Advertisement
ಯಕ್ಷಗಾನ : ಮಾತು-ಮಸೆತ

ಇವಳು ಹೆಣ್ಣಲ್ಲ. ಜಗತ್ತಿನ ತಾಯಿ ಇವಳು…..

Share

ಶೇಣಿ ಗೋಪಾಲಕೃಷ್ಣ ಭಟ್ಟರ ‘ರಕ್ತಬೀಜ’
(ಪ್ರಸಂಗ : ಶ್ರೀ ದೇವಿ ಮಹಾತ್ಮ್ಯೆ)

Advertisement

(ಶುಂಭ ಮತ್ತು ಶ್ರೀದೇವಿಯ ಯುದ್ಧದ ಸನ್ನಿವೇಶ. ದೇವಿಯನ್ನು ನೋಡಿದ ರಕ್ತಬೀಜ ಹೀಗೆ ತರ್ಕಿಸುತ್ತಾನೆ)

…. ಭಲೇ… ಭಲೇ… ಈ ದರ್ಶನ ಜೀವಾತ್ಮನಿಗೆ ಮೊದಲೇ ಆಗಬೇಕು. ನಿರಾಕಾರ ನಿರ್ಗುಣವಾದಂತಹ ‘ಪರಬ್ರಹ್ಮ’ ಕೇವಲ ನಮ್ಮ ತರ್ಕಕ್ಕೆ ವಸ್ತು. ಸಾಕಾರ ಸ್ವರೂಪವಾದಂತಹ ಈ ವಿಶ್ವವನ್ನು ಕಂಡು ಅದನ್ನು ಗುರುತಿಸಬಹುದು. ಯಾವುದಾದರೂ ಒಂದು ವಸ್ತುವನ್ನು ಕಂಡಾಗ ಆ ವಸ್ತುವನ್ನು ತಯಾರಿಸಿದಂತಹ ವ್ಯಕ್ತಿಯ ಇಚ್ಚಾ – ಕ್ರಿಯಾ – ಜ್ಞಾನವನ್ನು ಗುರುತಿಸಬಲ್ಲ ಪ್ರಾಜ್ಞನಂತೆ ನಾನು ಇವಳನ್ನು ‘ಪರಬ್ರಹ್ಮ’ ಎಂದು ಗುರುತಿಸಿದೆ.

ಇವಳು ಹೆಣ್ಣಲ್ಲ. ಜಗತ್ತಿನ ತಾಯಿ ಇವಳು. ಪ್ರಪಂಚದಲ್ಲಿರುವ ಸಕಲ ಪುರುಷರನ್ನು ಆಕರ್ಷಿಸುವ ಮಾಯಾಮೋಹಿನಿಯಾದ ಹೆಂಡತಿಯೂ ಇವಳೇ. ಸಂಸಾರಕ್ಕೆ ಎಳೆಯುವ ಮಾಯಾರೂಪಿಣಿಯಾದ ಮಗಳೂ ಇವಳೇ. ಹಾಗಾದರೆ ತಾಯಿಯಾಗಿ, ಹೆಂಡತಿಯಾಗಿ, ಮಗಳಾಗಿ ‘ಮಾಯೆ’ ನನ್ನನ್ನು ಕಾಡಿತ್ತು. ನನಗೇನಂತೆ, ನನ್ನ ಇಚ್ಛಾ-ಕ್ರಿಯಾ-ಜ್ಞಾನಶಕ್ತಿಯನ್ನು ಮುಂದಿಟ್ಟುಕೊಂಡು ಇವಳನ್ನು ಇದಿರಿಸಿ, ಶಕ್ತಿಯಿಂದ ಇವಳು ಸೋಲುವಂತ ಮಾಡಿ ಮೈಯಿಂದಲ್ಲದಿದ್ದರೂ, ಮನಸ್ಸಿನಿಂದಾದರೂ ಸೋತರೆ ಸಾಕು. ‘ಕೈಹಿಡಿ’ ಅಂತ ಕೇಳಲು ಬಂದಿದ್ದೇನೆ. ‘ಕೈಹಿಡಿ’ ಇದಕ್ಕೆ ಅಂತರಾರ್ಥ ಬೇರೆ. ಯಾಕೆ? ‘ನನ್ನ ಅತ್ತೆಯ ಮಗಳಾಗಿ ಕೈಹಿಡಿದು ನನ್ನ ಪಾಣಿಗ್ರಹಣದ ಸತಿಯಾಗಿ ಬಾ’ ಎಂದು ಸ್ಥೂಲಾರ್ಥ… ‘ಇದೋ ಈ ಸಂಸಾರದಲ್ಲಿ ನನ್ನನ್ನು ಹೆತ್ತು ಹಾಕಿದ್ದಿ. ಮುಂದೇನು ಅಂತ ದಾರಿ ಕಾಣುವುದಿಲ್ಲ. ತಾಯಿಯಾಗಿ ಕೈ ಹಿಡಿದು ಮುಂದಕ್ಕೆ ಒಯ್ಯು’ ಎಂಬುದು ಇನ್ನೊಂದು.
ನೋಡೋಣ. ಸರ್ವಜ್ಞಳಲ್ಲವೇ ಇವಳು. ಅರ್ಥವಾದೀತಲ್ಲ ಇವಳಿಗೆ…. ಒಂದೋ ಇದು ಶುಂಭಾಸುರನ ಕೊನೆ. ಅಲ್ಲದಿದ್ದರೆ ಶುಂಭಾಸುರನ ಜೀವನದ ಪ್ರಾರಂಭ….

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

53 minutes ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago