ಸುಳ್ಯ:ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಡಿಯನ್ ಸೊಸೈಟಿ ಆಫ್ ಹೀಟಿಂಗ್, ರೆಫ್ರಿಜರೇಶನ್ ಆಂಡ್ ಏರ್ ಕಂಡೀಷನಿಂಗ್ ಇಂಜಿನಿಯರ್ಸ್ (ಇಸ್ರಾಯ್) ಕ್ಲಬ್ ನ ಉದ್ಘಾಟನೆ ಹಾಗೂ ಲಾಂಛನ ಅನಾವರಣ ಸಮಾರಂಭ ಯಾಂತ್ರಿಕ ವಿಭಾಗದಿಂದ ನಡೆಯಿತು. ಯಾಂತ್ರಿಕ ವಿಭಾಗದ ಮುಖ್ಯಸ್ಥ ಡಾ. ಉಮಾಶಂಕರ್ ಕೆ. ಎಸ್. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮೂಡಬಿದ್ರೆಯ ಎಸ್.ಕೆ.ಎಫ್ ಬೋಯ್ಲರ್ಸ್ ಆಂಡ್ ಡ್ರೈಯರ್ಸ್ ಪ್ರೈ.ಲಿಮೊಟೆಡ್ ನ ತಾಂತ್ರಿಕ ನಿರ್ದೇಶಕ ಪ್ರಜ್ವಲ್ ಆಚಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದ ಸಂಯೋಜಕ ಸುಧೀರ್ ಕೆ.ವಿ. ಸ್ವಾಗತಿಸಿ, ಗೋಕುಲ್ ದಾಸ್ ಅವರು ವಂದಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನ ಮಹತ್ವದ ಬಗ್ಗೆ ಪ್ರಜ್ವಲ್ ಆಚಾರ್ ಮಾಹಿತಿ ನೀಡಿದರು. ಕ್ಲಬ್ ನ 3ನೇ ವರ್ಷದ ಯಾಂತ್ರಿಕ ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಥೆಯ ವತಿಯಿಂದ ಯಾಂತ್ರಿಕ ತರಬೇತಿಯನ್ನು ನೀಡುವುದಾಗಿ ಅವರು ಹೇಳಿದರು.
ಪ್ರೋ. ರಾಘವೇಂದ್ರ ಕಾಮತ್ ಹಾಗೂ ಶಶಾಂಕ್ ಕಾರ್ಯಕ್ರಮ ನಿರೂಪಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…