ಅನುಕ್ರಮ

ಇಂದು ಗೆಳೆಯರ ದಿನ | ಗೆಳೆಯರೇ ನಿಮಗೆ ಶುಭಾಶಯ…….

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಾತಿಗೆ ಕಿವಿಯಾಗುವ, ದುಃಖಕ್ಕೆ ಮರುಗುವ, ನಗುವಾಗ ನಗುವ ,ಅಳುವಾಗ ಕಣ್ಣೊರೆಸುವ, ಬಿದ್ದಾಗ ಎಬ್ಬಿಸುವ, ನೋವಿನಲ್ಲಿರುವಾಗ ಬೆನ್ನು ತಟ್ಟಿ ಸಮಾಧಾನಿಸುವ ಮನಸಿರುವುದು‌ ಗೆಳೆಯರಿಗೆ ಮಾತ್ರ.

Advertisement
Advertisement

ಯಾವುದೇ ಸ್ವಾರ್ಥವಿಲ್ಲದ , ಪ್ರೀತಿ ಸಿಗುವುದು ಗೆಳೆತನದಲ್ಲಿ. ಜಗತ್ತಿನಲ್ಲಿ ಉದಾಹರಣೆ ಯಾಗಬಲ್ಲ ಹಲವು ಮಿತ್ರ ಜೋಡಿಗಳಿವೆ. ಅವುಗಳಲ್ಲೆಲ್ಲ ನನ್ನ ಮಟ್ಟಿಗೆ ಶ್ರೇಷ್ಠವಾದ , ಇಷ್ಟವಾದ ಜೀವದ ಗೆಳೆಯರೆಂದರೆ  ಕೃಷ್ಣ, ಸುಧಾಮರು. ನಿಸ್ವಾರ್ಥ ಸ್ನೇಹಕ್ಕೆ ಯಾವಾಗಲು ಸೂಕ್ತ ಉದಾಹರಣೆ. ಗುರುಕುಲದಲ್ಲಿ ವಿದ್ಯಾರ್ಥಿ ಗಳೆಲ್ಲರೂ ಸಮಾನರು. ಅಂತಸ್ತಿನ ಹಂಗು ಅಲ್ಲಿರಲಿಲ್ಲ. ಗುರುಗಳ ಮುಂದೆ ಎಲ್ಲರೂ ಸಮಾನರು. ಬದುಕಿನ ಕ್ಷಣಗಳು ದುರ್ಬರವಾದಾಗ ಸುಧಾಮನ ಪತ್ನಿ ಗೆಳೆಯನ ಸಹಾಯ ಕೇಳಬಹುದಲ್ಲವೆಂದರೂ ಮನಸಿಲ್ಲದ ಮನಸಿನಿಂದ ಕೃಷ್ಣ ನ ಬಳಿಗೆ ಹೊರಟನು. ಅವಲಕ್ಕಿ ಕೃಷ್ಣ ನಿಗೆ ಪ್ರೀತಿಯೆಂದು ಆತನಿಗಾಗಿ ಮರೆಯದೆ ಕಟ್ಟಿಕೊಂಡನು. ಕೃಷ್ಣ ಎದುರಾದಾಗ ತನ್ನೆಲ್ಲಾ ಕಷ್ಟಗಳನ್ನು ಮರೆತು ಆತನ ಆನಂದದಲ್ಲಿ ತಾನು ಒಂದಾದ ಸುಧಾಮ. ಕೃಷ್ಣನೋ ಬಹು ಜಾಣ. ಸುಧಾಮನ ಮನೆವಾರ್ತೆಯ ಕುರಿತು ಏನೇನೂ ವಿಚಾರಿಸದೆ ಗುರುಕುಲದ ಸಮಯವನ್ನು ಮೆಲುಕು ಹಾಕುವುದರಲ್ಲೇ ಕಳೆದ. ಜೊತೆಗಿದ್ದ ನಾಲ್ಲು ದಿನಗಳು ಸಂತೋಷವಾಗಿ ಕಳೆದವು. ಕೃಷ್ಣ ನಿಂದ ಬೀಳ್ಗೊಂಡು ತನ್ನೂರಿಗೆ ಬಂದಾಗಲೇ ಸುಧಾಮನರಿವಿಗೆ ಬಂದದ್ದು ಕೃಷ್ಣನ ಮಹಿಮೆಯೇನೆಂದು.

ಗೆಳೆತನವೆಂದರೆ ಹಾಗೇ ಹೇಳದೇ ಅರಿಯಬೇಕು ನೋವ, ಕೇಳದೇ ಕೊಡಬೇಕು‌‌ ಅಕ್ಕರೆಯ, ಅಲ್ಲಿ ಕೊಡು ಕೊಳ್ಳುವ ವ್ಯವಹಾರಕ್ಕಿರಬಾರದು ಜಾಗ. ಗೆಳೆತನದ ಪ್ರೀತಿಯ ಮುಂದೆ ಬೇರೆಲ್ಲಾ ಗೌಣ. ಜೀವನದ ಎಲ್ಲಾ ಕ್ಷಣಗಳಲ್ಲಿ ಒಟ್ಟಿಗೇ ಇರ ಬೇಕೆಂದಿಲ್ಲ. ಶಾಲಾ ದಿನಗಳಲ್ಲಿ ಇದ್ದಂತೆ ಅವಾಗಾವಗ ಬೇಟಿಯಾಗುವುದು ಕಷ್ಟವೇ . ವಿವಿಧ ಕಾರಣಗಳಿಂದ ದೂರವಾಗಿರುವ ಗೆಳೆಯರು ಮಾನಸಿಕವಾಗಿ ಒಟ್ಟಿಗೇ ಇರುತ್ತಾರೆ. ಹೇಗೆಂದು ಅರ್ಥವಾಗದು. ತುಂಬಾ ಬೇಜಾರಾದಾಗ, ಮನಸಿಗೆ ಹಿಂಸೆಯೆನಿಸಿದಾಗ, ಒಂಟಿತನ ಕಾಡಿದಾಗ , ಇಂದು ಮಾತನಾಡಲೇ ಬೇಕು ಎನಿಸಿದಾಗ ನನ್ನ ಸ್ನೇಹಿತೆಯರು ಯಾವಾಗಲೂ ಸ್ಪಂಧಿಸುತ್ತಾರೆ ಎಂಬುದು ನನ್ನ ಭಾಗ್ಯವೇ ಸರಿ. ನಾನು ಹೆಮ್ಮೆಯಿಂದ ಹೇಳುವೆ ನನಗೂ ಭಾವನೆಗಳನ್ನು ಹಂಚಿಕೊಳ್ಳಲು ಮಿತ್ರರಿದ್ದಾರೆ ಎಂದು. ಎಲ್ಲರಿಗೂ   Happy friendship day.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

2 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

2 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

3 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

3 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

3 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

3 hours ago