Advertisement
MIRROR FOCUS

ಈ ಬಾರಿಯೂ ಅಡಿಕೆ ಬೆಳೆಗಾರರನ್ನು ಕಾಡಿತು ಕೊಳೆರೋಗ

Share

ಅಡಿಕೆಗೆ ಕೊಳೆರೋಗ ಬಾಧಿಸಿದೆ. ಕೆಲವು ಕಡೆಗಳಲ್ಲಿ ವಿಪರೀತವಾದ ಕೊಳೆರೋಗ ಕಂಡುಬಂದಿದೆ. ಸುಳ್ಯ , ಪುತ್ತೂರು, ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ  ಕೊಳೆರೋಗ ಈಗ ಸದ್ದು ಮಾಡುತ್ತಿದೆ. ಎರಡು ಬಾರಿ ಔಷಧಿ ಸಿಂಪಡಣೆ ನಂತರವೂ ಕೊಳೆರೋಗ ಕಂಡುಬಂದಿರುವುದು ಬೆಳೆಗಾರಿಗೆ ಆತಂಕ ಮೂಡಿಸಿದೆ. 


ಅಡಿಕೆಗೆ ಈ ಬಾರಿಯೂ ಕೊಳೆರೋಗ ಬಾಧಿಸಿದೆ. ಕಳೆದ ವರ್ಷ ಭಾರೀ ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರು ಕಂಗಾಲಾಗಿದ್ದರು. ಶೇ.70 ರಷ್ಟು ಅಡಿಕೆ ನಾಶವಾಗಿತ್ತು. ಅದರ ಹೊಡೆತದಿಂದ ಹೊರಬರುವ ಹೊತ್ತಿಗೆ ಈ ಬಾರಿಯೂ ಭಾರೀ ಮಳೆಯ ಕಾರಣದಿಂದ ಮತ್ತೆ ಕೊಳೆರೋಗ ವಕ್ಕರಿಸಿದೆ. ಹಲವು ತೋಟಗಳಲ್ಲಿ ಅಡಿಕೆ ಉದುರುತ್ತಿದೆ. ಬೆಳೆಗಾರರಿಗೆ ಹೊಡೆತದ ಮೇಲೆ ಹೊಡೆತ ಬಿದ್ದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ ಇದೆ. ಹಾಗಿದ್ದರೂ ಒಮ್ಮೆಲೇ ಸುರಿದ ಭಾರೀ ಮಳೆ ಅಡಿಕೆಗೆ ಸಂಕಷ್ಟ ತಂದಿದೆ. ಕಳೆದ ಬಾರಿಯ ರೋಗ ಬಾಧೆಗೆ ತತ್ತರಿಸಿದ್ದ ಅಡಿಕೆ ಮರಕ್ಕೆ ಈ ಬಾರಿಯ ಮಳೆಗೆ ತಕ್ಷಣವೇ ಶೀಲೀಂದ್ರವು ಚುರುಕಾಗಿ ಕೊಳೆರೋಗಕ್ಕೆ ಕಾರಣವಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ  ಕೊಳೆರೋಗ ಕಂಡುಬಂದರೆ ಸುಳ್ಯ ತಾಲೂಕಿನ ಬೆಳ್ಳಾರೆ, ಪಂಜ ಸೇರಿದಂತೆ ವಿವಿಧ ಕಡೆಯ ಬೆಳೆಗಾರರು ಕೊಳೆರೋಗ ಇರುವ ಬಗ್ಗೆ ಹೇಳುತ್ತಾರೆ. ಎರಡು ಬಾರಿ ಔಷಧಿ ಸಿಂಪಡನೆ ನಂತರವೂ ಕೊಳೆರೋಗ ಬಾಧಿಸಿಸುತ್ತಿದೆ ಎಂದು ಬೆಳೆಗಾರರು ಅಳಲು ತೋಡುತ್ತಾರೆ. ಹೀಗಾಗಿ ಏನೂ ಮಾಡಲಾಗದೆ ಕೈಚೆಲ್ಲಿ ಕುಳಿತುಕಜೊಳ್ಳಬೇಕಾದ ಸ್ಥಿತಿ ಇದೆ. ಸಪ್ಟಂಬರ್ ವರೆಗೆ ಕೊಳೆರೋಗದ ಲಕ್ಷಣ ಇರಲಿಲ್ಲ. ನಂತರ ಕಾಣಿಸಿದೆ ಎಂದು ಕೃಷಿಕ ಜಯಗೋವಿಂದ ಹೇಳಿದರೆ  ಪುತ್ತೂರು ತಾಲೂಕಿನ ಕರ್ನೂರಿನ ಸತೀಶ್ ಅವರು ಹೇಳುವಂತೆ ಕಳೆದ ವರ್ಷದಷ್ಟೇ ಈ ಬಾರಿ ಕೊಳೆರೋಗ ಬಾಧಿಸಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಾಗಿದೆ ಎನ್ನುತ್ತಾರೆ.

ಪುತ್ತೂರು ತಾಲೂಕಿನ ಕರ್ನೂರಿನ ಸತೀಶ್ ಅವರ ತೋಟದಲ್ಲಿ

ಹಾಗೆ ನೋಡಿದರೆ ಕೊನೆಯ ಈ ಅವಧಿಯಲ್ಲಿ ಮಳೆ ಹೆಚ್ಚಾಗಿದೆ. ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಅವರ ಮಾಹಿತಿ ಪ್ರಕಾರ ಪೂರ್ವಫಲ್ಗುಣಿ ಅಥವಾ ಹುಬ್ಬಾ ನಕ್ಷತ್ರ (ಆಗಸ್ಟ್ 31 – ಸೆಪ್ಟೆಂಬರ್ 12) ದ ಅವಧಿಯಲ್ಲಿ ದಾಖಲಾದ ಮಳೆ = 813 ಮಿ.ಮೀ. ಕಳೆದ ವರ್ಷ ಕೇವಲ 52 ಮಿ.ಮೀ.

ಸರಾಸರಿ (ಮಿ.ಮೀ.ಗಳಲ್ಲಿ)
1976 – 2000 = 196
2001 – 2019 = 269
1976 – 2019 = 228
ಗರಿಷ್ಟ = 813 ( 2019 )
ದ್ವಿತೀಯ ಗರಿಷ್ಟ=613 ( 2007 )
ಕನಿಷ್ಟ =028 (1991 )

ದಿನವೊಂದರಲ್ಲಿ ದಾಖಲಾದ ಗರಿಷ್ಟ ಮಳೆ 158 ಮಿ.ಮೀ (8/9/2019)

ತಕ್ಷಣವೇ ಗಮನಹರಿಸುವುದು  ಸೂಕ್ತ:

ಆಡಳಿತವು ತಕ್ಷಣವೇ ಬೆಳೆಗಾರರ ಸಂಕಷ್ಟದ ಕಡೆಗೆ ಗಮನಹರಿಸಬೇಕಿದೆ. ಏಕೆಂದರೆ ಸತತ ಎರಡು ವರ್ಷ ಕೊಳೆರೋಗದಿಂದ ಅಡಿಕೆ ನಾಶವಾಗಿದೆ. ಅಡಿಕೆ ಬೆಳೆಗಾರರಿಗೆ ಇಡೀ ವರ್ಷದ ಆದಾಯವೂ ಇದೇ ಆಗಿದೆ. ಹೀಗಾಗಿ ಸರಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಏನು ಮಾಡಬಹುದು  ಎಂಬುದರ ಬಗ್ಗೆ ಚಿಂತನೆ ನಡೆಸಬೇಕಿದೆ. ಏಕೆಂದರೆ ಸತತ ಎರಡು ವರ್ಷಗಳಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೊಗ ಬಾಧಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

10 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

10 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

14 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

15 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

15 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago