Advertisement
ಅನುಕ್ರಮ

ಇಂದು ಗೆಳೆಯರ ದಿನ | ಗೆಳೆಯರೇ ನಿಮಗೆ ಶುಭಾಶಯ…….

Share

ಮಾತಿಗೆ ಕಿವಿಯಾಗುವ, ದುಃಖಕ್ಕೆ ಮರುಗುವ, ನಗುವಾಗ ನಗುವ ,ಅಳುವಾಗ ಕಣ್ಣೊರೆಸುವ, ಬಿದ್ದಾಗ ಎಬ್ಬಿಸುವ, ನೋವಿನಲ್ಲಿರುವಾಗ ಬೆನ್ನು ತಟ್ಟಿ ಸಮಾಧಾನಿಸುವ ಮನಸಿರುವುದು‌ ಗೆಳೆಯರಿಗೆ ಮಾತ್ರ.

ಯಾವುದೇ ಸ್ವಾರ್ಥವಿಲ್ಲದ , ಪ್ರೀತಿ ಸಿಗುವುದು ಗೆಳೆತನದಲ್ಲಿ. ಜಗತ್ತಿನಲ್ಲಿ ಉದಾಹರಣೆ ಯಾಗಬಲ್ಲ ಹಲವು ಮಿತ್ರ ಜೋಡಿಗಳಿವೆ. ಅವುಗಳಲ್ಲೆಲ್ಲ ನನ್ನ ಮಟ್ಟಿಗೆ ಶ್ರೇಷ್ಠವಾದ , ಇಷ್ಟವಾದ ಜೀವದ ಗೆಳೆಯರೆಂದರೆ  ಕೃಷ್ಣ, ಸುಧಾಮರು. ನಿಸ್ವಾರ್ಥ ಸ್ನೇಹಕ್ಕೆ ಯಾವಾಗಲು ಸೂಕ್ತ ಉದಾಹರಣೆ. ಗುರುಕುಲದಲ್ಲಿ ವಿದ್ಯಾರ್ಥಿ ಗಳೆಲ್ಲರೂ ಸಮಾನರು. ಅಂತಸ್ತಿನ ಹಂಗು ಅಲ್ಲಿರಲಿಲ್ಲ. ಗುರುಗಳ ಮುಂದೆ ಎಲ್ಲರೂ ಸಮಾನರು. ಬದುಕಿನ ಕ್ಷಣಗಳು ದುರ್ಬರವಾದಾಗ ಸುಧಾಮನ ಪತ್ನಿ ಗೆಳೆಯನ ಸಹಾಯ ಕೇಳಬಹುದಲ್ಲವೆಂದರೂ ಮನಸಿಲ್ಲದ ಮನಸಿನಿಂದ ಕೃಷ್ಣ ನ ಬಳಿಗೆ ಹೊರಟನು. ಅವಲಕ್ಕಿ ಕೃಷ್ಣ ನಿಗೆ ಪ್ರೀತಿಯೆಂದು ಆತನಿಗಾಗಿ ಮರೆಯದೆ ಕಟ್ಟಿಕೊಂಡನು. ಕೃಷ್ಣ ಎದುರಾದಾಗ ತನ್ನೆಲ್ಲಾ ಕಷ್ಟಗಳನ್ನು ಮರೆತು ಆತನ ಆನಂದದಲ್ಲಿ ತಾನು ಒಂದಾದ ಸುಧಾಮ. ಕೃಷ್ಣನೋ ಬಹು ಜಾಣ. ಸುಧಾಮನ ಮನೆವಾರ್ತೆಯ ಕುರಿತು ಏನೇನೂ ವಿಚಾರಿಸದೆ ಗುರುಕುಲದ ಸಮಯವನ್ನು ಮೆಲುಕು ಹಾಕುವುದರಲ್ಲೇ ಕಳೆದ. ಜೊತೆಗಿದ್ದ ನಾಲ್ಲು ದಿನಗಳು ಸಂತೋಷವಾಗಿ ಕಳೆದವು. ಕೃಷ್ಣ ನಿಂದ ಬೀಳ್ಗೊಂಡು ತನ್ನೂರಿಗೆ ಬಂದಾಗಲೇ ಸುಧಾಮನರಿವಿಗೆ ಬಂದದ್ದು ಕೃಷ್ಣನ ಮಹಿಮೆಯೇನೆಂದು.

ಗೆಳೆತನವೆಂದರೆ ಹಾಗೇ ಹೇಳದೇ ಅರಿಯಬೇಕು ನೋವ, ಕೇಳದೇ ಕೊಡಬೇಕು‌‌ ಅಕ್ಕರೆಯ, ಅಲ್ಲಿ ಕೊಡು ಕೊಳ್ಳುವ ವ್ಯವಹಾರಕ್ಕಿರಬಾರದು ಜಾಗ. ಗೆಳೆತನದ ಪ್ರೀತಿಯ ಮುಂದೆ ಬೇರೆಲ್ಲಾ ಗೌಣ. ಜೀವನದ ಎಲ್ಲಾ ಕ್ಷಣಗಳಲ್ಲಿ ಒಟ್ಟಿಗೇ ಇರ ಬೇಕೆಂದಿಲ್ಲ. ಶಾಲಾ ದಿನಗಳಲ್ಲಿ ಇದ್ದಂತೆ ಅವಾಗಾವಗ ಬೇಟಿಯಾಗುವುದು ಕಷ್ಟವೇ . ವಿವಿಧ ಕಾರಣಗಳಿಂದ ದೂರವಾಗಿರುವ ಗೆಳೆಯರು ಮಾನಸಿಕವಾಗಿ ಒಟ್ಟಿಗೇ ಇರುತ್ತಾರೆ. ಹೇಗೆಂದು ಅರ್ಥವಾಗದು. ತುಂಬಾ ಬೇಜಾರಾದಾಗ, ಮನಸಿಗೆ ಹಿಂಸೆಯೆನಿಸಿದಾಗ, ಒಂಟಿತನ ಕಾಡಿದಾಗ , ಇಂದು ಮಾತನಾಡಲೇ ಬೇಕು ಎನಿಸಿದಾಗ ನನ್ನ ಸ್ನೇಹಿತೆಯರು ಯಾವಾಗಲೂ ಸ್ಪಂಧಿಸುತ್ತಾರೆ ಎಂಬುದು ನನ್ನ ಭಾಗ್ಯವೇ ಸರಿ. ನಾನು ಹೆಮ್ಮೆಯಿಂದ ಹೇಳುವೆ ನನಗೂ ಭಾವನೆಗಳನ್ನು ಹಂಚಿಕೊಳ್ಳಲು ಮಿತ್ರರಿದ್ದಾರೆ ಎಂದು. ಎಲ್ಲರಿಗೂ   Happy friendship day.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

14 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

15 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

17 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

17 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago