ಸುಳ್ಯ: ದ.ಕ.ಜಿಲ್ಲಾ ಪಂಚಯತ್ ಕೃಷಿ ಇಲಾಖೆ ವತಿಯಿಂದ ಕೃಷಿ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಮಾಹಿತಿಯನ್ನು ಕೃಷಿಕರಿಗೆ ತಿಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಆರಂಭಗೊಂಡಿದೆ.
ಸುಳ್ಯ ಹೋಬಳಿಯ ಅಭಿಯಾನಕ್ಕೆ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಸಕ ಎಸ್.ಅಂಗಾರ ಚಾಲನೆ ನೀಡಿದರು. ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷ ತೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಪುಷ್ಪಾವತಿ ಬಾಳಿಲ, ಎ.ಪಿ.ಎಂ.ಸಿ. ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ಕೃಷಿಕ ಸಮಾಜದ ಅಧ್ಯಕ್ಷ ಅಡ್ಡಂತ್ತಡ್ಕ ದೇರಣ್ಣ ಗೌಡ ಉಪಸ್ಥಿತರಿದ್ದರು. ಸಹಾಯಕ ಕೃಷಿ ನಿರ್ದೇಶಕ ಕೆ.ಜಿ.ಪಾಲಿಚಂದ್ರ ಸ್ವಾಗತಿಸಿ, ತಾಂತ್ರಿಕ ಕೃಷಿ ಅಧಿಕಾರಿ ಮೋಹನ್ ನಂಗಾರು ವಂದಿಸಿದರು. ವೀರಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು.
ಸುಳ್ಯ ಹೋಬಳಿಯ ಕೃಷಿ ಅಭಿಯನವು 26 ರವರೆಗೆ ನಡೆಯಲಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…