ಸುಳ್ಯ:ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಡಿಯನ್ ಸೊಸೈಟಿ ಆಫ್ ಹೀಟಿಂಗ್, ರೆಫ್ರಿಜರೇಶನ್ ಆಂಡ್ ಏರ್ ಕಂಡೀಷನಿಂಗ್ ಇಂಜಿನಿಯರ್ಸ್ (ಇಸ್ರಾಯ್) ಕ್ಲಬ್ ನ ಉದ್ಘಾಟನೆ ಹಾಗೂ ಲಾಂಛನ ಅನಾವರಣ ಸಮಾರಂಭ ಯಾಂತ್ರಿಕ ವಿಭಾಗದಿಂದ ನಡೆಯಿತು. ಯಾಂತ್ರಿಕ ವಿಭಾಗದ ಮುಖ್ಯಸ್ಥ ಡಾ. ಉಮಾಶಂಕರ್ ಕೆ. ಎಸ್. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮೂಡಬಿದ್ರೆಯ ಎಸ್.ಕೆ.ಎಫ್ ಬೋಯ್ಲರ್ಸ್ ಆಂಡ್ ಡ್ರೈಯರ್ಸ್ ಪ್ರೈ.ಲಿಮೊಟೆಡ್ ನ ತಾಂತ್ರಿಕ ನಿರ್ದೇಶಕ ಪ್ರಜ್ವಲ್ ಆಚಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದ ಸಂಯೋಜಕ ಸುಧೀರ್ ಕೆ.ವಿ. ಸ್ವಾಗತಿಸಿ, ಗೋಕುಲ್ ದಾಸ್ ಅವರು ವಂದಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನ ಮಹತ್ವದ ಬಗ್ಗೆ ಪ್ರಜ್ವಲ್ ಆಚಾರ್ ಮಾಹಿತಿ ನೀಡಿದರು. ಕ್ಲಬ್ ನ 3ನೇ ವರ್ಷದ ಯಾಂತ್ರಿಕ ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಥೆಯ ವತಿಯಿಂದ ಯಾಂತ್ರಿಕ ತರಬೇತಿಯನ್ನು ನೀಡುವುದಾಗಿ ಅವರು ಹೇಳಿದರು.
ಪ್ರೋ. ರಾಘವೇಂದ್ರ ಕಾಮತ್ ಹಾಗೂ ಶಶಾಂಕ್ ಕಾರ್ಯಕ್ರಮ ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…