Advertisement
The Rural Mirror ಕಾಳಜಿ

ಈ ಕಾರ್ಮಿಕರಿಗೆ ನೀವು “ಭೇಷ್” ಹೇಳಬಲ್ಲಿರಾ…….?

Share
ಸುಬ್ರಹ್ಮಣ್ಯ: ಇವರಿಗೆ ಸ್ವಚ್ಛತೆಯೇ ದೇವರು…!, ಸ್ವಚ್ಛತೆಯೇ ಸಂಭ್ರಮ….!. ಇವರಿಗೆ ನಾವು ಅಭಿನಂದನೆ ಹೇಳದೇ ಇದ್ದರೇ ಅದು ನಮ್ಮ ಲೋಪವಾಗದೇ ಇದ್ದೀತು. ಏಕೆ ಗೊತ್ತಾ…?
ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಎಲ್ಲೆಡೆ ರಜೆ. ಆದರೆ ಕುಕ್ಕೆ ಸುಬ್ರಹ್ಮಣ್ಯದ  ಗ್ರಾ.ಪಂ ವ್ಯಾಪ್ತಿಯ ಸ್ವಚ್ಛತೆ ಕಾರ್ಮಿಕರ ಪಾಲಿಗೆ  ಸಂಭ್ರಮ ಹಾಗೂ ಸಾಮಾನ್ಯ ದಿನವಾಯಿತು. ಸ್ವಚ್ಛತೆಗೆ ರಜೆ ಎಂಬುದು ಇಲ್ಲ ಎಂಬ ಸಂದೇಶವನ್ನೂ ಈ ಕಾರ್ಮಿಕರು ತೋರಿಸಿದ್ದಾರೆ. ಹೀಗಾಗಿ ಅವರಿಗೆ “ಸುಳ್ಯನ್ಯೂಸ್.ಕಾಂ” ವಿಶೇಷ ಶುಭಾಶಯ ಸಲ್ಲಿಸುತ್ತದೆ.
ಮೇ.1 ರಂದು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸರಕಾರಿ  ಕಚೇರಿಗಳಿಗೂ ರಜೆ. ಈ ರಜೆಯನ್ನು ಎಲ್ಲಾ ನೌಕರರು ಆರಾಮವಾಗಿ ಕಳೆದರೆ ಇಲ್ಲಿನ ಸ್ವಚ್ಛತಾ ಸಿಬಂದಿಗಳು ಮಾತ್ರಾ ಹೆಚ್ಚು ದುಡಿದರು. ಸ್ವಚ್ಛತೆಗೆ ಆದ್ಯತೆ ನೀಡಿದರು. ಈ ಮೂಲಕ ಇಡೀ ನಾಡಿಗೆ ನೀಡಿದ ಸಂದೇಶ ದೊಡ್ಡದು. ಬುಧವಾರ ಕಾರ್ಮಿಕರ ದಿನವಾಗಿದ್ದರೂ, ತ್ಯಾಜ್ಯ ವಿಲೆವಾರಿ ಸಂಗ್ರಹ ವಾಹನದ  ಸ್ವಚ್ಛತಾ ವಿಲೆವಾರಿ ಕಾರ್ಮಿಕರು ಹಾಗೂ ಗ್ರಾ.ಪಂ ಸ್ವಚ್ಛತೆ ಸಿಬಂದಿಗಳು  ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು.
ಸ್ವಚ್ಛತೆಯಲ್ಲಿ ನಿರತರಾಗಿರುವ ಸಿಬಂದಿಗಳು

 

Advertisement
Advertisement
ಎರಡು ದಿನಗಳ ಹಿಂದಷ್ಟೇ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ಸ್ವಚ್ಛ ಮಾಡಿದ ಯುವಬ್ರಿಗೇಡ್ ತಂಡದ ಸದಸ್ಯರು ಸುಮಾರು 10 ಟನ್ ತ್ಯಾಜ್ಯ ಸಂಗ್ರಹ ಮಾಡಿದ್ದರು.
ಧಾರ್ಮಿಕ ಕ್ಷೇತ್ರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಸ್ಥಳೀಯಾಡಳಿತಕ್ಕೆ ಸವಾಲಿನ ಕೆಲಸ.ಒಂದು ದಿನ ಕಸ ಎತ್ತದಿದ್ದರೆ.ನಗರದ ಅಂಗಡಿ ಮುಂಗಟ್ಟುಗಳ ಎದುರಿನಿಂದ ತ್ಯಾಜ್ಯ ಸಂಗ್ರಹಿಸದೆ ಇದ್ದರೆ ನಗರದಲ್ಲಿ  ದೊಡ್ಡ ಪ್ರಮಾಣದ ಸ್ವಚ್ಛತೆ ಕೊರತೆಯಾಗುತ್ತದೆ. ಹೀಗಾಗಿ ಪ್ರತಿನಿತ್ಯ ತ್ಯಾಜ್ಯ ಸಂಗ್ರಹ ವಿಲೆವಾರಿ ಕಾರ್ಯವನ್ನು  ಪೂರ್ಣಗೊಳಿಸುವುದು  ಅನಿವಾರ್ಯವಾಗಿದೆ. ಇದನ್ನು ಮನಗಂಡು ರಜೆ ಮಾಡದ  ಈ ಗೌರವಾನ್ವಿತ ಕಾರ್ಮಿಕರು ತಮ್ಮ ಸೇವೆಯನ್ನು ಮಾಡಿದ್ದಾರೆ. ಹೀಗಾಗಿ ಈ ಕಾರ್ಮಿಕರಿಗೆ ಶ್ಲಾಘನೆ ವ್ಯಕ್ತವಾಗಿದೆ.
ಈ ನಡುವೆ ಸ್ವಚ್ಛತಾ ಕಾರ್ಮಿಕರಿಗೆ ರಜೆ ನೀಡದೇ ಇರುವ ಬಗ್ಗೆ ಕೆಲವು ಅಪಸ್ವರಗಳು ಕೇಳಿಬಂದಿದೆ. ಹಾಗಿದ್ದರೂ ಸಾಮಾಜಿಕ ವಲಯದಲ್ಲಿ ಈ ಕಾರ್ಮಿಕರ ಮೇಲಿನ ಗೌರವ ಹೆಚ್ಚಾಗಿದೆ. ಸ್ವಚ್ಛ ಸಮಾಜದಲ್ಲಿ ಈ ಕಾರ್ಮಿಕರ ಪಾತ್ರ ದೊಡ್ಡದಿದೆ ಎಂದು ಸಾಬೀತು ಮಾಡಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?

WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…

2 hours ago

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…

2 hours ago

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

18 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

18 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

19 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

19 hours ago