ಮಂಗಳೂರು : ಕೊರೊನಾ ವೈರಸ್ ಸೋಂಕು ಪತ್ತೆಹಚ್ಚಲು ಹಾಗೂ ರೋಗ ಹರಡುವುದನ್ನು ತಡೆಗಟ್ಟಲು ಶೀತ, ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆ ಇರುವ ಯಾವುದೇ ವ್ಯಕ್ತಿಗೆ ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧಿಗಳನ್ನು ಪೂರೈಕೆ ಮಾಡಬಾರದು ಎಂದು ಮಂಗಳೂರು ಪ್ರಾದೇಶಿಕ ಕಚೇರಿ ಉಪ ಔಷಧ ನಿಯಂತ್ರಕರು ಔಷಧ ವ್ಯಾಪಾರಸ್ಥರಿಗೆ ಸೂಚನೆ ನೀಡಿದ್ದಾರೆ.
ವೈದ್ಯರ ಸಲಹಾ ಚೀಟಿ ಇದ್ದರೆ ಆ ವ್ಯಕ್ತಿಯ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವೈದ್ಯರ ಹೆಸರು, ವಿಳಾಸವನ್ನು ಕಡ್ಡಾಯವಾಗಿ ಪಡೆದು ಮಾರಾಟ ರಶೀದಿಗಳಲ್ಲಿ ನಮೂದಿಸಬೇಕು ಎಂದು ಸೂಚಿಸಿದ್ದಾರೆ. ಶೀತ, ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆ ಇರುವ ವ್ಯಕ್ತಿಗಳು ನೋಂದಾಯಿತ ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧ ಖರೀದಿಗಾಗಿ ಬಂದಲ್ಲಿಆರೋಗ್ಯ ಇಲಾಖೆಗೆ ಕಡ್ಡಾಯವಾಗಿ ತಿಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನು ಉಲ್ಲಂಘನೆ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…