Advertisement
ಅನುಕ್ರಮ

ಇಂದು ಗೆಳೆಯರ ದಿನ | ಗೆಳೆಯರೇ ನಿಮಗೆ ಶುಭಾಶಯ…….

Share

ಮಾತಿಗೆ ಕಿವಿಯಾಗುವ, ದುಃಖಕ್ಕೆ ಮರುಗುವ, ನಗುವಾಗ ನಗುವ ,ಅಳುವಾಗ ಕಣ್ಣೊರೆಸುವ, ಬಿದ್ದಾಗ ಎಬ್ಬಿಸುವ, ನೋವಿನಲ್ಲಿರುವಾಗ ಬೆನ್ನು ತಟ್ಟಿ ಸಮಾಧಾನಿಸುವ ಮನಸಿರುವುದು‌ ಗೆಳೆಯರಿಗೆ ಮಾತ್ರ.

ಯಾವುದೇ ಸ್ವಾರ್ಥವಿಲ್ಲದ , ಪ್ರೀತಿ ಸಿಗುವುದು ಗೆಳೆತನದಲ್ಲಿ. ಜಗತ್ತಿನಲ್ಲಿ ಉದಾಹರಣೆ ಯಾಗಬಲ್ಲ ಹಲವು ಮಿತ್ರ ಜೋಡಿಗಳಿವೆ. ಅವುಗಳಲ್ಲೆಲ್ಲ ನನ್ನ ಮಟ್ಟಿಗೆ ಶ್ರೇಷ್ಠವಾದ , ಇಷ್ಟವಾದ ಜೀವದ ಗೆಳೆಯರೆಂದರೆ  ಕೃಷ್ಣ, ಸುಧಾಮರು. ನಿಸ್ವಾರ್ಥ ಸ್ನೇಹಕ್ಕೆ ಯಾವಾಗಲು ಸೂಕ್ತ ಉದಾಹರಣೆ. ಗುರುಕುಲದಲ್ಲಿ ವಿದ್ಯಾರ್ಥಿ ಗಳೆಲ್ಲರೂ ಸಮಾನರು. ಅಂತಸ್ತಿನ ಹಂಗು ಅಲ್ಲಿರಲಿಲ್ಲ. ಗುರುಗಳ ಮುಂದೆ ಎಲ್ಲರೂ ಸಮಾನರು. ಬದುಕಿನ ಕ್ಷಣಗಳು ದುರ್ಬರವಾದಾಗ ಸುಧಾಮನ ಪತ್ನಿ ಗೆಳೆಯನ ಸಹಾಯ ಕೇಳಬಹುದಲ್ಲವೆಂದರೂ ಮನಸಿಲ್ಲದ ಮನಸಿನಿಂದ ಕೃಷ್ಣ ನ ಬಳಿಗೆ ಹೊರಟನು. ಅವಲಕ್ಕಿ ಕೃಷ್ಣ ನಿಗೆ ಪ್ರೀತಿಯೆಂದು ಆತನಿಗಾಗಿ ಮರೆಯದೆ ಕಟ್ಟಿಕೊಂಡನು. ಕೃಷ್ಣ ಎದುರಾದಾಗ ತನ್ನೆಲ್ಲಾ ಕಷ್ಟಗಳನ್ನು ಮರೆತು ಆತನ ಆನಂದದಲ್ಲಿ ತಾನು ಒಂದಾದ ಸುಧಾಮ. ಕೃಷ್ಣನೋ ಬಹು ಜಾಣ. ಸುಧಾಮನ ಮನೆವಾರ್ತೆಯ ಕುರಿತು ಏನೇನೂ ವಿಚಾರಿಸದೆ ಗುರುಕುಲದ ಸಮಯವನ್ನು ಮೆಲುಕು ಹಾಕುವುದರಲ್ಲೇ ಕಳೆದ. ಜೊತೆಗಿದ್ದ ನಾಲ್ಲು ದಿನಗಳು ಸಂತೋಷವಾಗಿ ಕಳೆದವು. ಕೃಷ್ಣ ನಿಂದ ಬೀಳ್ಗೊಂಡು ತನ್ನೂರಿಗೆ ಬಂದಾಗಲೇ ಸುಧಾಮನರಿವಿಗೆ ಬಂದದ್ದು ಕೃಷ್ಣನ ಮಹಿಮೆಯೇನೆಂದು.

ಗೆಳೆತನವೆಂದರೆ ಹಾಗೇ ಹೇಳದೇ ಅರಿಯಬೇಕು ನೋವ, ಕೇಳದೇ ಕೊಡಬೇಕು‌‌ ಅಕ್ಕರೆಯ, ಅಲ್ಲಿ ಕೊಡು ಕೊಳ್ಳುವ ವ್ಯವಹಾರಕ್ಕಿರಬಾರದು ಜಾಗ. ಗೆಳೆತನದ ಪ್ರೀತಿಯ ಮುಂದೆ ಬೇರೆಲ್ಲಾ ಗೌಣ. ಜೀವನದ ಎಲ್ಲಾ ಕ್ಷಣಗಳಲ್ಲಿ ಒಟ್ಟಿಗೇ ಇರ ಬೇಕೆಂದಿಲ್ಲ. ಶಾಲಾ ದಿನಗಳಲ್ಲಿ ಇದ್ದಂತೆ ಅವಾಗಾವಗ ಬೇಟಿಯಾಗುವುದು ಕಷ್ಟವೇ . ವಿವಿಧ ಕಾರಣಗಳಿಂದ ದೂರವಾಗಿರುವ ಗೆಳೆಯರು ಮಾನಸಿಕವಾಗಿ ಒಟ್ಟಿಗೇ ಇರುತ್ತಾರೆ. ಹೇಗೆಂದು ಅರ್ಥವಾಗದು. ತುಂಬಾ ಬೇಜಾರಾದಾಗ, ಮನಸಿಗೆ ಹಿಂಸೆಯೆನಿಸಿದಾಗ, ಒಂಟಿತನ ಕಾಡಿದಾಗ , ಇಂದು ಮಾತನಾಡಲೇ ಬೇಕು ಎನಿಸಿದಾಗ ನನ್ನ ಸ್ನೇಹಿತೆಯರು ಯಾವಾಗಲೂ ಸ್ಪಂಧಿಸುತ್ತಾರೆ ಎಂಬುದು ನನ್ನ ಭಾಗ್ಯವೇ ಸರಿ. ನಾನು ಹೆಮ್ಮೆಯಿಂದ ಹೇಳುವೆ ನನಗೂ ಭಾವನೆಗಳನ್ನು ಹಂಚಿಕೊಳ್ಳಲು ಮಿತ್ರರಿದ್ದಾರೆ ಎಂದು. ಎಲ್ಲರಿಗೂ   Happy friendship day.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

6 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

6 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

15 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

23 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago