Advertisement
The Rural Mirror ಕಾಳಜಿ

ಸುಳ್ಯದ ತ್ಯಾಜ್ಯ ನೋಡಿ ಗರಂ ಆದ ಉಸ್ತುವಾರಿ ಸಚಿವರು ಹೇಳಿದ್ದೇನು….?

Share

ಸುಳ್ಯ: ಸುಳ್ಯ ನಗರ ಪಂಚಾಯತ್ ಮುಂಭಾಗದಲ್ಲಿ ತುಂಬಿಡಲಾಗಿರುವ ತ್ಯಾಜ್ಯ ರಾಶಿಯನ್ನು ಕೂಡಲೇ ತೆರವು ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ.

ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಸಭೆಗೆ ಆಗಮಿಸಿದ ಸಂದರ್ಭ ಕಳೆದ ಹಲವು ತಿಂಗಳಿನಿಂದ ನಗರ ಪಂಚಾಯತ್ ವ್ಯಾಪ್ತಿಯ ಕಸವು ನ.ಪಂ.ಮುಂಭಾಗದ ವಾಹನ ನಿಲುಗಡೆ ಕಟ್ಟಡದಲ್ಲಿ ಶೇಖರಣೆ ಆಗಿರುವುದನ್ನು ಮಾಧ್ಯಮ ಪ್ರತಿನಿಧಿಗಳು ಸಚಿವರ ಗಮನಕ್ಕೆ ತಂದರು. ಈ ಹಿನ್ನಲೆಯಲ್ಲಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತುಂಬಿ ತುಳುಕಿ ದುರ್ವಾಸನೆ ಬೀರುವ ತ್ಯಾಜ್ಯ ರಾಶಿ, ಗುಯಿಂಗುಟ್ಟಿ ಹಾರುವ   ನೊ ಣಗಳ ಕಲರವನ್ನು ನೋಡಿ ಗರಂ ಆದ ಸಚಿವರು ನಗರ ಪಂಚಾಯತ್ ಅಧಿಕಾರಿಗಳನ್ನು ತೀವ್ರ ತರಾಟೆಗೆತ್ತಿಕೊಂಡರು.

 

 

ಕಚೇರಿಯ ಮುಂಭಾಗದಲ್ಲಿ ಈ ರೀತಿ ಕಸ ರಾಶಿ ಯಾಕೆ ತುಂಬಿದ್ದು ಇದರ ವಿಲೇವಾರಿಗೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಈ ರೀತಿಯ ಕ್ರಮವನ್ನು ಒಪ್ಪಲು ಸಾಧ್ಯವಿಲ್ಲ ಅತೀ ಶೀಘ್ರ ಇದನ್ನು ವಿಲೇವಾರಿಗೆ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಆದೇಶ ನೀಡಿದರು.

ಕಸ ವಿಲೇವಾರಿಗೆ ಸ್ಥಳ ಇಲ್ಲದಿರುವ ಬಗ್ಗೆ ಮತ್ತು ವೈಜ್ಞಾನಿಕವಾಗಿ ಕಸ ವಿಲೇವಾರಿ ಆಗದ ಬಗ್ಗೆ ಜನಪ್ರತಿನಿಧಿಗಳು ಸಚಿವರ ಗಮನಕ್ಕೆ ತಂದರು. ಕಸ ವಿಲೇವಾರಿಗೆ ಸೂಕ್ತ ಜಾಗ ಗುರುತಿಸಲು ಸಚಿವರು ತಹಶೀಲ್ದಾರ್ ಮತ್ತು ಇತರ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಎಸ್.ಅಂಗಾರ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್ ಕೊಡೆಂಕೇರಿ, ಡೇವಿಡ್ ಧೀರಾ ಕ್ರಾಸ್ತಾ, ಶರೀಫ್ ಕಂಠಿ, ಪ್ರಮುಖರಾದ ಟಿ.ಎಂ.ಶಹೀದ್, ಎಂ.ಬಿ.ಸದಾಶಿವ, ಶಾಫಿ ಕುತ್ತಮೊಟ್ಟೆ ಮತ್ತಿತರರು ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…

4 hours ago

ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ

ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…

4 hours ago

ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

5 hours ago

ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…

7 hours ago

ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?

ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…

9 hours ago

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

14 hours ago