ಸುಳ್ಯ: ಈದ್ ಮಿಲಾದ್ ಆಚರಣೆ ಮೌಲೀದ್ ಪರಾಯಣ ಅನ್ನದಾನ ಮೀಲಾದ್ ಫೆಸ್ಟ್ ಸುಳ್ಯ ಗಾಂಧಿನಗರ ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ,ಮುನವಿರುಲ್ ಇಸ್ಲಾಂ ಮದರಸ ಅಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ಜನ್ಮದಿನಾಚರಣೆಯನ್ನು ಸಂಭ್ರಮ ಸಡಗರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ತಾಲೂಕ್ ಸುನ್ನಿ ಜಮ್ಮಿಯತುಲ್ ಉಲಮಾ ಅಧ್ಯಕ್ಷ ಅಸ್ಸಯ್ಯದ್ ಕುಂಞಿಕೋಯ ತಙಳ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಕೆ.ಎಂ.ಮುಸ್ತಫಾ, ಜಿಲ್ಲಾ ಮದರಸ ಅಧ್ಯಾಪಕರ ಸಂಘದ ಆಧ್ಯಕ್ಷ ಇಬ್ರಾಹಿಂ ಸಖಾಫಿ ಪುಂಡೂರ್, ಅನ್ಸಾರ್ ಅಧ್ಯಕ್ಷ ಶುಕೂರ್ ಹಾಜಿ ಅನ್ಸಾರಿಯ ಅಧ್ಯಕ್ಷ ಮಜೀದ್ ಜನತಾ ಜಮಾಅತ್ ಕಮಿಟಿ ಉಪಾದ್ಯಕ್ಷರುಗಳಾದ ಆಧಂ ಹಾಜಿ ಕಮ್ಮಾಡಿ ,ಹಮೀದ್ ಹಾಜಿ ಜನತಾ ,ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹಾಜಿ ನಿರ್ದೇಶಕರುಗಳಾದ ಹಮೀದ್ ಬೀಜಕೊಚ್ಚಿ ,ಕೆ .ಎಸ್ .ಉಮ್ಮರ್ ಕೆ .ಬಿ .ಮಜೀದ್ ಗಫಾರ್ ಹಾಜಿ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಬುರ್ದಾ ಆಲಾಪನೆ ದಫ್ ಪ್ರದರ್ಶನ ನಡೆಯಿತು.
ಸಹಾಯಕ ಖತೀಬರಾದ ಶೌಕತ್ ಅಲಿ ಅಮಾನಿಯವರ ನೇತೃತ್ವದಲ್ಲಿ ಮೌಲೀದ್ ಪರಾಯಣ ಸಾಮೂಹಿಕ ಪ್ರಾರ್ಥನೆ ನೆರವೇರಿತು. ಬಳಿಕ ಅನ್ನದಾನದೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಂಡಿತು.
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…