ಸುಳ್ಯ: ಈದ್ ಮಿಲಾದ್ ಆಚರಣೆ ಮೌಲೀದ್ ಪರಾಯಣ ಅನ್ನದಾನ ಮೀಲಾದ್ ಫೆಸ್ಟ್ ಸುಳ್ಯ ಗಾಂಧಿನಗರ ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ,ಮುನವಿರುಲ್ ಇಸ್ಲಾಂ ಮದರಸ ಅಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ಜನ್ಮದಿನಾಚರಣೆಯನ್ನು ಸಂಭ್ರಮ ಸಡಗರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ತಾಲೂಕ್ ಸುನ್ನಿ ಜಮ್ಮಿಯತುಲ್ ಉಲಮಾ ಅಧ್ಯಕ್ಷ ಅಸ್ಸಯ್ಯದ್ ಕುಂಞಿಕೋಯ ತಙಳ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಕೆ.ಎಂ.ಮುಸ್ತಫಾ, ಜಿಲ್ಲಾ ಮದರಸ ಅಧ್ಯಾಪಕರ ಸಂಘದ ಆಧ್ಯಕ್ಷ ಇಬ್ರಾಹಿಂ ಸಖಾಫಿ ಪುಂಡೂರ್, ಅನ್ಸಾರ್ ಅಧ್ಯಕ್ಷ ಶುಕೂರ್ ಹಾಜಿ ಅನ್ಸಾರಿಯ ಅಧ್ಯಕ್ಷ ಮಜೀದ್ ಜನತಾ ಜಮಾಅತ್ ಕಮಿಟಿ ಉಪಾದ್ಯಕ್ಷರುಗಳಾದ ಆಧಂ ಹಾಜಿ ಕಮ್ಮಾಡಿ ,ಹಮೀದ್ ಹಾಜಿ ಜನತಾ ,ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹಾಜಿ ನಿರ್ದೇಶಕರುಗಳಾದ ಹಮೀದ್ ಬೀಜಕೊಚ್ಚಿ ,ಕೆ .ಎಸ್ .ಉಮ್ಮರ್ ಕೆ .ಬಿ .ಮಜೀದ್ ಗಫಾರ್ ಹಾಜಿ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಬುರ್ದಾ ಆಲಾಪನೆ ದಫ್ ಪ್ರದರ್ಶನ ನಡೆಯಿತು.
ಸಹಾಯಕ ಖತೀಬರಾದ ಶೌಕತ್ ಅಲಿ ಅಮಾನಿಯವರ ನೇತೃತ್ವದಲ್ಲಿ ಮೌಲೀದ್ ಪರಾಯಣ ಸಾಮೂಹಿಕ ಪ್ರಾರ್ಥನೆ ನೆರವೇರಿತು. ಬಳಿಕ ಅನ್ನದಾನದೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಂಡಿತು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…