Advertisement
MIRROR FOCUS

ಈ ಬಾರಿಯೂ ಅಡಿಕೆ ಬೆಳೆಗಾರರನ್ನು ಕಾಡಿತು ಕೊಳೆರೋಗ

Share

ಅಡಿಕೆಗೆ ಕೊಳೆರೋಗ ಬಾಧಿಸಿದೆ. ಕೆಲವು ಕಡೆಗಳಲ್ಲಿ ವಿಪರೀತವಾದ ಕೊಳೆರೋಗ ಕಂಡುಬಂದಿದೆ. ಸುಳ್ಯ , ಪುತ್ತೂರು, ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ  ಕೊಳೆರೋಗ ಈಗ ಸದ್ದು ಮಾಡುತ್ತಿದೆ. ಎರಡು ಬಾರಿ ಔಷಧಿ ಸಿಂಪಡಣೆ ನಂತರವೂ ಕೊಳೆರೋಗ ಕಂಡುಬಂದಿರುವುದು ಬೆಳೆಗಾರಿಗೆ ಆತಂಕ ಮೂಡಿಸಿದೆ. 


ಅಡಿಕೆಗೆ ಈ ಬಾರಿಯೂ ಕೊಳೆರೋಗ ಬಾಧಿಸಿದೆ. ಕಳೆದ ವರ್ಷ ಭಾರೀ ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರು ಕಂಗಾಲಾಗಿದ್ದರು. ಶೇ.70 ರಷ್ಟು ಅಡಿಕೆ ನಾಶವಾಗಿತ್ತು. ಅದರ ಹೊಡೆತದಿಂದ ಹೊರಬರುವ ಹೊತ್ತಿಗೆ ಈ ಬಾರಿಯೂ ಭಾರೀ ಮಳೆಯ ಕಾರಣದಿಂದ ಮತ್ತೆ ಕೊಳೆರೋಗ ವಕ್ಕರಿಸಿದೆ. ಹಲವು ತೋಟಗಳಲ್ಲಿ ಅಡಿಕೆ ಉದುರುತ್ತಿದೆ. ಬೆಳೆಗಾರರಿಗೆ ಹೊಡೆತದ ಮೇಲೆ ಹೊಡೆತ ಬಿದ್ದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ ಇದೆ. ಹಾಗಿದ್ದರೂ ಒಮ್ಮೆಲೇ ಸುರಿದ ಭಾರೀ ಮಳೆ ಅಡಿಕೆಗೆ ಸಂಕಷ್ಟ ತಂದಿದೆ. ಕಳೆದ ಬಾರಿಯ ರೋಗ ಬಾಧೆಗೆ ತತ್ತರಿಸಿದ್ದ ಅಡಿಕೆ ಮರಕ್ಕೆ ಈ ಬಾರಿಯ ಮಳೆಗೆ ತಕ್ಷಣವೇ ಶೀಲೀಂದ್ರವು ಚುರುಕಾಗಿ ಕೊಳೆರೋಗಕ್ಕೆ ಕಾರಣವಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ  ಕೊಳೆರೋಗ ಕಂಡುಬಂದರೆ ಸುಳ್ಯ ತಾಲೂಕಿನ ಬೆಳ್ಳಾರೆ, ಪಂಜ ಸೇರಿದಂತೆ ವಿವಿಧ ಕಡೆಯ ಬೆಳೆಗಾರರು ಕೊಳೆರೋಗ ಇರುವ ಬಗ್ಗೆ ಹೇಳುತ್ತಾರೆ. ಎರಡು ಬಾರಿ ಔಷಧಿ ಸಿಂಪಡನೆ ನಂತರವೂ ಕೊಳೆರೋಗ ಬಾಧಿಸಿಸುತ್ತಿದೆ ಎಂದು ಬೆಳೆಗಾರರು ಅಳಲು ತೋಡುತ್ತಾರೆ. ಹೀಗಾಗಿ ಏನೂ ಮಾಡಲಾಗದೆ ಕೈಚೆಲ್ಲಿ ಕುಳಿತುಕಜೊಳ್ಳಬೇಕಾದ ಸ್ಥಿತಿ ಇದೆ. ಸಪ್ಟಂಬರ್ ವರೆಗೆ ಕೊಳೆರೋಗದ ಲಕ್ಷಣ ಇರಲಿಲ್ಲ. ನಂತರ ಕಾಣಿಸಿದೆ ಎಂದು ಕೃಷಿಕ ಜಯಗೋವಿಂದ ಹೇಳಿದರೆ  ಪುತ್ತೂರು ತಾಲೂಕಿನ ಕರ್ನೂರಿನ ಸತೀಶ್ ಅವರು ಹೇಳುವಂತೆ ಕಳೆದ ವರ್ಷದಷ್ಟೇ ಈ ಬಾರಿ ಕೊಳೆರೋಗ ಬಾಧಿಸಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಾಗಿದೆ ಎನ್ನುತ್ತಾರೆ.

ಪುತ್ತೂರು ತಾಲೂಕಿನ ಕರ್ನೂರಿನ ಸತೀಶ್ ಅವರ ತೋಟದಲ್ಲಿ

ಹಾಗೆ ನೋಡಿದರೆ ಕೊನೆಯ ಈ ಅವಧಿಯಲ್ಲಿ ಮಳೆ ಹೆಚ್ಚಾಗಿದೆ. ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಅವರ ಮಾಹಿತಿ ಪ್ರಕಾರ ಪೂರ್ವಫಲ್ಗುಣಿ ಅಥವಾ ಹುಬ್ಬಾ ನಕ್ಷತ್ರ (ಆಗಸ್ಟ್ 31 – ಸೆಪ್ಟೆಂಬರ್ 12) ದ ಅವಧಿಯಲ್ಲಿ ದಾಖಲಾದ ಮಳೆ = 813 ಮಿ.ಮೀ. ಕಳೆದ ವರ್ಷ ಕೇವಲ 52 ಮಿ.ಮೀ.

ಸರಾಸರಿ (ಮಿ.ಮೀ.ಗಳಲ್ಲಿ)
1976 – 2000 = 196
2001 – 2019 = 269
1976 – 2019 = 228
ಗರಿಷ್ಟ = 813 ( 2019 )
ದ್ವಿತೀಯ ಗರಿಷ್ಟ=613 ( 2007 )
ಕನಿಷ್ಟ =028 (1991 )

ದಿನವೊಂದರಲ್ಲಿ ದಾಖಲಾದ ಗರಿಷ್ಟ ಮಳೆ 158 ಮಿ.ಮೀ (8/9/2019)

ತಕ್ಷಣವೇ ಗಮನಹರಿಸುವುದು  ಸೂಕ್ತ:

ಆಡಳಿತವು ತಕ್ಷಣವೇ ಬೆಳೆಗಾರರ ಸಂಕಷ್ಟದ ಕಡೆಗೆ ಗಮನಹರಿಸಬೇಕಿದೆ. ಏಕೆಂದರೆ ಸತತ ಎರಡು ವರ್ಷ ಕೊಳೆರೋಗದಿಂದ ಅಡಿಕೆ ನಾಶವಾಗಿದೆ. ಅಡಿಕೆ ಬೆಳೆಗಾರರಿಗೆ ಇಡೀ ವರ್ಷದ ಆದಾಯವೂ ಇದೇ ಆಗಿದೆ. ಹೀಗಾಗಿ ಸರಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಏನು ಮಾಡಬಹುದು  ಎಂಬುದರ ಬಗ್ಗೆ ಚಿಂತನೆ ನಡೆಸಬೇಕಿದೆ. ಏಕೆಂದರೆ ಸತತ ಎರಡು ವರ್ಷಗಳಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೊಗ ಬಾಧಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

3 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

3 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

13 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

19 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

19 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

1 day ago