ಮಂಗಳೂರು : ಕೊರೊನಾ ವೈರಸ್ ಸೋಂಕು ಪತ್ತೆಹಚ್ಚಲು ಹಾಗೂ ರೋಗ ಹರಡುವುದನ್ನು ತಡೆಗಟ್ಟಲು ಶೀತ, ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆ ಇರುವ ಯಾವುದೇ ವ್ಯಕ್ತಿಗೆ ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧಿಗಳನ್ನು ಪೂರೈಕೆ ಮಾಡಬಾರದು ಎಂದು ಮಂಗಳೂರು ಪ್ರಾದೇಶಿಕ ಕಚೇರಿ ಉಪ ಔಷಧ ನಿಯಂತ್ರಕರು ಔಷಧ ವ್ಯಾಪಾರಸ್ಥರಿಗೆ ಸೂಚನೆ ನೀಡಿದ್ದಾರೆ.
ವೈದ್ಯರ ಸಲಹಾ ಚೀಟಿ ಇದ್ದರೆ ಆ ವ್ಯಕ್ತಿಯ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವೈದ್ಯರ ಹೆಸರು, ವಿಳಾಸವನ್ನು ಕಡ್ಡಾಯವಾಗಿ ಪಡೆದು ಮಾರಾಟ ರಶೀದಿಗಳಲ್ಲಿ ನಮೂದಿಸಬೇಕು ಎಂದು ಸೂಚಿಸಿದ್ದಾರೆ. ಶೀತ, ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆ ಇರುವ ವ್ಯಕ್ತಿಗಳು ನೋಂದಾಯಿತ ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧ ಖರೀದಿಗಾಗಿ ಬಂದಲ್ಲಿಆರೋಗ್ಯ ಇಲಾಖೆಗೆ ಕಡ್ಡಾಯವಾಗಿ ತಿಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನು ಉಲ್ಲಂಘನೆ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…