Advertisement
ಸುದ್ದಿಗಳು

ಇನ್ನೊಂದು ಚಂಡಮಾರುತದ ಸುಳಿವು ನೀಡಿದ ಕಡಲು

Share

ಮಂಗಳೂರು: ಎರಡು ಚಂಡಮಾರುತ ದಾಟಿ ಹೋಯಿತು. ಇದೀಗ ಇನ್ನೊಂದು ಚಂಡಮಾರುತ ಏಳುವ ಸೂಚನೆ ಇದೆ. ಕ್ಯಾರ್ ಬಳಿಕ ಮಹಾ ಚಂಡಮಾರುತ ಜೊತೆ ಜೊತೆಯಾಗಿಯೇ ಬಂದರೂ ಎಲ್ಲೂ ಭಾರೀ ಅಪಾಯವಾಗದೆ ದೂರವಾಗಿದೆ. ಈಗ ಮಹಾ ಚಂಡಮಾರುತವು ಗುಜರಾತ್ ಪ್ರದೇಶದಲ್ಲಿ  ಕಂಡುಬಂದರೆ ಕ್ಯಾರ್ ದುರ್ಬಲವಾಗುತ್ತಾ ಒಮನ್ ಪ್ರದೇಶದಲ್ಲಿ  ಹಾದು ಹೋಗಿದೆ.ಈಗ ಹಿಂದು ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುವ  ಸಾಧ್ಯತೆ ಇದೆ. ಈ ಹಿಂದೆಯೇ ಈ ಬಗ್ಗೆ ಹವಾಮಾನ ವರದಿಗಳು ಹೇಳಿದ್ದವು.

ಅರಬ್ಬೀ ಸಮುದ್ರದಲ್ಲಿ ಎರಡು ಚಂಡಮಾರುತಗಳು ಒಮ್ಮೆಲೇ ಕಾಣಿಸಿಕೊಂಡ  ಅಪರೂಪದ ಘಟನೆಗೆ ದೇಶ ಸಾಕ್ಷಿಯಾಯಿತು. ಕ್ಯಾರ್ ಹಾಗೂ ಮಹಾ ಚಂಡಮಾರುತ ಇದು.  54 ವರ್ಷಗಳ ಹಿಂದೆ ಅಂದರೆ 1965 ರಲ್ಲಿ ಇಂತಹ ವಿದ್ಯಮಾನ ಜರುಗಿತ್ತು.

‘ಮಹಾ’ ಗುಜರಾತ್‌ ಕಡೆಗೆ: ‘ಮಹಾ’ ಚಂಡಮಾರುತ ಗುಜರಾತ್‌ ಹಾಗೂ ಮಹಾರಾಷ್ಟ್ರ ಕಡೆಗೆ ಚಲಿಸಿದೆ. ಇದರಿಂದ ಆ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಸೋಮವಾರ ಮಡಿಕೇರಿ, ಕಾಸರಗೋಡು, ಕಾರ್ಕಳ, ಹೊರನಾಡು ಸೇರಿದಂತೆ ವಿವಿದೆಡೆ ಮಳೆಯಾಗಬಹುದು. ಬೆಂಗಳೂರು ನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ, ಮಂಡ್ಯ ಸೇರಿದಂತೆ ಕೆಲವೆಡೆ ಮೋಡಕವಿದ ವಾತಾವರಣ ಕಂಡುಬಂದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 hour ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

8 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

16 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

17 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago