ಸುಳ್ಯ:ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಡಿಯನ್ ಸೊಸೈಟಿ ಆಫ್ ಹೀಟಿಂಗ್, ರೆಫ್ರಿಜರೇಶನ್ ಆಂಡ್ ಏರ್ ಕಂಡೀಷನಿಂಗ್ ಇಂಜಿನಿಯರ್ಸ್ (ಇಸ್ರಾಯ್) ಕ್ಲಬ್ ನ ಉದ್ಘಾಟನೆ ಹಾಗೂ ಲಾಂಛನ ಅನಾವರಣ ಸಮಾರಂಭ ಯಾಂತ್ರಿಕ ವಿಭಾಗದಿಂದ ನಡೆಯಿತು. ಯಾಂತ್ರಿಕ ವಿಭಾಗದ ಮುಖ್ಯಸ್ಥ ಡಾ. ಉಮಾಶಂಕರ್ ಕೆ. ಎಸ್. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮೂಡಬಿದ್ರೆಯ ಎಸ್.ಕೆ.ಎಫ್ ಬೋಯ್ಲರ್ಸ್ ಆಂಡ್ ಡ್ರೈಯರ್ಸ್ ಪ್ರೈ.ಲಿಮೊಟೆಡ್ ನ ತಾಂತ್ರಿಕ ನಿರ್ದೇಶಕ ಪ್ರಜ್ವಲ್ ಆಚಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದ ಸಂಯೋಜಕ ಸುಧೀರ್ ಕೆ.ವಿ. ಸ್ವಾಗತಿಸಿ, ಗೋಕುಲ್ ದಾಸ್ ಅವರು ವಂದಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನ ಮಹತ್ವದ ಬಗ್ಗೆ ಪ್ರಜ್ವಲ್ ಆಚಾರ್ ಮಾಹಿತಿ ನೀಡಿದರು. ಕ್ಲಬ್ ನ 3ನೇ ವರ್ಷದ ಯಾಂತ್ರಿಕ ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಥೆಯ ವತಿಯಿಂದ ಯಾಂತ್ರಿಕ ತರಬೇತಿಯನ್ನು ನೀಡುವುದಾಗಿ ಅವರು ಹೇಳಿದರು.
ಪ್ರೋ. ರಾಘವೇಂದ್ರ ಕಾಮತ್ ಹಾಗೂ ಶಶಾಂಕ್ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…