ಸುಳ್ಯ: ಸುಳ್ಯ ನಗರ ಪಂಚಾಯತ್ ಮುಂಭಾಗದಲ್ಲಿ ತುಂಬಿಡಲಾಗಿರುವ ತ್ಯಾಜ್ಯ ರಾಶಿಯನ್ನು ಕೂಡಲೇ ತೆರವು ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ.
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ಸಭೆಗೆ ಆಗಮಿಸಿದ ಸಂದರ್ಭ ಕಳೆದ ಹಲವು ತಿಂಗಳಿನಿಂದ ನಗರ ಪಂಚಾಯತ್ ವ್ಯಾಪ್ತಿಯ ಕಸವು ನ.ಪಂ.ಮುಂಭಾಗದ ವಾಹನ ನಿಲುಗಡೆ ಕಟ್ಟಡದಲ್ಲಿ ಶೇಖರಣೆ ಆಗಿರುವುದನ್ನು ಮಾಧ್ಯಮ ಪ್ರತಿನಿಧಿಗಳು ಸಚಿವರ ಗಮನಕ್ಕೆ ತಂದರು. ಈ ಹಿನ್ನಲೆಯಲ್ಲಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತುಂಬಿ ತುಳುಕಿ ದುರ್ವಾಸನೆ ಬೀರುವ ತ್ಯಾಜ್ಯ ರಾಶಿ, ಗುಯಿಂಗುಟ್ಟಿ ಹಾರುವ ನೊ ಣಗಳ ಕಲರವನ್ನು ನೋಡಿ ಗರಂ ಆದ ಸಚಿವರು ನಗರ ಪಂಚಾಯತ್ ಅಧಿಕಾರಿಗಳನ್ನು ತೀವ್ರ ತರಾಟೆಗೆತ್ತಿಕೊಂಡರು.
ಕಚೇರಿಯ ಮುಂಭಾಗದಲ್ಲಿ ಈ ರೀತಿ ಕಸ ರಾಶಿ ಯಾಕೆ ತುಂಬಿದ್ದು ಇದರ ವಿಲೇವಾರಿಗೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಈ ರೀತಿಯ ಕ್ರಮವನ್ನು ಒಪ್ಪಲು ಸಾಧ್ಯವಿಲ್ಲ ಅತೀ ಶೀಘ್ರ ಇದನ್ನು ವಿಲೇವಾರಿಗೆ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಆದೇಶ ನೀಡಿದರು.
ಕಸ ವಿಲೇವಾರಿಗೆ ಸ್ಥಳ ಇಲ್ಲದಿರುವ ಬಗ್ಗೆ ಮತ್ತು ವೈಜ್ಞಾನಿಕವಾಗಿ ಕಸ ವಿಲೇವಾರಿ ಆಗದ ಬಗ್ಗೆ ಜನಪ್ರತಿನಿಧಿಗಳು ಸಚಿವರ ಗಮನಕ್ಕೆ ತಂದರು. ಕಸ ವಿಲೇವಾರಿಗೆ ಸೂಕ್ತ ಜಾಗ ಗುರುತಿಸಲು ಸಚಿವರು ತಹಶೀಲ್ದಾರ್ ಮತ್ತು ಇತರ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ಎಸ್.ಅಂಗಾರ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್ ಕೊಡೆಂಕೇರಿ, ಡೇವಿಡ್ ಧೀರಾ ಕ್ರಾಸ್ತಾ, ಶರೀಫ್ ಕಂಠಿ, ಪ್ರಮುಖರಾದ ಟಿ.ಎಂ.ಶಹೀದ್, ಎಂ.ಬಿ.ಸದಾಶಿವ, ಶಾಫಿ ಕುತ್ತಮೊಟ್ಟೆ ಮತ್ತಿತರರು ಉಪಸ್ಥಿತರಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…