Advertisement
ಅನುಕ್ರಮ

ಇಂದು ಗೆಳೆಯರ ದಿನ | ಗೆಳೆಯರೇ ನಿಮಗೆ ಶುಭಾಶಯ…….

Share

ಮಾತಿಗೆ ಕಿವಿಯಾಗುವ, ದುಃಖಕ್ಕೆ ಮರುಗುವ, ನಗುವಾಗ ನಗುವ ,ಅಳುವಾಗ ಕಣ್ಣೊರೆಸುವ, ಬಿದ್ದಾಗ ಎಬ್ಬಿಸುವ, ನೋವಿನಲ್ಲಿರುವಾಗ ಬೆನ್ನು ತಟ್ಟಿ ಸಮಾಧಾನಿಸುವ ಮನಸಿರುವುದು‌ ಗೆಳೆಯರಿಗೆ ಮಾತ್ರ.

ಯಾವುದೇ ಸ್ವಾರ್ಥವಿಲ್ಲದ , ಪ್ರೀತಿ ಸಿಗುವುದು ಗೆಳೆತನದಲ್ಲಿ. ಜಗತ್ತಿನಲ್ಲಿ ಉದಾಹರಣೆ ಯಾಗಬಲ್ಲ ಹಲವು ಮಿತ್ರ ಜೋಡಿಗಳಿವೆ. ಅವುಗಳಲ್ಲೆಲ್ಲ ನನ್ನ ಮಟ್ಟಿಗೆ ಶ್ರೇಷ್ಠವಾದ , ಇಷ್ಟವಾದ ಜೀವದ ಗೆಳೆಯರೆಂದರೆ  ಕೃಷ್ಣ, ಸುಧಾಮರು. ನಿಸ್ವಾರ್ಥ ಸ್ನೇಹಕ್ಕೆ ಯಾವಾಗಲು ಸೂಕ್ತ ಉದಾಹರಣೆ. ಗುರುಕುಲದಲ್ಲಿ ವಿದ್ಯಾರ್ಥಿ ಗಳೆಲ್ಲರೂ ಸಮಾನರು. ಅಂತಸ್ತಿನ ಹಂಗು ಅಲ್ಲಿರಲಿಲ್ಲ. ಗುರುಗಳ ಮುಂದೆ ಎಲ್ಲರೂ ಸಮಾನರು. ಬದುಕಿನ ಕ್ಷಣಗಳು ದುರ್ಬರವಾದಾಗ ಸುಧಾಮನ ಪತ್ನಿ ಗೆಳೆಯನ ಸಹಾಯ ಕೇಳಬಹುದಲ್ಲವೆಂದರೂ ಮನಸಿಲ್ಲದ ಮನಸಿನಿಂದ ಕೃಷ್ಣ ನ ಬಳಿಗೆ ಹೊರಟನು. ಅವಲಕ್ಕಿ ಕೃಷ್ಣ ನಿಗೆ ಪ್ರೀತಿಯೆಂದು ಆತನಿಗಾಗಿ ಮರೆಯದೆ ಕಟ್ಟಿಕೊಂಡನು. ಕೃಷ್ಣ ಎದುರಾದಾಗ ತನ್ನೆಲ್ಲಾ ಕಷ್ಟಗಳನ್ನು ಮರೆತು ಆತನ ಆನಂದದಲ್ಲಿ ತಾನು ಒಂದಾದ ಸುಧಾಮ. ಕೃಷ್ಣನೋ ಬಹು ಜಾಣ. ಸುಧಾಮನ ಮನೆವಾರ್ತೆಯ ಕುರಿತು ಏನೇನೂ ವಿಚಾರಿಸದೆ ಗುರುಕುಲದ ಸಮಯವನ್ನು ಮೆಲುಕು ಹಾಕುವುದರಲ್ಲೇ ಕಳೆದ. ಜೊತೆಗಿದ್ದ ನಾಲ್ಲು ದಿನಗಳು ಸಂತೋಷವಾಗಿ ಕಳೆದವು. ಕೃಷ್ಣ ನಿಂದ ಬೀಳ್ಗೊಂಡು ತನ್ನೂರಿಗೆ ಬಂದಾಗಲೇ ಸುಧಾಮನರಿವಿಗೆ ಬಂದದ್ದು ಕೃಷ್ಣನ ಮಹಿಮೆಯೇನೆಂದು.

ಗೆಳೆತನವೆಂದರೆ ಹಾಗೇ ಹೇಳದೇ ಅರಿಯಬೇಕು ನೋವ, ಕೇಳದೇ ಕೊಡಬೇಕು‌‌ ಅಕ್ಕರೆಯ, ಅಲ್ಲಿ ಕೊಡು ಕೊಳ್ಳುವ ವ್ಯವಹಾರಕ್ಕಿರಬಾರದು ಜಾಗ. ಗೆಳೆತನದ ಪ್ರೀತಿಯ ಮುಂದೆ ಬೇರೆಲ್ಲಾ ಗೌಣ. ಜೀವನದ ಎಲ್ಲಾ ಕ್ಷಣಗಳಲ್ಲಿ ಒಟ್ಟಿಗೇ ಇರ ಬೇಕೆಂದಿಲ್ಲ. ಶಾಲಾ ದಿನಗಳಲ್ಲಿ ಇದ್ದಂತೆ ಅವಾಗಾವಗ ಬೇಟಿಯಾಗುವುದು ಕಷ್ಟವೇ . ವಿವಿಧ ಕಾರಣಗಳಿಂದ ದೂರವಾಗಿರುವ ಗೆಳೆಯರು ಮಾನಸಿಕವಾಗಿ ಒಟ್ಟಿಗೇ ಇರುತ್ತಾರೆ. ಹೇಗೆಂದು ಅರ್ಥವಾಗದು. ತುಂಬಾ ಬೇಜಾರಾದಾಗ, ಮನಸಿಗೆ ಹಿಂಸೆಯೆನಿಸಿದಾಗ, ಒಂಟಿತನ ಕಾಡಿದಾಗ , ಇಂದು ಮಾತನಾಡಲೇ ಬೇಕು ಎನಿಸಿದಾಗ ನನ್ನ ಸ್ನೇಹಿತೆಯರು ಯಾವಾಗಲೂ ಸ್ಪಂಧಿಸುತ್ತಾರೆ ಎಂಬುದು ನನ್ನ ಭಾಗ್ಯವೇ ಸರಿ. ನಾನು ಹೆಮ್ಮೆಯಿಂದ ಹೇಳುವೆ ನನಗೂ ಭಾವನೆಗಳನ್ನು ಹಂಚಿಕೊಳ್ಳಲು ಮಿತ್ರರಿದ್ದಾರೆ ಎಂದು. ಎಲ್ಲರಿಗೂ   Happy friendship day.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

4 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

6 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

12 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago