Advertisement
MIRROR FOCUS

ಒಬ್ಬರಿಗೊಂದೇ “ಆಧಾರ್” – ಇಲ್ಲಿ ಇಬ್ಬರಿಗೊಂದೇ “ಆಧಾರ”…! : ಅಲೆದಾಡಿದ ಈ ಮಹಿಳೆಯರಿಗೆ ಪರಿಹಾರವೂ ದೂರ…!

Share

ಸುಳ್ಯ: ಒಬ್ಬರಿಗೊಂದೇ ಆಧಾರ . ದೇಶಕ್ಕೊಂದು ಆಧಾರ್, ವ್ಯಕ್ತಿಗೊಂದು ಆಧಾರ್ ನಂಬರ್…!.  ಹೀಗಾಗಿ ಈಗ ಎಲ್ಲಾ ದಾಖಲೆಗಳಿಗೂ ಆಧಾರ್ ಲಿಂಕ್. ಒಂದರ್ಥದಲ್ಲಿ ಬದುಕಿಗೇ ಆಧಾರ್ ಲಿಂಕ್..!. ಈ ಲಿಂಕ್.. ಲಿಂಕ್.. ಮಾಡಿ ಜನಸಾಮಾನ್ಯರು ಸುಲಭದ ಹಾದಿಯಲ್ಲಿದ್ದಾರೆ. ಕೆಲವರಿಗೆ ಆಧಾರ್ ಲಿಂಕ್ ಮಾಡುವುದಕ್ಕೂ ಆಧಾರ ಇಲ್ಲವಾಗಿದೆ. ಅವರಿಗೆ ಸಂಕಷ್ಟ ತಪ್ಪಿಲ್ಲ. ಈಗ ಲಿಂಕೂ ಇಲ್ಲ… ಕನೆಕ್ಟೂ ಇಲ್ಲ..! ಈ ಹಂತದಲ್ಲಿದ್ದಾರೆ ಇಬ್ಬರು ಬಡ ಮಹಿಳೆಯರು. ಇವರ ಸಮಸ್ಯೆ ಹೀಗಿದೆ… ಸಾಧ್ಯವಾದರೆ ಪರಿಹಾರ ಮಾಡಿಸಿಕೊಡಿ ಅಂತ ದು:ಖ ತೋಡುತ್ತಾರೆ.ಅಚ್ಚರಿ ಎಂದರೆ ಇವರು ಅತ್ತೆ-ಸೊಸೆ. ಹೀಗಾಗಿ ಅತ್ತೆ-ಸೊಸೆಗೊಂದೇ ಆಧಾರ್…!

Advertisement
Advertisement

ಅವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ನಿವಾಸಿಗಳು. ಅವರಿಬ್ಬರೂ ಅತ್ತೆ-ಸೊಸೆ. ಈಗ ಒಂದೇ ಮನೆಯಲ್ಲಿದ್ದಾರೆ. ಅಚ್ಚರಿ ಎಂದರೆ ಇವರಿಗೆ  ಆಧಾರ್ ನಂಬರೂ ಒಂದೇ…!. ಹಿಂದೆ ತಿಳಿದಿರಲಿಲ್ಲ. ಈ ಬಗ್ಗೆ ಗಮನಿಸಲೂ ಇಲ್ಲ. ಪ್ರತೀ ವ್ಯಕ್ತಿಗೆ ಬೇರೆ ಬೇರೆ ಆಧಾರ್ ನಂಬರ್ ಎಂಬ ಅರಿವು ಇರಲಿಲ್ಲ. ಈಚೆಗೆ  ಯಾವುದೋ ಸೌಲಭ್ಯಕ್ಕೆ ಹೋದಾಗ, ರೇಶನ್ ಪಡೆಯುವುದಕ್ಕೆ ಹೋದಾಗ ತಿಳಿದಿದೆ. ಈಗ ಸಮಸ್ಯೆಯಾಗಿದೆ.  ಸಮಸ್ಯೆ ತಿಳಿದ ಬಳಿಕ ಇಬ್ಬರೂ ಮಹಿಳೆಯರೂ ಕಚೇರಿಗಳಿಗೆ, ಆಧಾರ್ ಕೇಂದ್ರಗಳಿಗೆ ಅಲೆದಾಡಿದ್ದು 6 ಬಾರಿ..! ಇಂದಿಗೂ ಸರಿಯಾಗಿಲ್ಲ.  ಈ ಮಹಿಳೆಯರಲ್ಲಿ ಒಬ್ಬರು 70 ವರ್ಷ ಮೇಲ್ಪಟ್ಟವರು, ಇನ್ನೊಬ್ಬರು 50 ವರ್ಷ ಮೇಲ್ಪಟ್ಟವರು. ಒಬ್ಬರ ಹೆಸರು ಕೆಂಚಮ್ಮ ಇನ್ನೊಬ್ಬರ ಹೆಸರು ಹೊನ್ನಮ್ಮ. ಮಹಿಳೆಯರ ಮನೆಯವರು ಪ್ರಯತ್ನ ಮಾಡಿದರು. ಎಲ್ಲಾ ಸರಿ ಮಾಡಿಸಿ ಮನೆಗೆ ಬಂದ ಬಳಿಕ  ಮತ್ತೆ ಅದೇ ಆಧಾರ್ ನಂಬರ್ ಇರುವ ಕಾರ್ಡ್ ಅಂಚೆ ಮೂಲಕ ಬರುತ್ತದೆ…!    ಈಗ ಸಾಕಾಗಿ ಹೋಗಿದೆ ಎಂದು ದು:ಖ ತೋಡುತ್ತಾರೆ. ಈಗ ಸಮೀಪದಲ್ಲಿ ಆಧಾರ್ ಕೇಂದ್ರವೂ ಇಲ್ಲ. ದೂರದ ಕಡೆಗೆ ತೆರಳಲು ಇವರಿಗೇ ಒಬ್ಬರು ಆಧಾರ ಕ್ಕೆ ಜನ ಬೇಕು. ಎಷ್ಟು ಬಾರಿ ಅಂತ ಬರುವುದು ನಿಮಗೆ ಆಧಾರಕ್ಕೆ ಅಂತ ಕೇಳಿದರೆ ಎಂದು ಮಹಿಳೆಯರು ಹೇಳುತ್ತಾರೆ.

ಹೀಗಾಗಿ ಈಗ ಸಮಸ್ಯೆಯ ಮಾತುಗಳ ಬದಲಾಗಿ ಈ ಮಹಿಳೆಯರಿಗೆ ಆಧಾರ್ ಪರಿಹಾರದ ಬಗ್ಗೆ ಸಲಹೆಗಳು ಬೇಕಾಗಿದೆ. ಇಲಾಖೆಗಳು ಈ ಮಹಿಳೆಯರಿಗೆ ಪ್ರತ್ಯೇಕ ಅವಕಾಶ ನೀಡಿ ಆಧಾರ್ ಕಾರ್ಡ್ ವ್ಯವಸ್ಥೆ ಮಾಡಿಸಿ ಕೊಡಬೇಕಾಗಿದೆ.  ಇಲಾಖೆಗಳ ವ್ಯವಸ್ಥೆ ಈ ಬಡ  ಮಹಿಳೆಯರಿಗೆ ಗೊತ್ತಿಲ್ಲ, ಒಂದಲ್ಲ ಹಲವು ಬಾರಿ ಹೋಗಿದ್ದಾರೆ, ತಕ್ಷಣ ಪರಿಹಾರ ಬೇಕಾಗಿದೆ. ಅಧಿಕಾರಿಗಳು ಮಾಡಿಸಿಕೊಡುವರೇ ?

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

6 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago