ಇನ್ನೊಂದು ಚಂಡಮಾರುತದ ಸುಳಿವು ನೀಡಿದ ಕಡಲು

November 4, 2019
12:06 PM

ಮಂಗಳೂರು: ಎರಡು ಚಂಡಮಾರುತ ದಾಟಿ ಹೋಯಿತು. ಇದೀಗ ಇನ್ನೊಂದು ಚಂಡಮಾರುತ ಏಳುವ ಸೂಚನೆ ಇದೆ. ಕ್ಯಾರ್ ಬಳಿಕ ಮಹಾ ಚಂಡಮಾರುತ ಜೊತೆ ಜೊತೆಯಾಗಿಯೇ ಬಂದರೂ ಎಲ್ಲೂ ಭಾರೀ ಅಪಾಯವಾಗದೆ ದೂರವಾಗಿದೆ. ಈಗ ಮಹಾ ಚಂಡಮಾರುತವು ಗುಜರಾತ್ ಪ್ರದೇಶದಲ್ಲಿ  ಕಂಡುಬಂದರೆ ಕ್ಯಾರ್ ದುರ್ಬಲವಾಗುತ್ತಾ ಒಮನ್ ಪ್ರದೇಶದಲ್ಲಿ  ಹಾದು ಹೋಗಿದೆ.ಈಗ ಹಿಂದು ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುವ  ಸಾಧ್ಯತೆ ಇದೆ. ಈ ಹಿಂದೆಯೇ ಈ ಬಗ್ಗೆ ಹವಾಮಾನ ವರದಿಗಳು ಹೇಳಿದ್ದವು.

ಅರಬ್ಬೀ ಸಮುದ್ರದಲ್ಲಿ ಎರಡು ಚಂಡಮಾರುತಗಳು ಒಮ್ಮೆಲೇ ಕಾಣಿಸಿಕೊಂಡ  ಅಪರೂಪದ ಘಟನೆಗೆ ದೇಶ ಸಾಕ್ಷಿಯಾಯಿತು. ಕ್ಯಾರ್ ಹಾಗೂ ಮಹಾ ಚಂಡಮಾರುತ ಇದು.  54 ವರ್ಷಗಳ ಹಿಂದೆ ಅಂದರೆ 1965 ರಲ್ಲಿ ಇಂತಹ ವಿದ್ಯಮಾನ ಜರುಗಿತ್ತು.

‘ಮಹಾ’ ಗುಜರಾತ್‌ ಕಡೆಗೆ: ‘ಮಹಾ’ ಚಂಡಮಾರುತ ಗುಜರಾತ್‌ ಹಾಗೂ ಮಹಾರಾಷ್ಟ್ರ ಕಡೆಗೆ ಚಲಿಸಿದೆ. ಇದರಿಂದ ಆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಸೋಮವಾರ ಮಡಿಕೇರಿ, ಕಾಸರಗೋಡು, ಕಾರ್ಕಳ, ಹೊರನಾಡು ಸೇರಿದಂತೆ ವಿವಿದೆಡೆ ಮಳೆಯಾಗಬಹುದು. ಬೆಂಗಳೂರು ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಮಂಡ್ಯ ಸೇರಿದಂತೆ ಕೆಲವೆಡೆ ಮೋಡಕವಿದ ವಾತಾವರಣ ಕಂಡುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!
June 18, 2026
10:15 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror