Advertisement
ಯಕ್ಷಗಾನ : ಮಾತು-ಮಸೆತ

ಇವಳು ಹೆಣ್ಣಲ್ಲ. ಜಗತ್ತಿನ ತಾಯಿ ಇವಳು…..

Share

ಶೇಣಿ ಗೋಪಾಲಕೃಷ್ಣ ಭಟ್ಟರ ‘ರಕ್ತಬೀಜ’
(ಪ್ರಸಂಗ : ಶ್ರೀ ದೇವಿ ಮಹಾತ್ಮ್ಯೆ)

Advertisement
Advertisement

(ಶುಂಭ ಮತ್ತು ಶ್ರೀದೇವಿಯ ಯುದ್ಧದ ಸನ್ನಿವೇಶ. ದೇವಿಯನ್ನು ನೋಡಿದ ರಕ್ತಬೀಜ ಹೀಗೆ ತರ್ಕಿಸುತ್ತಾನೆ)

…. ಭಲೇ… ಭಲೇ… ಈ ದರ್ಶನ ಜೀವಾತ್ಮನಿಗೆ ಮೊದಲೇ ಆಗಬೇಕು. ನಿರಾಕಾರ ನಿರ್ಗುಣವಾದಂತಹ ‘ಪರಬ್ರಹ್ಮ’ ಕೇವಲ ನಮ್ಮ ತರ್ಕಕ್ಕೆ ವಸ್ತು. ಸಾಕಾರ ಸ್ವರೂಪವಾದಂತಹ ಈ ವಿಶ್ವವನ್ನು ಕಂಡು ಅದನ್ನು ಗುರುತಿಸಬಹುದು. ಯಾವುದಾದರೂ ಒಂದು ವಸ್ತುವನ್ನು ಕಂಡಾಗ ಆ ವಸ್ತುವನ್ನು ತಯಾರಿಸಿದಂತಹ ವ್ಯಕ್ತಿಯ ಇಚ್ಚಾ – ಕ್ರಿಯಾ – ಜ್ಞಾನವನ್ನು ಗುರುತಿಸಬಲ್ಲ ಪ್ರಾಜ್ಞನಂತೆ ನಾನು ಇವಳನ್ನು ‘ಪರಬ್ರಹ್ಮ’ ಎಂದು ಗುರುತಿಸಿದೆ.

ಇವಳು ಹೆಣ್ಣಲ್ಲ. ಜಗತ್ತಿನ ತಾಯಿ ಇವಳು. ಪ್ರಪಂಚದಲ್ಲಿರುವ ಸಕಲ ಪುರುಷರನ್ನು ಆಕರ್ಷಿಸುವ ಮಾಯಾಮೋಹಿನಿಯಾದ ಹೆಂಡತಿಯೂ ಇವಳೇ. ಸಂಸಾರಕ್ಕೆ ಎಳೆಯುವ ಮಾಯಾರೂಪಿಣಿಯಾದ ಮಗಳೂ ಇವಳೇ. ಹಾಗಾದರೆ ತಾಯಿಯಾಗಿ, ಹೆಂಡತಿಯಾಗಿ, ಮಗಳಾಗಿ ‘ಮಾಯೆ’ ನನ್ನನ್ನು ಕಾಡಿತ್ತು. ನನಗೇನಂತೆ, ನನ್ನ ಇಚ್ಛಾ-ಕ್ರಿಯಾ-ಜ್ಞಾನಶಕ್ತಿಯನ್ನು ಮುಂದಿಟ್ಟುಕೊಂಡು ಇವಳನ್ನು ಇದಿರಿಸಿ, ಶಕ್ತಿಯಿಂದ ಇವಳು ಸೋಲುವಂತ ಮಾಡಿ ಮೈಯಿಂದಲ್ಲದಿದ್ದರೂ, ಮನಸ್ಸಿನಿಂದಾದರೂ ಸೋತರೆ ಸಾಕು. ‘ಕೈಹಿಡಿ’ ಅಂತ ಕೇಳಲು ಬಂದಿದ್ದೇನೆ. ‘ಕೈಹಿಡಿ’ ಇದಕ್ಕೆ ಅಂತರಾರ್ಥ ಬೇರೆ. ಯಾಕೆ? ‘ನನ್ನ ಅತ್ತೆಯ ಮಗಳಾಗಿ ಕೈಹಿಡಿದು ನನ್ನ ಪಾಣಿಗ್ರಹಣದ ಸತಿಯಾಗಿ ಬಾ’ ಎಂದು ಸ್ಥೂಲಾರ್ಥ… ‘ಇದೋ ಈ ಸಂಸಾರದಲ್ಲಿ ನನ್ನನ್ನು ಹೆತ್ತು ಹಾಕಿದ್ದಿ. ಮುಂದೇನು ಅಂತ ದಾರಿ ಕಾಣುವುದಿಲ್ಲ. ತಾಯಿಯಾಗಿ ಕೈ ಹಿಡಿದು ಮುಂದಕ್ಕೆ ಒಯ್ಯು’ ಎಂಬುದು ಇನ್ನೊಂದು.
ನೋಡೋಣ. ಸರ್ವಜ್ಞಳಲ್ಲವೇ ಇವಳು. ಅರ್ಥವಾದೀತಲ್ಲ ಇವಳಿಗೆ…. ಒಂದೋ ಇದು ಶುಂಭಾಸುರನ ಕೊನೆ. ಅಲ್ಲದಿದ್ದರೆ ಶುಂಭಾಸುರನ ಜೀವನದ ಪ್ರಾರಂಭ….

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

7 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

7 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago