ಮಂಗಳೂರು : ಕೊರೊನಾ ವೈರಸ್ ಸೋಂಕು ಪತ್ತೆಹಚ್ಚಲು ಹಾಗೂ ರೋಗ ಹರಡುವುದನ್ನು ತಡೆಗಟ್ಟಲು ಶೀತ, ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆ ಇರುವ ಯಾವುದೇ ವ್ಯಕ್ತಿಗೆ ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧಿಗಳನ್ನು ಪೂರೈಕೆ ಮಾಡಬಾರದು ಎಂದು ಮಂಗಳೂರು ಪ್ರಾದೇಶಿಕ ಕಚೇರಿ ಉಪ ಔಷಧ ನಿಯಂತ್ರಕರು ಔಷಧ ವ್ಯಾಪಾರಸ್ಥರಿಗೆ ಸೂಚನೆ ನೀಡಿದ್ದಾರೆ.
ವೈದ್ಯರ ಸಲಹಾ ಚೀಟಿ ಇದ್ದರೆ ಆ ವ್ಯಕ್ತಿಯ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವೈದ್ಯರ ಹೆಸರು, ವಿಳಾಸವನ್ನು ಕಡ್ಡಾಯವಾಗಿ ಪಡೆದು ಮಾರಾಟ ರಶೀದಿಗಳಲ್ಲಿ ನಮೂದಿಸಬೇಕು ಎಂದು ಸೂಚಿಸಿದ್ದಾರೆ. ಶೀತ, ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆ ಇರುವ ವ್ಯಕ್ತಿಗಳು ನೋಂದಾಯಿತ ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧ ಖರೀದಿಗಾಗಿ ಬಂದಲ್ಲಿಆರೋಗ್ಯ ಇಲಾಖೆಗೆ ಕಡ್ಡಾಯವಾಗಿ ತಿಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನು ಉಲ್ಲಂಘನೆ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…