Advertisement
ಅನುಕ್ರಮ

ಇಂದು ಗೆಳೆಯರ ದಿನ | ಗೆಳೆಯರೇ ನಿಮಗೆ ಶುಭಾಶಯ…….

Share

ಮಾತಿಗೆ ಕಿವಿಯಾಗುವ, ದುಃಖಕ್ಕೆ ಮರುಗುವ, ನಗುವಾಗ ನಗುವ ,ಅಳುವಾಗ ಕಣ್ಣೊರೆಸುವ, ಬಿದ್ದಾಗ ಎಬ್ಬಿಸುವ, ನೋವಿನಲ್ಲಿರುವಾಗ ಬೆನ್ನು ತಟ್ಟಿ ಸಮಾಧಾನಿಸುವ ಮನಸಿರುವುದು‌ ಗೆಳೆಯರಿಗೆ ಮಾತ್ರ.

ಯಾವುದೇ ಸ್ವಾರ್ಥವಿಲ್ಲದ , ಪ್ರೀತಿ ಸಿಗುವುದು ಗೆಳೆತನದಲ್ಲಿ. ಜಗತ್ತಿನಲ್ಲಿ ಉದಾಹರಣೆ ಯಾಗಬಲ್ಲ ಹಲವು ಮಿತ್ರ ಜೋಡಿಗಳಿವೆ. ಅವುಗಳಲ್ಲೆಲ್ಲ ನನ್ನ ಮಟ್ಟಿಗೆ ಶ್ರೇಷ್ಠವಾದ , ಇಷ್ಟವಾದ ಜೀವದ ಗೆಳೆಯರೆಂದರೆ  ಕೃಷ್ಣ, ಸುಧಾಮರು. ನಿಸ್ವಾರ್ಥ ಸ್ನೇಹಕ್ಕೆ ಯಾವಾಗಲು ಸೂಕ್ತ ಉದಾಹರಣೆ. ಗುರುಕುಲದಲ್ಲಿ ವಿದ್ಯಾರ್ಥಿ ಗಳೆಲ್ಲರೂ ಸಮಾನರು. ಅಂತಸ್ತಿನ ಹಂಗು ಅಲ್ಲಿರಲಿಲ್ಲ. ಗುರುಗಳ ಮುಂದೆ ಎಲ್ಲರೂ ಸಮಾನರು. ಬದುಕಿನ ಕ್ಷಣಗಳು ದುರ್ಬರವಾದಾಗ ಸುಧಾಮನ ಪತ್ನಿ ಗೆಳೆಯನ ಸಹಾಯ ಕೇಳಬಹುದಲ್ಲವೆಂದರೂ ಮನಸಿಲ್ಲದ ಮನಸಿನಿಂದ ಕೃಷ್ಣ ನ ಬಳಿಗೆ ಹೊರಟನು. ಅವಲಕ್ಕಿ ಕೃಷ್ಣ ನಿಗೆ ಪ್ರೀತಿಯೆಂದು ಆತನಿಗಾಗಿ ಮರೆಯದೆ ಕಟ್ಟಿಕೊಂಡನು. ಕೃಷ್ಣ ಎದುರಾದಾಗ ತನ್ನೆಲ್ಲಾ ಕಷ್ಟಗಳನ್ನು ಮರೆತು ಆತನ ಆನಂದದಲ್ಲಿ ತಾನು ಒಂದಾದ ಸುಧಾಮ. ಕೃಷ್ಣನೋ ಬಹು ಜಾಣ. ಸುಧಾಮನ ಮನೆವಾರ್ತೆಯ ಕುರಿತು ಏನೇನೂ ವಿಚಾರಿಸದೆ ಗುರುಕುಲದ ಸಮಯವನ್ನು ಮೆಲುಕು ಹಾಕುವುದರಲ್ಲೇ ಕಳೆದ. ಜೊತೆಗಿದ್ದ ನಾಲ್ಲು ದಿನಗಳು ಸಂತೋಷವಾಗಿ ಕಳೆದವು. ಕೃಷ್ಣ ನಿಂದ ಬೀಳ್ಗೊಂಡು ತನ್ನೂರಿಗೆ ಬಂದಾಗಲೇ ಸುಧಾಮನರಿವಿಗೆ ಬಂದದ್ದು ಕೃಷ್ಣನ ಮಹಿಮೆಯೇನೆಂದು.

ಗೆಳೆತನವೆಂದರೆ ಹಾಗೇ ಹೇಳದೇ ಅರಿಯಬೇಕು ನೋವ, ಕೇಳದೇ ಕೊಡಬೇಕು‌‌ ಅಕ್ಕರೆಯ, ಅಲ್ಲಿ ಕೊಡು ಕೊಳ್ಳುವ ವ್ಯವಹಾರಕ್ಕಿರಬಾರದು ಜಾಗ. ಗೆಳೆತನದ ಪ್ರೀತಿಯ ಮುಂದೆ ಬೇರೆಲ್ಲಾ ಗೌಣ. ಜೀವನದ ಎಲ್ಲಾ ಕ್ಷಣಗಳಲ್ಲಿ ಒಟ್ಟಿಗೇ ಇರ ಬೇಕೆಂದಿಲ್ಲ. ಶಾಲಾ ದಿನಗಳಲ್ಲಿ ಇದ್ದಂತೆ ಅವಾಗಾವಗ ಬೇಟಿಯಾಗುವುದು ಕಷ್ಟವೇ . ವಿವಿಧ ಕಾರಣಗಳಿಂದ ದೂರವಾಗಿರುವ ಗೆಳೆಯರು ಮಾನಸಿಕವಾಗಿ ಒಟ್ಟಿಗೇ ಇರುತ್ತಾರೆ. ಹೇಗೆಂದು ಅರ್ಥವಾಗದು. ತುಂಬಾ ಬೇಜಾರಾದಾಗ, ಮನಸಿಗೆ ಹಿಂಸೆಯೆನಿಸಿದಾಗ, ಒಂಟಿತನ ಕಾಡಿದಾಗ , ಇಂದು ಮಾತನಾಡಲೇ ಬೇಕು ಎನಿಸಿದಾಗ ನನ್ನ ಸ್ನೇಹಿತೆಯರು ಯಾವಾಗಲೂ ಸ್ಪಂಧಿಸುತ್ತಾರೆ ಎಂಬುದು ನನ್ನ ಭಾಗ್ಯವೇ ಸರಿ. ನಾನು ಹೆಮ್ಮೆಯಿಂದ ಹೇಳುವೆ ನನಗೂ ಭಾವನೆಗಳನ್ನು ಹಂಚಿಕೊಳ್ಳಲು ಮಿತ್ರರಿದ್ದಾರೆ ಎಂದು. ಎಲ್ಲರಿಗೂ   Happy friendship day.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

4 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

5 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

7 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

18 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

21 hours ago