Advertisement
MIRROR FOCUS

ಒಬ್ಬರಿಗೊಂದೇ “ಆಧಾರ್” – ಇಲ್ಲಿ ಇಬ್ಬರಿಗೊಂದೇ “ಆಧಾರ”…! : ಅಲೆದಾಡಿದ ಈ ಮಹಿಳೆಯರಿಗೆ ಪರಿಹಾರವೂ ದೂರ…!

Share

ಸುಳ್ಯ: ಒಬ್ಬರಿಗೊಂದೇ ಆಧಾರ . ದೇಶಕ್ಕೊಂದು ಆಧಾರ್, ವ್ಯಕ್ತಿಗೊಂದು ಆಧಾರ್ ನಂಬರ್…!.  ಹೀಗಾಗಿ ಈಗ ಎಲ್ಲಾ ದಾಖಲೆಗಳಿಗೂ ಆಧಾರ್ ಲಿಂಕ್. ಒಂದರ್ಥದಲ್ಲಿ ಬದುಕಿಗೇ ಆಧಾರ್ ಲಿಂಕ್..!. ಈ ಲಿಂಕ್.. ಲಿಂಕ್.. ಮಾಡಿ ಜನಸಾಮಾನ್ಯರು ಸುಲಭದ ಹಾದಿಯಲ್ಲಿದ್ದಾರೆ. ಕೆಲವರಿಗೆ ಆಧಾರ್ ಲಿಂಕ್ ಮಾಡುವುದಕ್ಕೂ ಆಧಾರ ಇಲ್ಲವಾಗಿದೆ. ಅವರಿಗೆ ಸಂಕಷ್ಟ ತಪ್ಪಿಲ್ಲ. ಈಗ ಲಿಂಕೂ ಇಲ್ಲ… ಕನೆಕ್ಟೂ ಇಲ್ಲ..! ಈ ಹಂತದಲ್ಲಿದ್ದಾರೆ ಇಬ್ಬರು ಬಡ ಮಹಿಳೆಯರು. ಇವರ ಸಮಸ್ಯೆ ಹೀಗಿದೆ… ಸಾಧ್ಯವಾದರೆ ಪರಿಹಾರ ಮಾಡಿಸಿಕೊಡಿ ಅಂತ ದು:ಖ ತೋಡುತ್ತಾರೆ.ಅಚ್ಚರಿ ಎಂದರೆ ಇವರು ಅತ್ತೆ-ಸೊಸೆ. ಹೀಗಾಗಿ ಅತ್ತೆ-ಸೊಸೆಗೊಂದೇ ಆಧಾರ್…!

ಅವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ನಿವಾಸಿಗಳು. ಅವರಿಬ್ಬರೂ ಅತ್ತೆ-ಸೊಸೆ. ಈಗ ಒಂದೇ ಮನೆಯಲ್ಲಿದ್ದಾರೆ. ಅಚ್ಚರಿ ಎಂದರೆ ಇವರಿಗೆ  ಆಧಾರ್ ನಂಬರೂ ಒಂದೇ…!. ಹಿಂದೆ ತಿಳಿದಿರಲಿಲ್ಲ. ಈ ಬಗ್ಗೆ ಗಮನಿಸಲೂ ಇಲ್ಲ. ಪ್ರತೀ ವ್ಯಕ್ತಿಗೆ ಬೇರೆ ಬೇರೆ ಆಧಾರ್ ನಂಬರ್ ಎಂಬ ಅರಿವು ಇರಲಿಲ್ಲ. ಈಚೆಗೆ  ಯಾವುದೋ ಸೌಲಭ್ಯಕ್ಕೆ ಹೋದಾಗ, ರೇಶನ್ ಪಡೆಯುವುದಕ್ಕೆ ಹೋದಾಗ ತಿಳಿದಿದೆ. ಈಗ ಸಮಸ್ಯೆಯಾಗಿದೆ.  ಸಮಸ್ಯೆ ತಿಳಿದ ಬಳಿಕ ಇಬ್ಬರೂ ಮಹಿಳೆಯರೂ ಕಚೇರಿಗಳಿಗೆ, ಆಧಾರ್ ಕೇಂದ್ರಗಳಿಗೆ ಅಲೆದಾಡಿದ್ದು 6 ಬಾರಿ..! ಇಂದಿಗೂ ಸರಿಯಾಗಿಲ್ಲ.  ಈ ಮಹಿಳೆಯರಲ್ಲಿ ಒಬ್ಬರು 70 ವರ್ಷ ಮೇಲ್ಪಟ್ಟವರು, ಇನ್ನೊಬ್ಬರು 50 ವರ್ಷ ಮೇಲ್ಪಟ್ಟವರು. ಒಬ್ಬರ ಹೆಸರು ಕೆಂಚಮ್ಮ ಇನ್ನೊಬ್ಬರ ಹೆಸರು ಹೊನ್ನಮ್ಮ. ಮಹಿಳೆಯರ ಮನೆಯವರು ಪ್ರಯತ್ನ ಮಾಡಿದರು. ಎಲ್ಲಾ ಸರಿ ಮಾಡಿಸಿ ಮನೆಗೆ ಬಂದ ಬಳಿಕ  ಮತ್ತೆ ಅದೇ ಆಧಾರ್ ನಂಬರ್ ಇರುವ ಕಾರ್ಡ್ ಅಂಚೆ ಮೂಲಕ ಬರುತ್ತದೆ…!    ಈಗ ಸಾಕಾಗಿ ಹೋಗಿದೆ ಎಂದು ದು:ಖ ತೋಡುತ್ತಾರೆ. ಈಗ ಸಮೀಪದಲ್ಲಿ ಆಧಾರ್ ಕೇಂದ್ರವೂ ಇಲ್ಲ. ದೂರದ ಕಡೆಗೆ ತೆರಳಲು ಇವರಿಗೇ ಒಬ್ಬರು ಆಧಾರ ಕ್ಕೆ ಜನ ಬೇಕು. ಎಷ್ಟು ಬಾರಿ ಅಂತ ಬರುವುದು ನಿಮಗೆ ಆಧಾರಕ್ಕೆ ಅಂತ ಕೇಳಿದರೆ ಎಂದು ಮಹಿಳೆಯರು ಹೇಳುತ್ತಾರೆ.

ಹೀಗಾಗಿ ಈಗ ಸಮಸ್ಯೆಯ ಮಾತುಗಳ ಬದಲಾಗಿ ಈ ಮಹಿಳೆಯರಿಗೆ ಆಧಾರ್ ಪರಿಹಾರದ ಬಗ್ಗೆ ಸಲಹೆಗಳು ಬೇಕಾಗಿದೆ. ಇಲಾಖೆಗಳು ಈ ಮಹಿಳೆಯರಿಗೆ ಪ್ರತ್ಯೇಕ ಅವಕಾಶ ನೀಡಿ ಆಧಾರ್ ಕಾರ್ಡ್ ವ್ಯವಸ್ಥೆ ಮಾಡಿಸಿ ಕೊಡಬೇಕಾಗಿದೆ.  ಇಲಾಖೆಗಳ ವ್ಯವಸ್ಥೆ ಈ ಬಡ  ಮಹಿಳೆಯರಿಗೆ ಗೊತ್ತಿಲ್ಲ, ಒಂದಲ್ಲ ಹಲವು ಬಾರಿ ಹೋಗಿದ್ದಾರೆ, ತಕ್ಷಣ ಪರಿಹಾರ ಬೇಕಾಗಿದೆ. ಅಧಿಕಾರಿಗಳು ಮಾಡಿಸಿಕೊಡುವರೇ ?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

10 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

11 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

11 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

17 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

19 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

19 hours ago