ಮಂಗಳೂರು: ವೆದರ್ ರಿಪೋರ್ಟ್ ಪ್ರಕಾರ ಇನ್ನು 3 ದಿನಗಳ ಕಾಲ ರಾಜ್ಯದ ವಿವಿದೆಡೆ ಮೋಡ ಕವಿದ ವಾತಾವರಣ ಕಂಡುಬರಲಿದೆ. ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ. ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಕಾಸರಗೋಡು, ಬದಿಯಡ್ಕ, ಮುಳ್ಳೇರಿಯ, ಉಡುಪಿ ಹಾಗೂ ದ. ಕ. ಜಿಲ್ಲೆಯಾದ್ಯಂತ ಮೋಡದ ವಾತಾವರಣ ಇರಬಹುದು. ಸಾಗರ ಹಾಗೂ ಹೊಸನಗರ ಭಾಗಗಳಲ್ಲೂ ಸಾಧಾರಣ ಮಳೆ ಸಾಧ್ಯತೆ ಇದೆ.
ಹವಾಮಾನ ಇಲಾಖೆಯ ಉಪಗ್ರಹ ಚಿತ್ರ ಆಧರಿಸಿ ದಕ್ಷಿಣ ಕನ್ನಡ ಜಿಲ್ಲೆಯ ವೆದರ್ ಬಗ್ಗೆ ಮಾಹಿತಿ ನೀಡಿದ ಕೃಷಿಕ ಸಾಯಿಶೇಖರ್ ಹೀಗೆ ಹೇಳಿದ್ದಾರೆ..
ಇದರ ಜೊತೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸಾಧ್ಯತೆ ಇದೆ. ಇನ್ನು 2 ಅಥವಾ 3 ದಿವಸಗಳಲ್ಲಿ ಸರಿಯಾದ ಚಿತ್ರಣ ಸಿಗಬಹುದು.ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಅಂಡೋಮಾನ್, ನಿಕೋಬರ್ ನಲ್ಲಿ ವಾಯುಭಾರ ಕುಸಿತ ಉಂಟಾಗಿದೆ.
ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಹಾಗೂ ಇಂದು ಬೆಳಗ್ಗೆ ಧಾರಾಕಾರ ಮಳೆ ಸುರಿದಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಜಿಲ್ಲೆಗಳಲ್ಲಿ ಕೂಡಾ ಮಳೆಯಾದ ವರದಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಮಳೆ ಆರ್ಭಟಿಸುತ್ತಿದೆ. ಜಿಲ್ಲೆಯ ಕೆಲವೆಡೆ ನಿನ್ನೆ ಸಂಜೆ ವೇಳೆ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆ ಸುರಿದಿದ್ದು, ಸಿಡಿಲಿಗೆ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…