Advertisement
The Rural Mirror ಫಾಲೋಅಪ್

ಇಳೆಗೆ ಇಂಗಿಸುವ ಮಳೆ ನೀರಿನಿಂದ ಜಲ ಸಮೃದ್ಧಿ: ಕೃಷಿಕರ ತೆಂಗಿನ ತೋಟದಲ್ಲಿ ಮಳೆ ನೀರಿಂಗಿಸಲು ಕಟ್ಟಗಳು ಪೂರಕ

Share

ಸುಳ್ಯ: ಮಳೆಗಾಲದಲ್ಲಿ ನೀರನ್ನು ಶೇಖರಿಸಿ ಭೂಮಿಗೆ ಇಂಗಿಸಿ ತೆಂಗಿನ ತೋಟಗಳನ್ನು ಜಲಸಮೃದ್ಧಿಯಾಗಿಸುವಲ್ಲಿ ಕಟ್ಟಗಳ ಪಾತ್ರ ಬಲು ದೊಡ್ಡದು. ತನ್ನ ತೋಟದಲ್ಲಿ ಅಲ್ಲಲ್ಲಿ ಕಟ್ಟಗಳನ್ನು ನಿರ್ಮಿಸಿ ಭೂಮಿಯನ್ನು ಜಲಸಮೃದ್ಧಿ ಮಾಡುವ ಗಡಿ ಪ್ರದೇಶವಾದ ಕಲ್ಲಪಳ್ಳಿಯ ಪ್ರಗತಿ ಪರ ಕೃಷಿಕ ಬಿ.ರಾಜಗೋಪಾಲ ಭಟ್ ಅವರ ಪ್ರಯತ್ನ ಉತ್ತಮ ಫಲಿತಾಂಶವನ್ನೇ ನೀಡುತ್ತಿದೆ.

ಮಳೆ ಸುರಿದಾಗ ಗುಡ್ಡ ಪ್ರದೇಶದಲ್ಲಿ, ಭೂಮಿಯ ಇಳಿಜಾರಿನಲ್ಲಿ ಬಿದ್ದು ಹರಿದು ಹೋಗಿ ವ್ಯರ್ಥವಾಗುವ ನೀರನ್ನು ತಡೆದು ಶೇಖರಿಸಿ ಭೂಮಿಗೆ ಇಂಗಿಸಲು ಈ ರೀತಿಯ ಕಲ್ಲಿನ ಕಟ್ಟಗಳು ಬಹು ಉಪಯೋಗಿಯಾಗುತ್ತಿದೆ. ಗುಡ್ಡ ಪ್ರದೇಶದಲ್ಲಿ ಮಳೆ ಸುರಿದರೆ ಕ್ಷಣಾರ್ಧದಲ್ಲಿ ನೀರು ಹರಿದು ಹೋಗಿ ತೋಡು, ಹಳ್ಳಗಳಿಗೆ ಸೇರಿ ಸಮುದ್ರ ಪಾಲಾಗುತ್ತದೆ. ಇದರಿಂದ ಎಷ್ಟೇ ಅಧಿಕ ಮಳೆ ಸುರಿಯುವ ಪ್ರದೇಶವಾದರೂ ಮಳೆ ನಿಂತು ಕೆಲವೇ ದಿನದಲ್ಲಿ ಭೂಮಿ ಒಣಗಿ ಬರಡಾಗುತ್ತದೆ. ಮಳೆ ಹೋದ ಬೆನ್ನಲ್ಲೇ ನೀರಿಗಾಗಿ ಹಾಹಾಕಾರ ಶುರುವಾಗುತ್ತದೆ. ಬೇಸಿಗೆಯಲ್ಲಿ ತೆಂಗಿನ ತೋಟಗಳು ಮತ್ತಿತರ ಕೃಷಿ ಒಣಗಿ ಹೋಗುವುದರ ಜೊತೆಗೆ ಕುಡಿಯುವ ನೀರಿಗೂ ಬರ ಎದುರಾಗುತ್ತದೆ. ಅಂತರ್ಜಲ ಕುಸಿದು ಹೋಗಿ ಎಲ್ಲೆಡೆ ನೀರಿನ ತತ್ವಾರ ಸಾಮಾನ್ಯವಾಗುತ್ತದೆ. ಇದಕ್ಕೆ ಪರಿಹಾರವಾಗಿ ಜಲ ಮೂಲವನ್ನು ಹೆಚ್ಚಿಸಲು ಕೃಷಿಕರು ನಿರ್ಮಿಸುವ ಕಟ್ಟಗಳು ಬಹು ಉಪಯೋಗಿಯಾಗುತ್ತದೆ.

 

ತೆಂಗಿನ ತೋಟದಲ್ಲಿ ಅಲ್ಲಲ್ಲಿ ನಿರ್ಮಿಸಿದ ಕಟ್ಟಗಳಲ್ಲಿ ಮಳೆ ನೀರನ್ನು ಸಂಗ್ರಹಿಸಿ ಭೂಮಿಗೆ ಇಂಗಿಸುವ ತಮ್ಮ ಪ್ರಯೋಗದಿಂದ ಕಳೆದ 15 ವರ್ಷಗಳಿಂದೀಚೆಗೆ ರಾಜಗೋಪಾಲ ಭಟ್ಟರ ತೋಟದಲ್ಲಿ ನೀರಿನ ಸಮಸ್ಯೆ ಎದುರಾಗಿಲ್ಲ. ತಮ್ಮ ನಾಲ್ಕು ಏಕ್ರೆ ತೆಂಗಿನ ತೋಟ ವರ್ಷ ಪೂರ್ತಿ ಜಲ ಸಮೃದ್ಧಿಯಾಗಿಸಲು ಇದರಿಂದ ಸಾಧ್ಯವಾಗಿದೆ. ಗುಡ್ಡದ ಇಳಿಜಾರಿನಲ್ಲಿರುವ ತೆಂಗಿನ ತೋಟದಲ್ಲಿ ಹಿಂದೆಲ್ಲ ಮಳೆ ಸುರಿದರೆ ಕ್ಷಣಾರ್ಧದಲ್ಲಿ ಮಳೆ ನೀರು ಹರಿದು ಹೋಗುತ್ತಿತ್ತು. ಮಳೆ ನೀರು ತೋಟದ ಮಣ್ಣನ್ನೂ ಕೊಚ್ಚಿಕೊಂಡು ಹೋಗುತ್ತಿತ್ತು. ಇದರಿಂದ ಬೇಸಿಗೆಯಲ್ಲಿ ತೆಂಗಿನ ತೋಟ ಬರಡಾಗಿ ಒಣಗಿ ಹೋಗುತ್ತಿತ್ತು. ಆದರೆ ತೋಟದಲ್ಲಿ ಅಲ್ಲಲ್ಲಿ ಕಟ್ಟಗಳನ್ನು ನಿರ್ಮಿಸಿ ಮಳೆ ನೀರು ಶೇಖರಿಸಿ ನೀರನ್ನು ಭೂಮಿಗೆ ಇಂಗಿಸಲು ಆರಂಭಿಸಿದರಿಂದ ಇದಕ್ಕೆ ಪರಿಹಾರ ಸಿಕ್ಕಿದೆ. ತೋಟದಲ್ಲೇ ಸಿಗುವ ಕಲ್ಲುಗಳಿಂದ ಮೂರು-ನಾಲ್ಕು ಅಡಿ ಎತ್ತರದಲ್ಲಿ ಕಟ್ಟಗಳ್ನು ನಿರ್ಮಿಸಲಾಗುತ್ತದೆ. ಬಿದ್ದ ನೀರು ಅಲ್ಲಲ್ಲೇ ಶೇಖರಗೊಂಡು ನಿಧಾನವಾಗಿ ಇಂಗುತ್ತದೆ. ಈ ಪ್ರಯೋಗ ಆರಂಭಿಸಿದ ಬಳಿಕ ಕಡು ಬೇಸಿಗೆಯಲ್ಲಿಯೂ ತೆಂಗಿನ ತೋಟ ಹಸಿರಿನಿಂದ ನಳ ನಳಿಸುತ್ತದೆ. ಸಮೀಪದಲ್ಲಿರುವ ಕೆರೆಗಳಲ್ಲಿಯೂ ನೀರಿನ ಕೊರತೆ ಉಂಟಾಗುವುದಿಲ್ಲ. ತೆಂಗಿನ ತೋಟಕ್ಕೆ ಮಾತ್ರವಲ್ಲದೆ ಅಡಕೆ ತೋಟಕ್ಕೂ ನೀರಾವರಿಗೆ ಬೇಕಾದಷ್ಟು ನೀರು ದೊರೆಯುತ್ತದೆ ಎನ್ನುತ್ತಾರೆ ರಾಜಗೋಪಾಲ ಭಟ್. ತಮ್ಮ ಪ್ರದೇಶದ ನೀರಿನ ಸಂಪತ್ತನ್ನು ಹೆಚ್ಚಿಸಲು ಮಾತ್ರವಲ್ಲದೆ ತೋಟದ ಮಣ್ಣಿನ ಸವಕಳಿಯನ್ನು ತಡೆಯಲೂ ಕಟ್ಟಗಳು ಸಹಾಯಕವಾಗುತ್ತದೆ.

 

ಈ ರೀತಿಯಾಗಿ ತೆಂಗಿನ ತೋಟದಲ್ಲಿ ಎಲ್ಲೆಡೆ ಕಟ್ಟಗಳನ್ನು ನಿರ್ಮಿಸಿರುವುದರಿಂದ ಈಗ ಇವರ ತೆಂಗಿನ ತೋಟದಲ್ಲಿ ಸುರಿದ ಮಳೆ ನೀರಿನ ಒಂದು ಹನಿಯೂ ಹರಿದು ಹೋಗಿ ವ್ಯರ್ಥವಾಗುವುದಿಲ್ಲ. ಈ ರೀತಿಯ ಕಟ್ಟಗಳಲ್ಲಿ ಸುಮಾರು ಹತ್ತು ವರ್ಷಗಳ ಬಳಿಕ ಮಣ್ಣು ತುಂಬುತ್ತದೆ, ಆ ಸಂದರ್ಭದಲ್ಲಿ ಒಂದು ಅಡಿಯಷ್ಟು ಕಟ್ಟಗಳನ್ನು ಎತ್ತರಿಸಬೇಕು. ತೆಂಗಿನ ತೋಟದ ಒಳಗೆ ಕಟ್ಟಗಳನ್ನು ನಿರ್ಮಿಸಿ ನೀರಿಂಗಿಸುವುದರ ಜೊತೆಗೆ ತೋಟದ ಸುತ್ತಲೂ ಅಲ್ಲಲ್ಲಿ ಭಾರೀ ಗಾತ್ರದ ಗುಂಡಿಗಳನ್ನು ತೋಡಿ ಅದರಲ್ಲಿಯೂ ಮಳೆ ನೀರನ್ನು ಶೇಖರಿಸುತ್ತಾರೆ ಇವರು. ಇದರಿಂದ ಪ್ರದೇಶವೆಲ್ಲ ಜಲ ಸಮೃದ್ಧವಾಗುತ್ತದೆ.

ಮಳೆಗಾಲದಲ್ಲಿ ಎಷ್ಟೇ ಮಳೆ ಸುರಿದರೂ ಅದು ಹರಿದು ಸಮುದ್ರ ಸೇರುವುದರಿಂದ ಭೂಮಿಗೆ ಮಳೆ ನೀರಿನ ಪ್ರಯೋಜನ ದೊರೆಯುವುದಿಲ್ಲ. ಬೇಸಿಗೆಯಲ್ಲಿ ನೀರಿನ ಹಾಹಾಕಾರ ಉಂಟಾಗುತ್ತದೆ. ಅಲ್ಲಲ್ಲಿ ಕಟ್ಟಗಳನ್ನು ನಿರ್ಮಿಸಿ, ಹೊಂಡಗಳನ್ನು ತೋಡಿ ಮಳೆಯ ನೀರನ್ನು ಸಂಗ್ರಹಿಸಿ ಸಾಧ್ಯವಾದಷ್ಟು ಭೂಮಿಗೆ ಇಂಗಿಸಿದರೆ, ಬೇಸಿಗೆಯಲ್ಲಿ ಎದುರಾಗುವ ನೀರಿನ ಸಮಸ್ಯೆಯನ್ನು ಪರಿಹರಿಸಬಹುದು ಎಂಬುದು ನಮ್ಮ ಅನುಭವ –  ಬಿ.ರಾಜಗೋಪಾಲ ಭಟ್ , ಕೃಷಿಕ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

5 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

6 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

9 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

13 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

13 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

24 hours ago