Advertisement
ಸುದ್ದಿಗಳು

ಇನ್ನೊಂದು ಚಂಡಮಾರುತದ ಸುಳಿವು ನೀಡಿದ ಕಡಲು

Share

ಮಂಗಳೂರು: ಎರಡು ಚಂಡಮಾರುತ ದಾಟಿ ಹೋಯಿತು. ಇದೀಗ ಇನ್ನೊಂದು ಚಂಡಮಾರುತ ಏಳುವ ಸೂಚನೆ ಇದೆ. ಕ್ಯಾರ್ ಬಳಿಕ ಮಹಾ ಚಂಡಮಾರುತ ಜೊತೆ ಜೊತೆಯಾಗಿಯೇ ಬಂದರೂ ಎಲ್ಲೂ ಭಾರೀ ಅಪಾಯವಾಗದೆ ದೂರವಾಗಿದೆ. ಈಗ ಮಹಾ ಚಂಡಮಾರುತವು ಗುಜರಾತ್ ಪ್ರದೇಶದಲ್ಲಿ  ಕಂಡುಬಂದರೆ ಕ್ಯಾರ್ ದುರ್ಬಲವಾಗುತ್ತಾ ಒಮನ್ ಪ್ರದೇಶದಲ್ಲಿ  ಹಾದು ಹೋಗಿದೆ.ಈಗ ಹಿಂದು ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುವ  ಸಾಧ್ಯತೆ ಇದೆ. ಈ ಹಿಂದೆಯೇ ಈ ಬಗ್ಗೆ ಹವಾಮಾನ ವರದಿಗಳು ಹೇಳಿದ್ದವು.

ಅರಬ್ಬೀ ಸಮುದ್ರದಲ್ಲಿ ಎರಡು ಚಂಡಮಾರುತಗಳು ಒಮ್ಮೆಲೇ ಕಾಣಿಸಿಕೊಂಡ  ಅಪರೂಪದ ಘಟನೆಗೆ ದೇಶ ಸಾಕ್ಷಿಯಾಯಿತು. ಕ್ಯಾರ್ ಹಾಗೂ ಮಹಾ ಚಂಡಮಾರುತ ಇದು.  54 ವರ್ಷಗಳ ಹಿಂದೆ ಅಂದರೆ 1965 ರಲ್ಲಿ ಇಂತಹ ವಿದ್ಯಮಾನ ಜರುಗಿತ್ತು.

‘ಮಹಾ’ ಗುಜರಾತ್‌ ಕಡೆಗೆ: ‘ಮಹಾ’ ಚಂಡಮಾರುತ ಗುಜರಾತ್‌ ಹಾಗೂ ಮಹಾರಾಷ್ಟ್ರ ಕಡೆಗೆ ಚಲಿಸಿದೆ. ಇದರಿಂದ ಆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಸೋಮವಾರ ಮಡಿಕೇರಿ, ಕಾಸರಗೋಡು, ಕಾರ್ಕಳ, ಹೊರನಾಡು ಸೇರಿದಂತೆ ವಿವಿದೆಡೆ ಮಳೆಯಾಗಬಹುದು. ಬೆಂಗಳೂರು ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಮಂಡ್ಯ ಸೇರಿದಂತೆ ಕೆಲವೆಡೆ ಮೋಡಕವಿದ ವಾತಾವರಣ ಕಂಡುಬಂದಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

58 minutes ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

7 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

11 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

19 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

19 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

21 hours ago