MIRROR FOCUS

ಒಬ್ಬರಿಗೊಂದೇ “ಆಧಾರ್” – ಇಲ್ಲಿ ಇಬ್ಬರಿಗೊಂದೇ “ಆಧಾರ”…! : ಅಲೆದಾಡಿದ ಈ ಮಹಿಳೆಯರಿಗೆ ಪರಿಹಾರವೂ ದೂರ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಒಬ್ಬರಿಗೊಂದೇ ಆಧಾರ . ದೇಶಕ್ಕೊಂದು ಆಧಾರ್, ವ್ಯಕ್ತಿಗೊಂದು ಆಧಾರ್ ನಂಬರ್…!.  ಹೀಗಾಗಿ ಈಗ ಎಲ್ಲಾ ದಾಖಲೆಗಳಿಗೂ ಆಧಾರ್ ಲಿಂಕ್. ಒಂದರ್ಥದಲ್ಲಿ ಬದುಕಿಗೇ ಆಧಾರ್ ಲಿಂಕ್..!. ಈ ಲಿಂಕ್.. ಲಿಂಕ್.. ಮಾಡಿ ಜನಸಾಮಾನ್ಯರು ಸುಲಭದ ಹಾದಿಯಲ್ಲಿದ್ದಾರೆ. ಕೆಲವರಿಗೆ ಆಧಾರ್ ಲಿಂಕ್ ಮಾಡುವುದಕ್ಕೂ ಆಧಾರ ಇಲ್ಲವಾಗಿದೆ. ಅವರಿಗೆ ಸಂಕಷ್ಟ ತಪ್ಪಿಲ್ಲ. ಈಗ ಲಿಂಕೂ ಇಲ್ಲ… ಕನೆಕ್ಟೂ ಇಲ್ಲ..! ಈ ಹಂತದಲ್ಲಿದ್ದಾರೆ ಇಬ್ಬರು ಬಡ ಮಹಿಳೆಯರು. ಇವರ ಸಮಸ್ಯೆ ಹೀಗಿದೆ… ಸಾಧ್ಯವಾದರೆ ಪರಿಹಾರ ಮಾಡಿಸಿಕೊಡಿ ಅಂತ ದು:ಖ ತೋಡುತ್ತಾರೆ.ಅಚ್ಚರಿ ಎಂದರೆ ಇವರು ಅತ್ತೆ-ಸೊಸೆ. ಹೀಗಾಗಿ ಅತ್ತೆ-ಸೊಸೆಗೊಂದೇ ಆಧಾರ್…!

Advertisement
Advertisement

ಅವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ನಿವಾಸಿಗಳು. ಅವರಿಬ್ಬರೂ ಅತ್ತೆ-ಸೊಸೆ. ಈಗ ಒಂದೇ ಮನೆಯಲ್ಲಿದ್ದಾರೆ. ಅಚ್ಚರಿ ಎಂದರೆ ಇವರಿಗೆ  ಆಧಾರ್ ನಂಬರೂ ಒಂದೇ…!. ಹಿಂದೆ ತಿಳಿದಿರಲಿಲ್ಲ. ಈ ಬಗ್ಗೆ ಗಮನಿಸಲೂ ಇಲ್ಲ. ಪ್ರತೀ ವ್ಯಕ್ತಿಗೆ ಬೇರೆ ಬೇರೆ ಆಧಾರ್ ನಂಬರ್ ಎಂಬ ಅರಿವು ಇರಲಿಲ್ಲ. ಈಚೆಗೆ  ಯಾವುದೋ ಸೌಲಭ್ಯಕ್ಕೆ ಹೋದಾಗ, ರೇಶನ್ ಪಡೆಯುವುದಕ್ಕೆ ಹೋದಾಗ ತಿಳಿದಿದೆ. ಈಗ ಸಮಸ್ಯೆಯಾಗಿದೆ.  ಸಮಸ್ಯೆ ತಿಳಿದ ಬಳಿಕ ಇಬ್ಬರೂ ಮಹಿಳೆಯರೂ ಕಚೇರಿಗಳಿಗೆ, ಆಧಾರ್ ಕೇಂದ್ರಗಳಿಗೆ ಅಲೆದಾಡಿದ್ದು 6 ಬಾರಿ..! ಇಂದಿಗೂ ಸರಿಯಾಗಿಲ್ಲ.  ಈ ಮಹಿಳೆಯರಲ್ಲಿ ಒಬ್ಬರು 70 ವರ್ಷ ಮೇಲ್ಪಟ್ಟವರು, ಇನ್ನೊಬ್ಬರು 50 ವರ್ಷ ಮೇಲ್ಪಟ್ಟವರು. ಒಬ್ಬರ ಹೆಸರು ಕೆಂಚಮ್ಮ ಇನ್ನೊಬ್ಬರ ಹೆಸರು ಹೊನ್ನಮ್ಮ. ಮಹಿಳೆಯರ ಮನೆಯವರು ಪ್ರಯತ್ನ ಮಾಡಿದರು. ಎಲ್ಲಾ ಸರಿ ಮಾಡಿಸಿ ಮನೆಗೆ ಬಂದ ಬಳಿಕ  ಮತ್ತೆ ಅದೇ ಆಧಾರ್ ನಂಬರ್ ಇರುವ ಕಾರ್ಡ್ ಅಂಚೆ ಮೂಲಕ ಬರುತ್ತದೆ…!    ಈಗ ಸಾಕಾಗಿ ಹೋಗಿದೆ ಎಂದು ದು:ಖ ತೋಡುತ್ತಾರೆ. ಈಗ ಸಮೀಪದಲ್ಲಿ ಆಧಾರ್ ಕೇಂದ್ರವೂ ಇಲ್ಲ. ದೂರದ ಕಡೆಗೆ ತೆರಳಲು ಇವರಿಗೇ ಒಬ್ಬರು ಆಧಾರ ಕ್ಕೆ ಜನ ಬೇಕು. ಎಷ್ಟು ಬಾರಿ ಅಂತ ಬರುವುದು ನಿಮಗೆ ಆಧಾರಕ್ಕೆ ಅಂತ ಕೇಳಿದರೆ ಎಂದು ಮಹಿಳೆಯರು ಹೇಳುತ್ತಾರೆ.

ಹೀಗಾಗಿ ಈಗ ಸಮಸ್ಯೆಯ ಮಾತುಗಳ ಬದಲಾಗಿ ಈ ಮಹಿಳೆಯರಿಗೆ ಆಧಾರ್ ಪರಿಹಾರದ ಬಗ್ಗೆ ಸಲಹೆಗಳು ಬೇಕಾಗಿದೆ. ಇಲಾಖೆಗಳು ಈ ಮಹಿಳೆಯರಿಗೆ ಪ್ರತ್ಯೇಕ ಅವಕಾಶ ನೀಡಿ ಆಧಾರ್ ಕಾರ್ಡ್ ವ್ಯವಸ್ಥೆ ಮಾಡಿಸಿ ಕೊಡಬೇಕಾಗಿದೆ.  ಇಲಾಖೆಗಳ ವ್ಯವಸ್ಥೆ ಈ ಬಡ  ಮಹಿಳೆಯರಿಗೆ ಗೊತ್ತಿಲ್ಲ, ಒಂದಲ್ಲ ಹಲವು ಬಾರಿ ಹೋಗಿದ್ದಾರೆ, ತಕ್ಷಣ ಪರಿಹಾರ ಬೇಕಾಗಿದೆ. ಅಧಿಕಾರಿಗಳು ಮಾಡಿಸಿಕೊಡುವರೇ ?

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

3 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

10 hours ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

11 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

18 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

19 hours ago