ಮಂಗಳೂರು: ವೆದರ್ ರಿಪೋರ್ಟ್ ಪ್ರಕಾರ ಇನ್ನು 3 ದಿನಗಳ ಕಾಲ ರಾಜ್ಯದ ವಿವಿದೆಡೆ ಮೋಡ ಕವಿದ ವಾತಾವರಣ ಕಂಡುಬರಲಿದೆ. ವಿವಿದೆಡೆ ಮಳೆಯಾಗುವ ಸಾಧ್ಯತೆ ಇದೆ. ಕೇರಳ ಹಾಗೂ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಕಾಸರಗೋಡು, ಬದಿಯಡ್ಕ, ಮುಳ್ಳೇರಿಯ, ಉಡುಪಿ ಹಾಗೂ ದ. ಕ. ಜಿಲ್ಲೆಯಾದ್ಯಂತ ಮೋಡದ ವಾತಾವರಣ ಇರಬಹುದು. ಸಾಗರ ಹಾಗೂ ಹೊಸನಗರ ಭಾಗಗಳಲ್ಲೂ ಸಾಧಾರಣ ಮಳೆ ಸಾಧ್ಯತೆ ಇದೆ.
ಹವಾಮಾನ ಇಲಾಖೆಯ ಉಪಗ್ರಹ ಚಿತ್ರ ಆಧರಿಸಿ ದಕ್ಷಿಣ ಕನ್ನಡ ಜಿಲ್ಲೆಯ ವೆದರ್ ಬಗ್ಗೆ ಮಾಹಿತಿ ನೀಡಿದ ಕೃಷಿಕ ಸಾಯಿಶೇಖರ್ ಹೀಗೆ ಹೇಳಿದ್ದಾರೆ..
ಇದರ ಜೊತೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸಾಧ್ಯತೆ ಇದೆ. ಇನ್ನು 2 ಅಥವಾ 3 ದಿವಸಗಳಲ್ಲಿ ಸರಿಯಾದ ಚಿತ್ರಣ ಸಿಗಬಹುದು.ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಅಂಡೋಮಾನ್, ನಿಕೋಬರ್ ನಲ್ಲಿ ವಾಯುಭಾರ ಕುಸಿತ ಉಂಟಾಗಿದೆ.
ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಹಾಗೂ ಇಂದು ಬೆಳಗ್ಗೆ ಧಾರಾಕಾರ ಮಳೆ ಸುರಿದಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಜಿಲ್ಲೆಗಳಲ್ಲಿ ಕೂಡಾ ಮಳೆಯಾದ ವರದಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಮಳೆ ಆರ್ಭಟಿಸುತ್ತಿದೆ. ಜಿಲ್ಲೆಯ ಕೆಲವೆಡೆ ನಿನ್ನೆ ಸಂಜೆ ವೇಳೆ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆ ಸುರಿದಿದ್ದು, ಸಿಡಿಲಿಗೆ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…