ಸುಳ್ಯ:ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಡಿಯನ್ ಸೊಸೈಟಿ ಆಫ್ ಹೀಟಿಂಗ್, ರೆಫ್ರಿಜರೇಶನ್ ಆಂಡ್ ಏರ್ ಕಂಡೀಷನಿಂಗ್ ಇಂಜಿನಿಯರ್ಸ್ (ಇಸ್ರಾಯ್) ಕ್ಲಬ್ ನ ಉದ್ಘಾಟನೆ ಹಾಗೂ ಲಾಂಛನ ಅನಾವರಣ ಸಮಾರಂಭ ಯಾಂತ್ರಿಕ ವಿಭಾಗದಿಂದ ನಡೆಯಿತು. ಯಾಂತ್ರಿಕ ವಿಭಾಗದ ಮುಖ್ಯಸ್ಥ ಡಾ. ಉಮಾಶಂಕರ್ ಕೆ. ಎಸ್. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮೂಡಬಿದ್ರೆಯ ಎಸ್.ಕೆ.ಎಫ್ ಬೋಯ್ಲರ್ಸ್ ಆಂಡ್ ಡ್ರೈಯರ್ಸ್ ಪ್ರೈ.ಲಿಮೊಟೆಡ್ ನ ತಾಂತ್ರಿಕ ನಿರ್ದೇಶಕ ಪ್ರಜ್ವಲ್ ಆಚಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದ ಸಂಯೋಜಕ ಸುಧೀರ್ ಕೆ.ವಿ. ಸ್ವಾಗತಿಸಿ, ಗೋಕುಲ್ ದಾಸ್ ಅವರು ವಂದಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನ ಮಹತ್ವದ ಬಗ್ಗೆ ಪ್ರಜ್ವಲ್ ಆಚಾರ್ ಮಾಹಿತಿ ನೀಡಿದರು. ಕ್ಲಬ್ ನ 3ನೇ ವರ್ಷದ ಯಾಂತ್ರಿಕ ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಥೆಯ ವತಿಯಿಂದ ಯಾಂತ್ರಿಕ ತರಬೇತಿಯನ್ನು ನೀಡುವುದಾಗಿ ಅವರು ಹೇಳಿದರು.
ಪ್ರೋ. ರಾಘವೇಂದ್ರ ಕಾಮತ್ ಹಾಗೂ ಶಶಾಂಕ್ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…