Advertisement
ಕಾರ್ಯಕ್ರಮಗಳು

ಈಶ್ವರಮಂಗಲ ಜಾತ್ರೆ:- ಸಾಂಸ್ಕೃತಿಕ ಕಾರ್ಯಕ್ರಮ

Share

ಪೆರ್ನಾಜೆ: ಈಶ್ವರಮಂಗಲದ ಶ್ರೀಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಉತ್ಸವ ಬಲಿಯಂದು ಸ್ವರ ಸಿಂಚನ ಕಾಲ ಬಳಗದಿಂದ ನವದುರ್ಗೆಯರ ಗೀತಗಾಯನದಲ್ಲಿ ನವಮಾತೆಯಾರು- ನವಕುವರಿಯರು ಎಂಬ ವಿನೂತನ ಗಾನ ವೈಭವ ಮಿಮಿಕ್ರಿ ನಗೆಹಬ್ಬ ಫೆ. 22 ರಂದು ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಮಾರ ಪೆರ್ನಾಜೆ ಬಹುಮುಖ ಪ್ರತಿಭೆ ಪಟ್ಟಾಭಿರಾಮ ಸುಳ್ಯ, ಯಕ್ಷ ಪ್ರಭೆ ಶ್ರೀಕೃಷ್ಣ ಜೆಡ್ಡು ಅವರಿಗೆ ಪೆರ್ನಾಜೆ ಪ್ರಶಸ್ತಿ ಪ್ರದಾನ ಮಾಡಿದರು.

ಉತ್ಸವ ಸಮಿತಿಯ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಕುಂಜತಾಯರವರು ಪಟ್ಟಾಭಿರಾಮ ಸುಳ್ಯರವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಕುಮಾರ ಪೆರ್ನಾಜೆ ಈಗಾಗಲೇ ರಾಷ್ಟ್ರೀಯ ಪುರಸ್ಕಾರ ಪಡೆದಿದ್ದು ರಾಜ್ಯ ಜಿಲ್ಲಾ ಮಟ್ಟಗಳಲ್ಲಿ ಕೃಷಿಯಲ್ಲಿ ಸಾಧನೆ ಮಾಡುವುದರ ಜೊತೆ ಗ್ರಾಮೀಣ ಕಲಾ ತಂಡದ ಮೂಲಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಇವರಿಂದ ಇನ್ನಷ್ಟು ಕಾಲ ಮಾಡುವಂತಾಗಲಿ ಎಂದು ನುಡಿದರು. ಸ್ವರ ಸಿಂಚನ ಕಲಾ ಬಳಗವನ್ನು ಶ್ಲಾಘಿಸಿ ಕಾರ್ಯಕ್ರಮಕ್ಕೆ ಸೇವಾದಾರರ 5 ವರ್ಷಗಳಿಂದ ಪ್ರಗತಿಪರ ಕೃಷಿಕ ಸತೀಶ್ ರೈ ಕರ್ನೂರು ಕೈಜೋಡಿಸುತ್ತಿರುವ ಬಗ್ಗೆ ಮೆಚ್ಚುಗೆ ನೋಡಿದರು.

ಪ್ರಕಾಶ ನಾರಾಯಣ ಜೆಡ್ಡು ಸನ್ಮಾನಿತ ಶ್ರೀಕೃಷ್ಣ ಜಡ್ಡುರವರ ತಂದೆ ಮಾತನಾಡುತ್ತಾ ತನ್ನ ಮಗನನ್ನು ಇಲ್ಲಿ ಗುರುತಿಸಿ ಸನ್ಮಾನಿಸಿದ್ದು ತನ್ನ ಮಗನನ್ನು ತನ್ನ ಮಗನ ಕಾರ್ಯ ನಡೆಯನ್ನು ಇನ್ನಷ್ಟು ಹೆಚ್ಚಿಸುವಂತೆ ಮಾಡಿದೆ. ಇಂತಹ ಕಾರ್ಯಕ್ರಮಗಳಿಂದ ನಮ್ಮನ್ನು ಜಾಗೃತಗೊಳಿಸುತ್ತದೆ ಎಂದು ಶುಭ ನುಡಿದರು. ಸೌಮ್ಯ ಪೆರ್ನಾಜೆ ಶ್ರೀಕೃಷ್ಣ ಜೆಡ್ಡು ರವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಉತ್ಸವ ಸಮಿತಿ ಅಧ್ಯಕ್ಷರಾದ ಸದಾಶಿವ ರೈ ನಡುಬೈಲು, ಸತೀಶ್ ರೈ ಕರ್ನೂರ್, ಭವಾನಿ ರೈ ಕರ್ನೂರು, ಜಯಂತಿ ರೈ ಕರ್ನೂರು, ಆನಂದ ರೈ ಸಂತ್ಯ, ಸ್ವರ ಸಿಂಚನ ಸಂಗೀತ ಶಾಲಾ ಮುಖ್ಯಶಿಕ್ಷಕಿ ಸವಿತಾ ಕೊಡಂದೂರು, ರಾಘು ರಾಮಶಾಸ್ತ್ರಿ ಕೊಡಂದೂರು, ಸಿಂಚನ ಲಕ್ಷ್ಮಿ ಕೊಡಂದೂರು, ಗೌರಿ ಜೆಡ್ಡು, ಶ್ರೀವಿದ್ಯಾ, ರಮ್ಯಾ ಜೆಡ್ಡು, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು, ಪದ್ಮರಾಜ್ ಚಾರ್ವಾಕ ಸ್ವಾಗತಿಸಿ, ಸನ್ಮಾನಿತರ ಪರಿಚಯ, ವಂದಿಸಿದರು ಕುಮಾರ ಪೆರ್ನಾಜೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

6 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

7 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

16 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

20 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago