Advertisement
ಅನುಕ್ರಮ

ಇಂದು ಗೆಳೆಯರ ದಿನ | ಗೆಳೆಯರೇ ನಿಮಗೆ ಶುಭಾಶಯ…….

Share

ಮಾತಿಗೆ ಕಿವಿಯಾಗುವ, ದುಃಖಕ್ಕೆ ಮರುಗುವ, ನಗುವಾಗ ನಗುವ ,ಅಳುವಾಗ ಕಣ್ಣೊರೆಸುವ, ಬಿದ್ದಾಗ ಎಬ್ಬಿಸುವ, ನೋವಿನಲ್ಲಿರುವಾಗ ಬೆನ್ನು ತಟ್ಟಿ ಸಮಾಧಾನಿಸುವ ಮನಸಿರುವುದು‌ ಗೆಳೆಯರಿಗೆ ಮಾತ್ರ.

ಯಾವುದೇ ಸ್ವಾರ್ಥವಿಲ್ಲದ , ಪ್ರೀತಿ ಸಿಗುವುದು ಗೆಳೆತನದಲ್ಲಿ. ಜಗತ್ತಿನಲ್ಲಿ ಉದಾಹರಣೆ ಯಾಗಬಲ್ಲ ಹಲವು ಮಿತ್ರ ಜೋಡಿಗಳಿವೆ. ಅವುಗಳಲ್ಲೆಲ್ಲ ನನ್ನ ಮಟ್ಟಿಗೆ ಶ್ರೇಷ್ಠವಾದ , ಇಷ್ಟವಾದ ಜೀವದ ಗೆಳೆಯರೆಂದರೆ  ಕೃಷ್ಣ, ಸುಧಾಮರು. ನಿಸ್ವಾರ್ಥ ಸ್ನೇಹಕ್ಕೆ ಯಾವಾಗಲು ಸೂಕ್ತ ಉದಾಹರಣೆ. ಗುರುಕುಲದಲ್ಲಿ ವಿದ್ಯಾರ್ಥಿ ಗಳೆಲ್ಲರೂ ಸಮಾನರು. ಅಂತಸ್ತಿನ ಹಂಗು ಅಲ್ಲಿರಲಿಲ್ಲ. ಗುರುಗಳ ಮುಂದೆ ಎಲ್ಲರೂ ಸಮಾನರು. ಬದುಕಿನ ಕ್ಷಣಗಳು ದುರ್ಬರವಾದಾಗ ಸುಧಾಮನ ಪತ್ನಿ ಗೆಳೆಯನ ಸಹಾಯ ಕೇಳಬಹುದಲ್ಲವೆಂದರೂ ಮನಸಿಲ್ಲದ ಮನಸಿನಿಂದ ಕೃಷ್ಣ ನ ಬಳಿಗೆ ಹೊರಟನು. ಅವಲಕ್ಕಿ ಕೃಷ್ಣ ನಿಗೆ ಪ್ರೀತಿಯೆಂದು ಆತನಿಗಾಗಿ ಮರೆಯದೆ ಕಟ್ಟಿಕೊಂಡನು. ಕೃಷ್ಣ ಎದುರಾದಾಗ ತನ್ನೆಲ್ಲಾ ಕಷ್ಟಗಳನ್ನು ಮರೆತು ಆತನ ಆನಂದದಲ್ಲಿ ತಾನು ಒಂದಾದ ಸುಧಾಮ. ಕೃಷ್ಣನೋ ಬಹು ಜಾಣ. ಸುಧಾಮನ ಮನೆವಾರ್ತೆಯ ಕುರಿತು ಏನೇನೂ ವಿಚಾರಿಸದೆ ಗುರುಕುಲದ ಸಮಯವನ್ನು ಮೆಲುಕು ಹಾಕುವುದರಲ್ಲೇ ಕಳೆದ. ಜೊತೆಗಿದ್ದ ನಾಲ್ಲು ದಿನಗಳು ಸಂತೋಷವಾಗಿ ಕಳೆದವು. ಕೃಷ್ಣ ನಿಂದ ಬೀಳ್ಗೊಂಡು ತನ್ನೂರಿಗೆ ಬಂದಾಗಲೇ ಸುಧಾಮನರಿವಿಗೆ ಬಂದದ್ದು ಕೃಷ್ಣನ ಮಹಿಮೆಯೇನೆಂದು.

ಗೆಳೆತನವೆಂದರೆ ಹಾಗೇ ಹೇಳದೇ ಅರಿಯಬೇಕು ನೋವ, ಕೇಳದೇ ಕೊಡಬೇಕು‌‌ ಅಕ್ಕರೆಯ, ಅಲ್ಲಿ ಕೊಡು ಕೊಳ್ಳುವ ವ್ಯವಹಾರಕ್ಕಿರಬಾರದು ಜಾಗ. ಗೆಳೆತನದ ಪ್ರೀತಿಯ ಮುಂದೆ ಬೇರೆಲ್ಲಾ ಗೌಣ. ಜೀವನದ ಎಲ್ಲಾ ಕ್ಷಣಗಳಲ್ಲಿ ಒಟ್ಟಿಗೇ ಇರ ಬೇಕೆಂದಿಲ್ಲ. ಶಾಲಾ ದಿನಗಳಲ್ಲಿ ಇದ್ದಂತೆ ಅವಾಗಾವಗ ಬೇಟಿಯಾಗುವುದು ಕಷ್ಟವೇ . ವಿವಿಧ ಕಾರಣಗಳಿಂದ ದೂರವಾಗಿರುವ ಗೆಳೆಯರು ಮಾನಸಿಕವಾಗಿ ಒಟ್ಟಿಗೇ ಇರುತ್ತಾರೆ. ಹೇಗೆಂದು ಅರ್ಥವಾಗದು. ತುಂಬಾ ಬೇಜಾರಾದಾಗ, ಮನಸಿಗೆ ಹಿಂಸೆಯೆನಿಸಿದಾಗ, ಒಂಟಿತನ ಕಾಡಿದಾಗ , ಇಂದು ಮಾತನಾಡಲೇ ಬೇಕು ಎನಿಸಿದಾಗ ನನ್ನ ಸ್ನೇಹಿತೆಯರು ಯಾವಾಗಲೂ ಸ್ಪಂಧಿಸುತ್ತಾರೆ ಎಂಬುದು ನನ್ನ ಭಾಗ್ಯವೇ ಸರಿ. ನಾನು ಹೆಮ್ಮೆಯಿಂದ ಹೇಳುವೆ ನನಗೂ ಭಾವನೆಗಳನ್ನು ಹಂಚಿಕೊಳ್ಳಲು ಮಿತ್ರರಿದ್ದಾರೆ ಎಂದು. ಎಲ್ಲರಿಗೂ   Happy friendship day.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

4 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

4 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

9 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

9 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

9 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago