The Rural Mirror ಕಾಳಜಿ

ಈ ಕಾರ್ಮಿಕರಿಗೆ ನೀವು “ಭೇಷ್” ಹೇಳಬಲ್ಲಿರಾ…….?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಸುಬ್ರಹ್ಮಣ್ಯ: ಇವರಿಗೆ ಸ್ವಚ್ಛತೆಯೇ ದೇವರು…!, ಸ್ವಚ್ಛತೆಯೇ ಸಂಭ್ರಮ….!. ಇವರಿಗೆ ನಾವು ಅಭಿನಂದನೆ ಹೇಳದೇ ಇದ್ದರೇ ಅದು ನಮ್ಮ ಲೋಪವಾಗದೇ ಇದ್ದೀತು. ಏಕೆ ಗೊತ್ತಾ…?
ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಎಲ್ಲೆಡೆ ರಜೆ. ಆದರೆ ಕುಕ್ಕೆ ಸುಬ್ರಹ್ಮಣ್ಯದ  ಗ್ರಾ.ಪಂ ವ್ಯಾಪ್ತಿಯ ಸ್ವಚ್ಛತೆ ಕಾರ್ಮಿಕರ ಪಾಲಿಗೆ  ಸಂಭ್ರಮ ಹಾಗೂ ಸಾಮಾನ್ಯ ದಿನವಾಯಿತು. ಸ್ವಚ್ಛತೆಗೆ ರಜೆ ಎಂಬುದು ಇಲ್ಲ ಎಂಬ ಸಂದೇಶವನ್ನೂ ಈ ಕಾರ್ಮಿಕರು ತೋರಿಸಿದ್ದಾರೆ. ಹೀಗಾಗಿ ಅವರಿಗೆ “ಸುಳ್ಯನ್ಯೂಸ್.ಕಾಂ” ವಿಶೇಷ ಶುಭಾಶಯ ಸಲ್ಲಿಸುತ್ತದೆ.
ಮೇ.1 ರಂದು ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸರಕಾರಿ  ಕಚೇರಿಗಳಿಗೂ ರಜೆ. ಈ ರಜೆಯನ್ನು ಎಲ್ಲಾ ನೌಕರರು ಆರಾಮವಾಗಿ ಕಳೆದರೆ ಇಲ್ಲಿನ ಸ್ವಚ್ಛತಾ ಸಿಬಂದಿಗಳು ಮಾತ್ರಾ ಹೆಚ್ಚು ದುಡಿದರು. ಸ್ವಚ್ಛತೆಗೆ ಆದ್ಯತೆ ನೀಡಿದರು. ಈ ಮೂಲಕ ಇಡೀ ನಾಡಿಗೆ ನೀಡಿದ ಸಂದೇಶ ದೊಡ್ಡದು. ಬುಧವಾರ ಕಾರ್ಮಿಕರ ದಿನವಾಗಿದ್ದರೂ, ತ್ಯಾಜ್ಯ ವಿಲೆವಾರಿ ಸಂಗ್ರಹ ವಾಹನದ  ಸ್ವಚ್ಛತಾ ವಿಲೆವಾರಿ ಕಾರ್ಮಿಕರು ಹಾಗೂ ಗ್ರಾ.ಪಂ ಸ್ವಚ್ಛತೆ ಸಿಬಂದಿಗಳು  ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು.
ಸ್ವಚ್ಛತೆಯಲ್ಲಿ ನಿರತರಾಗಿರುವ ಸಿಬಂದಿಗಳು

 

Advertisement
Advertisement
ಎರಡು ದಿನಗಳ ಹಿಂದಷ್ಟೇ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ಸ್ವಚ್ಛ ಮಾಡಿದ ಯುವಬ್ರಿಗೇಡ್ ತಂಡದ ಸದಸ್ಯರು ಸುಮಾರು 10 ಟನ್ ತ್ಯಾಜ್ಯ ಸಂಗ್ರಹ ಮಾಡಿದ್ದರು.
ಧಾರ್ಮಿಕ ಕ್ಷೇತ್ರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಸ್ಥಳೀಯಾಡಳಿತಕ್ಕೆ ಸವಾಲಿನ ಕೆಲಸ.ಒಂದು ದಿನ ಕಸ ಎತ್ತದಿದ್ದರೆ.ನಗರದ ಅಂಗಡಿ ಮುಂಗಟ್ಟುಗಳ ಎದುರಿನಿಂದ ತ್ಯಾಜ್ಯ ಸಂಗ್ರಹಿಸದೆ ಇದ್ದರೆ ನಗರದಲ್ಲಿ  ದೊಡ್ಡ ಪ್ರಮಾಣದ ಸ್ವಚ್ಛತೆ ಕೊರತೆಯಾಗುತ್ತದೆ. ಹೀಗಾಗಿ ಪ್ರತಿನಿತ್ಯ ತ್ಯಾಜ್ಯ ಸಂಗ್ರಹ ವಿಲೆವಾರಿ ಕಾರ್ಯವನ್ನು  ಪೂರ್ಣಗೊಳಿಸುವುದು  ಅನಿವಾರ್ಯವಾಗಿದೆ. ಇದನ್ನು ಮನಗಂಡು ರಜೆ ಮಾಡದ  ಈ ಗೌರವಾನ್ವಿತ ಕಾರ್ಮಿಕರು ತಮ್ಮ ಸೇವೆಯನ್ನು ಮಾಡಿದ್ದಾರೆ. ಹೀಗಾಗಿ ಈ ಕಾರ್ಮಿಕರಿಗೆ ಶ್ಲಾಘನೆ ವ್ಯಕ್ತವಾಗಿದೆ.
ಈ ನಡುವೆ ಸ್ವಚ್ಛತಾ ಕಾರ್ಮಿಕರಿಗೆ ರಜೆ ನೀಡದೇ ಇರುವ ಬಗ್ಗೆ ಕೆಲವು ಅಪಸ್ವರಗಳು ಕೇಳಿಬಂದಿದೆ. ಹಾಗಿದ್ದರೂ ಸಾಮಾಜಿಕ ವಲಯದಲ್ಲಿ ಈ ಕಾರ್ಮಿಕರ ಮೇಲಿನ ಗೌರವ ಹೆಚ್ಚಾಗಿದೆ. ಸ್ವಚ್ಛ ಸಮಾಜದಲ್ಲಿ ಈ ಕಾರ್ಮಿಕರ ಪಾತ್ರ ದೊಡ್ಡದಿದೆ ಎಂದು ಸಾಬೀತು ಮಾಡಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ

ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…

1 hour ago

50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18

ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…

2 hours ago

ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು

ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…

2 hours ago

ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?

ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…

3 hours ago

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…

4 hours ago

ಗುರು ಮತ್ತು ಬುಧ ದಶಾಂಕ ಯೋಗ | ಉದ್ಯೋಗದ ಮೇಲೆ ಜಾಕ್ಪಾಟ್ ದೊರೆಯಲಿದೆ

ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago