ಸುಳ್ಯ: ಡಿ 29 ಇಬ್ಬನಿ ಸುಳ್ಯ ಸಾದರ ಪಡಿಸಿರುವ ಇಬ್ಬನಿ ಇಯರ್ ಎಂಡ್ ಟ್ರೋಫಿ ಸೀಸನ್ 2ರ ಅಂಡರ್ ಆರ್ಮ್ ಕ್ರಿಕೆಟ್ ಲೀಗ್ ಪಂದ್ಯಾಕೂಟ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಮೈದಾನದಲ್ಲಿ ಜರಗಿತು.
ಸುಳ್ಯ ವಿಧಾನ ಸಭಾ ವ್ಯಾಪ್ತಿಯ 96 ಆಟಗಾರರನ್ನು ಆಯ್ಕೆ ಮಾಡಿ ಐಪಿಯಲ್ ಮಾದರಿಯಲ್ಲಿ ಹರಾಜು ಮಾಡಿ 8 ಮಾಲಕರಿಗೆ ನೀಡಲಾಗಿತ್ತು. ಈ ಒಂದು ಪಂದ್ಯಾಕೂಟದಲ್ಲಿ ಬಿ.ಎಂ ರಫೀಕ್ ಮಾಲಿಕತ್ವದ ಬಿ.ಎಂ.ಎ ಚಾಲೆಂಜರ್ಸ್ ತಂಡವು 2019ರ ಇಬ್ಬನಿ ಇಯರ್ ಎಂಡ್ ಟ್ರೋಫಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ದ್ವಿತೀಯ ಸ್ಥಾನವನ್ನು ರಝಾಕ್ ಕೆ.ಎಂ ಮಾಲಿಕತ್ವದ ಫ್ರೆಂಡ್ಸ್ ಜಟ್ಟಿಪಳ್ಳ ತಂಡವು ತೃಪ್ತಿಪಟ್ಟುಕೊಂಡಿದೆ.
ಪಂದ್ಯಾಕೂಟದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಜಯಿಸಿದ ಕ್ರೀಡಾಪಟು ಸಂಶೀರ್ ಸುಳ್ಯ ಅವರು ಗಣ್ಯ ಆತಿಥಿಗಳಾಗಿ ವೇದಿಕೆಗೆ ಮೆರುಗು ನೀಡಿದರು. ಈ ಪಂದ್ಯಾಕೂಟದಲ್ಲಿ ರಾಮಚಂದ್ರ ಪೆಲ್ತಡ್ಕ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನವೀನ್ ಕುಮಾರ್ ಕಜೆ, ಅಬ್ದುಲ್ ಕಲಾಂ ಸುಳ್ಯ, ರಷೀದ್ ಜಟ್ಟಿಪಳ್ಳ, ತಾಜ್ ಅಬೂಬಕ್ಕರ್ ಜನಪ್ರಿಯ, ಶರೀಫ್ ಜಟ್ಟಿಪಳ್ಳ, ಫೈಝಲ್ ಕಟ್ಟೆಕ್ಕಾರ್, ಹಂಝ ಕಾತೂನ್ , ಶಿಹಾಬ್ ಷಾ ಜಟ್ಟಿಪಳ್ಳ, ಉಪಸ್ಥಿತರಿದ್ದರು ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ ಸ್ವಾಗತಿಸಿ ವಂಧಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…