಆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಸೋಮವಾರ ಮಡಿಕೇರಿ, ಕಾಸರಗೋಡು, ಕಾರ್ಕಳ, ಹೊರನಾಡು ಸೇರಿದಂತೆ ವಿವಿದೆಡೆ ಮಳೆಯಾಗಬಹುದು. ಬೆಂಗಳೂರು ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಮಂಡ್ಯ ಸೇರಿದಂತೆ ಕೆಲವೆಡೆ ಮೋಡಕವಿದ ವಾತಾವರಣ ಕಂಡುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಗಾಲವೂ ಬೇಸಿಗೆಯಷ್ಟೇ ಅಪಾಯಕಾರಿ..? ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿದೆ ‘ಹೀಟ್‌ ಸ್ಟ್ರೆಸ್‌’ ಆತಂಕ
July 12, 2026
8:12 AM
by: ದ ರೂರಲ್ ಮಿರರ್.ಕಾಂ
FSSAI ‘Unsafe’ ಟ್ಯಾಗ್ ಇದ್ದರೂ ಅಡಿಕೆ ಬಿಡುಗಡೆಗೆ ಅವಕಾಶ – ಕಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶ
July 12, 2026
7:55 AM
by: ದ ರೂರಲ್ ಮಿರರ್.ಕಾಂ
ಚೀನಾದತ್ತ ಸಾಗುವ ಬಾವಿ ಚಂಡಮಾರುತ ದುರ್ಬಲ – 18 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ, ಭಾರೀ ಮಳೆ-ಪ್ರವಾಹದ ಎಚ್ಚರಿಕೆ
July 11, 2026
9:56 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-06-2026 | ಕರಾವಳಿ, ಮಲೆನಾಡಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಉಳಿದ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ
July 11, 2026
2:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror