Advertisement
ಅಂಕಣ

ಇಂದು ಗೆಳೆಯರ ದಿನ | ಗೆಳೆಯರೇ ನಿಮಗೆ ಶುಭಾಶಯ…….

Share

ಮಾತಿಗೆ ಕಿವಿಯಾಗುವ, ದುಃಖಕ್ಕೆ ಮರುಗುವ, ನಗುವಾಗ ನಗುವ ,ಅಳುವಾಗ ಕಣ್ಣೊರೆಸುವ, ಬಿದ್ದಾಗ ಎಬ್ಬಿಸುವ, ನೋವಿನಲ್ಲಿರುವಾಗ ಬೆನ್ನು ತಟ್ಟಿ ಸಮಾಧಾನಿಸುವ ಮನಸಿರುವುದು‌ ಗೆಳೆಯರಿಗೆ ಮಾತ್ರ.

Advertisement
Advertisement

ಯಾವುದೇ ಸ್ವಾರ್ಥವಿಲ್ಲದ , ಪ್ರೀತಿ ಸಿಗುವುದು ಗೆಳೆತನದಲ್ಲಿ. ಜಗತ್ತಿನಲ್ಲಿ ಉದಾಹರಣೆ ಯಾಗಬಲ್ಲ ಹಲವು ಮಿತ್ರ ಜೋಡಿಗಳಿವೆ. ಅವುಗಳಲ್ಲೆಲ್ಲ ನನ್ನ ಮಟ್ಟಿಗೆ ಶ್ರೇಷ್ಠವಾದ , ಇಷ್ಟವಾದ ಜೀವದ ಗೆಳೆಯರೆಂದರೆ  ಕೃಷ್ಣ, ಸುಧಾಮರು. ನಿಸ್ವಾರ್ಥ ಸ್ನೇಹಕ್ಕೆ ಯಾವಾಗಲು ಸೂಕ್ತ ಉದಾಹರಣೆ. ಗುರುಕುಲದಲ್ಲಿ ವಿದ್ಯಾರ್ಥಿ ಗಳೆಲ್ಲರೂ ಸಮಾನರು. ಅಂತಸ್ತಿನ ಹಂಗು ಅಲ್ಲಿರಲಿಲ್ಲ. ಗುರುಗಳ ಮುಂದೆ ಎಲ್ಲರೂ ಸಮಾನರು. ಬದುಕಿನ ಕ್ಷಣಗಳು ದುರ್ಬರವಾದಾಗ ಸುಧಾಮನ ಪತ್ನಿ ಗೆಳೆಯನ ಸಹಾಯ ಕೇಳಬಹುದಲ್ಲವೆಂದರೂ ಮನಸಿಲ್ಲದ ಮನಸಿನಿಂದ ಕೃಷ್ಣ ನ ಬಳಿಗೆ ಹೊರಟನು. ಅವಲಕ್ಕಿ ಕೃಷ್ಣ ನಿಗೆ ಪ್ರೀತಿಯೆಂದು ಆತನಿಗಾಗಿ ಮರೆಯದೆ ಕಟ್ಟಿಕೊಂಡನು. ಕೃಷ್ಣ ಎದುರಾದಾಗ ತನ್ನೆಲ್ಲಾ ಕಷ್ಟಗಳನ್ನು ಮರೆತು ಆತನ ಆನಂದದಲ್ಲಿ ತಾನು ಒಂದಾದ ಸುಧಾಮ. ಕೃಷ್ಣನೋ ಬಹು ಜಾಣ. ಸುಧಾಮನ ಮನೆವಾರ್ತೆಯ ಕುರಿತು ಏನೇನೂ ವಿಚಾರಿಸದೆ ಗುರುಕುಲದ ಸಮಯವನ್ನು ಮೆಲುಕು ಹಾಕುವುದರಲ್ಲೇ ಕಳೆದ. ಜೊತೆಗಿದ್ದ ನಾಲ್ಲು ದಿನಗಳು ಸಂತೋಷವಾಗಿ ಕಳೆದವು. ಕೃಷ್ಣ ನಿಂದ ಬೀಳ್ಗೊಂಡು ತನ್ನೂರಿಗೆ ಬಂದಾಗಲೇ ಸುಧಾಮನರಿವಿಗೆ ಬಂದದ್ದು ಕೃಷ್ಣನ ಮಹಿಮೆಯೇನೆಂದು.

Advertisement

ಗೆಳೆತನವೆಂದರೆ ಹಾಗೇ ಹೇಳದೇ ಅರಿಯಬೇಕು ನೋವ, ಕೇಳದೇ ಕೊಡಬೇಕು‌‌ ಅಕ್ಕರೆಯ, ಅಲ್ಲಿ ಕೊಡು ಕೊಳ್ಳುವ ವ್ಯವಹಾರಕ್ಕಿರಬಾರದು ಜಾಗ. ಗೆಳೆತನದ ಪ್ರೀತಿಯ ಮುಂದೆ ಬೇರೆಲ್ಲಾ ಗೌಣ. ಜೀವನದ ಎಲ್ಲಾ ಕ್ಷಣಗಳಲ್ಲಿ ಒಟ್ಟಿಗೇ ಇರ ಬೇಕೆಂದಿಲ್ಲ. ಶಾಲಾ ದಿನಗಳಲ್ಲಿ ಇದ್ದಂತೆ ಅವಾಗಾವಗ ಬೇಟಿಯಾಗುವುದು ಕಷ್ಟವೇ . ವಿವಿಧ ಕಾರಣಗಳಿಂದ ದೂರವಾಗಿರುವ ಗೆಳೆಯರು ಮಾನಸಿಕವಾಗಿ ಒಟ್ಟಿಗೇ ಇರುತ್ತಾರೆ. ಹೇಗೆಂದು ಅರ್ಥವಾಗದು. ತುಂಬಾ ಬೇಜಾರಾದಾಗ, ಮನಸಿಗೆ ಹಿಂಸೆಯೆನಿಸಿದಾಗ, ಒಂಟಿತನ ಕಾಡಿದಾಗ , ಇಂದು ಮಾತನಾಡಲೇ ಬೇಕು ಎನಿಸಿದಾಗ ನನ್ನ ಸ್ನೇಹಿತೆಯರು ಯಾವಾಗಲೂ ಸ್ಪಂಧಿಸುತ್ತಾರೆ ಎಂಬುದು ನನ್ನ ಭಾಗ್ಯವೇ ಸರಿ. ನಾನು ಹೆಮ್ಮೆಯಿಂದ ಹೇಳುವೆ ನನಗೂ ಭಾವನೆಗಳನ್ನು ಹಂಚಿಕೊಳ್ಳಲು ಮಿತ್ರರಿದ್ದಾರೆ ಎಂದು. ಎಲ್ಲರಿಗೂ   Happy friendship day.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

6 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

7 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

15 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

15 hours ago