ಸುಳ್ಯ: ಸುಳ್ಯ ನಗರ ಪಂಚಾಯತ್ ಮುಂಭಾಗದಲ್ಲಿ ತುಂಬಿಡಲಾಗಿರುವ ತ್ಯಾಜ್ಯ ರಾಶಿಯನ್ನು ಕೂಡಲೇ ತೆರವು ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ.
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಸಭೆಗೆ ಆಗಮಿಸಿದ ಸಂದರ್ಭ ಕಳೆದ ಹಲವು ತಿಂಗಳಿನಿಂದ ನಗರ ಪಂಚಾಯತ್ ವ್ಯಾಪ್ತಿಯ ಕಸವು ನ.ಪಂ.ಮುಂಭಾಗದ ವಾಹನ ನಿಲುಗಡೆ ಕಟ್ಟಡದಲ್ಲಿ ಶೇಖರಣೆ ಆಗಿರುವುದನ್ನು ಮಾಧ್ಯಮ ಪ್ರತಿನಿಧಿಗಳು ಸಚಿವರ ಗಮನಕ್ಕೆ ತಂದರು. ಈ ಹಿನ್ನಲೆಯಲ್ಲಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತುಂಬಿ ತುಳುಕಿ ದುರ್ವಾಸನೆ ಬೀರುವ ತ್ಯಾಜ್ಯ ರಾಶಿ, ಗುಯಿಂಗುಟ್ಟಿ ಹಾರುವ ನೊ ಣಗಳ ಕಲರವನ್ನು ನೋಡಿ ಗರಂ ಆದ ಸಚಿವರು ನಗರ ಪಂಚಾಯತ್ ಅಧಿಕಾರಿಗಳನ್ನು ತೀವ್ರ ತರಾಟೆಗೆತ್ತಿಕೊಂಡರು.
ಕಚೇರಿಯ ಮುಂಭಾಗದಲ್ಲಿ ಈ ರೀತಿ ಕಸ ರಾಶಿ ಯಾಕೆ ತುಂಬಿದ್ದು ಇದರ ವಿಲೇವಾರಿಗೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಈ ರೀತಿಯ ಕ್ರಮವನ್ನು ಒಪ್ಪಲು ಸಾಧ್ಯವಿಲ್ಲ ಅತೀ ಶೀಘ್ರ ಇದನ್ನು ವಿಲೇವಾರಿಗೆ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಆದೇಶ ನೀಡಿದರು.
ಕಸ ವಿಲೇವಾರಿಗೆ ಸ್ಥಳ ಇಲ್ಲದಿರುವ ಬಗ್ಗೆ ಮತ್ತು ವೈಜ್ಞಾನಿಕವಾಗಿ ಕಸ ವಿಲೇವಾರಿ ಆಗದ ಬಗ್ಗೆ ಜನಪ್ರತಿನಿಧಿಗಳು ಸಚಿವರ ಗಮನಕ್ಕೆ ತಂದರು. ಕಸ ವಿಲೇವಾರಿಗೆ ಸೂಕ್ತ ಜಾಗ ಗುರುತಿಸಲು ಸಚಿವರು ತಹಶೀಲ್ದಾರ್ ಮತ್ತು ಇತರ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ಎಸ್.ಅಂಗಾರ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್ ಕೊಡೆಂಕೇರಿ, ಡೇವಿಡ್ ಧೀರಾ ಕ್ರಾಸ್ತಾ, ಶರೀಫ್ ಕಂಠಿ, ಪ್ರಮುಖರಾದ ಟಿ.ಎಂ.ಶಹೀದ್, ಎಂ.ಬಿ.ಸದಾಶಿವ, ಶಾಫಿ ಕುತ್ತಮೊಟ್ಟೆ ಮತ್ತಿತರರು ಉಪಸ್ಥಿತರಿದ್ದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…