Advertisement
ಯಕ್ಷಗಾನ : ಮಾತು-ಮಸೆತ

ಇವಳು ಹೆಣ್ಣಲ್ಲ. ಜಗತ್ತಿನ ತಾಯಿ ಇವಳು…..

Share

ಶೇಣಿ ಗೋಪಾಲಕೃಷ್ಣ ಭಟ್ಟರ ‘ರಕ್ತಬೀಜ’
(ಪ್ರಸಂಗ : ಶ್ರೀ ದೇವಿ ಮಹಾತ್ಮ್ಯೆ)

(ಶುಂಭ ಮತ್ತು ಶ್ರೀದೇವಿಯ ಯುದ್ಧದ ಸನ್ನಿವೇಶ. ದೇವಿಯನ್ನು ನೋಡಿದ ರಕ್ತಬೀಜ ಹೀಗೆ ತರ್ಕಿಸುತ್ತಾನೆ)

…. ಭಲೇ… ಭಲೇ… ಈ ದರ್ಶನ ಜೀವಾತ್ಮನಿಗೆ ಮೊದಲೇ ಆಗಬೇಕು. ನಿರಾಕಾರ ನಿರ್ಗುಣವಾದಂತಹ ‘ಪರಬ್ರಹ್ಮ’ ಕೇವಲ ನಮ್ಮ ತರ್ಕಕ್ಕೆ ವಸ್ತು. ಸಾಕಾರ ಸ್ವರೂಪವಾದಂತಹ ಈ ವಿಶ್ವವನ್ನು ಕಂಡು ಅದನ್ನು ಗುರುತಿಸಬಹುದು. ಯಾವುದಾದರೂ ಒಂದು ವಸ್ತುವನ್ನು ಕಂಡಾಗ ಆ ವಸ್ತುವನ್ನು ತಯಾರಿಸಿದಂತಹ ವ್ಯಕ್ತಿಯ ಇಚ್ಚಾ – ಕ್ರಿಯಾ – ಜ್ಞಾನವನ್ನು ಗುರುತಿಸಬಲ್ಲ ಪ್ರಾಜ್ಞನಂತೆ ನಾನು ಇವಳನ್ನು ‘ಪರಬ್ರಹ್ಮ’ ಎಂದು ಗುರುತಿಸಿದೆ.

ಇವಳು ಹೆಣ್ಣಲ್ಲ. ಜಗತ್ತಿನ ತಾಯಿ ಇವಳು. ಪ್ರಪಂಚದಲ್ಲಿರುವ ಸಕಲ ಪುರುಷರನ್ನು ಆಕರ್ಷಿಸುವ ಮಾಯಾಮೋಹಿನಿಯಾದ ಹೆಂಡತಿಯೂ ಇವಳೇ. ಸಂಸಾರಕ್ಕೆ ಎಳೆಯುವ ಮಾಯಾರೂಪಿಣಿಯಾದ ಮಗಳೂ ಇವಳೇ. ಹಾಗಾದರೆ ತಾಯಿಯಾಗಿ, ಹೆಂಡತಿಯಾಗಿ, ಮಗಳಾಗಿ ‘ಮಾಯೆ’ ನನ್ನನ್ನು ಕಾಡಿತ್ತು. ನನಗೇನಂತೆ, ನನ್ನ ಇಚ್ಛಾ-ಕ್ರಿಯಾ-ಜ್ಞಾನಶಕ್ತಿಯನ್ನು ಮುಂದಿಟ್ಟುಕೊಂಡು ಇವಳನ್ನು ಇದಿರಿಸಿ, ಶಕ್ತಿಯಿಂದ ಇವಳು ಸೋಲುವಂತ ಮಾಡಿ ಮೈಯಿಂದಲ್ಲದಿದ್ದರೂ, ಮನಸ್ಸಿನಿಂದಾದರೂ ಸೋತರೆ ಸಾಕು. ‘ಕೈಹಿಡಿ’ ಅಂತ ಕೇಳಲು ಬಂದಿದ್ದೇನೆ. ‘ಕೈಹಿಡಿ’ ಇದಕ್ಕೆ ಅಂತರಾರ್ಥ ಬೇರೆ. ಯಾಕೆ? ‘ನನ್ನ ಅತ್ತೆಯ ಮಗಳಾಗಿ ಕೈಹಿಡಿದು ನನ್ನ ಪಾಣಿಗ್ರಹಣದ ಸತಿಯಾಗಿ ಬಾ’ ಎಂದು ಸ್ಥೂಲಾರ್ಥ… ‘ಇದೋ ಈ ಸಂಸಾರದಲ್ಲಿ ನನ್ನನ್ನು ಹೆತ್ತು ಹಾಕಿದ್ದಿ. ಮುಂದೇನು ಅಂತ ದಾರಿ ಕಾಣುವುದಿಲ್ಲ. ತಾಯಿಯಾಗಿ ಕೈ ಹಿಡಿದು ಮುಂದಕ್ಕೆ ಒಯ್ಯು’ ಎಂಬುದು ಇನ್ನೊಂದು.
ನೋಡೋಣ. ಸರ್ವಜ್ಞಳಲ್ಲವೇ ಇವಳು. ಅರ್ಥವಾದೀತಲ್ಲ ಇವಳಿಗೆ…. ಒಂದೋ ಇದು ಶುಂಭಾಸುರನ ಕೊನೆ. ಅಲ್ಲದಿದ್ದರೆ ಶುಂಭಾಸುರನ ಜೀವನದ ಪ್ರಾರಂಭ….

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

8 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

8 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

12 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago