Advertisement
MIRROR FOCUS

ಈ ಬಾರಿಯೂ ಅಡಿಕೆ ಬೆಳೆಗಾರರನ್ನು ಕಾಡಿತು ಕೊಳೆರೋಗ

Share

ಅಡಿಕೆಗೆ ಕೊಳೆರೋಗ ಬಾಧಿಸಿದೆ. ಕೆಲವು ಕಡೆಗಳಲ್ಲಿ ವಿಪರೀತವಾದ ಕೊಳೆರೋಗ ಕಂಡುಬಂದಿದೆ. ಸುಳ್ಯ , ಪುತ್ತೂರು, ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ  ಕೊಳೆರೋಗ ಈಗ ಸದ್ದು ಮಾಡುತ್ತಿದೆ. ಎರಡು ಬಾರಿ ಔಷಧಿ ಸಿಂಪಡಣೆ ನಂತರವೂ ಕೊಳೆರೋಗ ಕಂಡುಬಂದಿರುವುದು ಬೆಳೆಗಾರಿಗೆ ಆತಂಕ ಮೂಡಿಸಿದೆ. 


ಅಡಿಕೆಗೆ ಈ ಬಾರಿಯೂ ಕೊಳೆರೋಗ ಬಾಧಿಸಿದೆ. ಕಳೆದ ವರ್ಷ ಭಾರೀ ಮಳೆಯ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರು ಕಂಗಾಲಾಗಿದ್ದರು. ಶೇ.70 ರಷ್ಟು ಅಡಿಕೆ ನಾಶವಾಗಿತ್ತು. ಅದರ ಹೊಡೆತದಿಂದ ಹೊರಬರುವ ಹೊತ್ತಿಗೆ ಈ ಬಾರಿಯೂ ಭಾರೀ ಮಳೆಯ ಕಾರಣದಿಂದ ಮತ್ತೆ ಕೊಳೆರೋಗ ವಕ್ಕರಿಸಿದೆ. ಹಲವು ತೋಟಗಳಲ್ಲಿ ಅಡಿಕೆ ಉದುರುತ್ತಿದೆ. ಬೆಳೆಗಾರರಿಗೆ ಹೊಡೆತದ ಮೇಲೆ ಹೊಡೆತ ಬಿದ್ದಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ ಇದೆ. ಹಾಗಿದ್ದರೂ ಒಮ್ಮೆಲೇ ಸುರಿದ ಭಾರೀ ಮಳೆ ಅಡಿಕೆಗೆ ಸಂಕಷ್ಟ ತಂದಿದೆ. ಕಳೆದ ಬಾರಿಯ ರೋಗ ಬಾಧೆಗೆ ತತ್ತರಿಸಿದ್ದ ಅಡಿಕೆ ಮರಕ್ಕೆ ಈ ಬಾರಿಯ ಮಳೆಗೆ ತಕ್ಷಣವೇ ಶೀಲೀಂದ್ರವು ಚುರುಕಾಗಿ ಕೊಳೆರೋಗಕ್ಕೆ ಕಾರಣವಾಗಿದೆ. ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ  ಕೊಳೆರೋಗ ಕಂಡುಬಂದರೆ ಸುಳ್ಯ ತಾಲೂಕಿನ ಬೆಳ್ಳಾರೆ, ಪಂಜ ಸೇರಿದಂತೆ ವಿವಿಧ ಕಡೆಯ ಬೆಳೆಗಾರರು ಕೊಳೆರೋಗ ಇರುವ ಬಗ್ಗೆ ಹೇಳುತ್ತಾರೆ. ಎರಡು ಬಾರಿ ಔಷಧಿ ಸಿಂಪಡನೆ ನಂತರವೂ ಕೊಳೆರೋಗ ಬಾಧಿಸಿಸುತ್ತಿದೆ ಎಂದು ಬೆಳೆಗಾರರು ಅಳಲು ತೋಡುತ್ತಾರೆ. ಹೀಗಾಗಿ ಏನೂ ಮಾಡಲಾಗದೆ ಕೈಚೆಲ್ಲಿ ಕುಳಿತುಕಜೊಳ್ಳಬೇಕಾದ ಸ್ಥಿತಿ ಇದೆ. ಸಪ್ಟಂಬರ್ ವರೆಗೆ ಕೊಳೆರೋಗದ ಲಕ್ಷಣ ಇರಲಿಲ್ಲ. ನಂತರ ಕಾಣಿಸಿದೆ ಎಂದು ಕೃಷಿಕ ಜಯಗೋವಿಂದ ಹೇಳಿದರೆ  ಪುತ್ತೂರು ತಾಲೂಕಿನ ಕರ್ನೂರಿನ ಸತೀಶ್ ಅವರು ಹೇಳುವಂತೆ ಕಳೆದ ವರ್ಷದಷ್ಟೇ ಈ ಬಾರಿ ಕೊಳೆರೋಗ ಬಾಧಿಸಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಾಗಿದೆ ಎನ್ನುತ್ತಾರೆ.

ಪುತ್ತೂರು ತಾಲೂಕಿನ ಕರ್ನೂರಿನ ಸತೀಶ್ ಅವರ ತೋಟದಲ್ಲಿ

ಹಾಗೆ ನೋಡಿದರೆ ಕೊನೆಯ ಈ ಅವಧಿಯಲ್ಲಿ ಮಳೆ ಹೆಚ್ಚಾಗಿದೆ. ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ಅವರ ಮಾಹಿತಿ ಪ್ರಕಾರ ಪೂರ್ವಫಲ್ಗುಣಿ ಅಥವಾ ಹುಬ್ಬಾ ನಕ್ಷತ್ರ (ಆಗಸ್ಟ್ 31 – ಸೆಪ್ಟೆಂಬರ್ 12) ದ ಅವಧಿಯಲ್ಲಿ ದಾಖಲಾದ ಮಳೆ = 813 ಮಿ.ಮೀ. ಕಳೆದ ವರ್ಷ ಕೇವಲ 52 ಮಿ.ಮೀ.

ಸರಾಸರಿ (ಮಿ.ಮೀ.ಗಳಲ್ಲಿ)
1976 – 2000 = 196
2001 – 2019 = 269
1976 – 2019 = 228
ಗರಿಷ್ಟ = 813 ( 2019 )
ದ್ವಿತೀಯ ಗರಿಷ್ಟ=613 ( 2007 )
ಕನಿಷ್ಟ =028 (1991 )

ದಿನವೊಂದರಲ್ಲಿ ದಾಖಲಾದ ಗರಿಷ್ಟ ಮಳೆ 158 ಮಿ.ಮೀ (8/9/2019)

ತಕ್ಷಣವೇ ಗಮನಹರಿಸುವುದು  ಸೂಕ್ತ:

ಆಡಳಿತವು ತಕ್ಷಣವೇ ಬೆಳೆಗಾರರ ಸಂಕಷ್ಟದ ಕಡೆಗೆ ಗಮನಹರಿಸಬೇಕಿದೆ. ಏಕೆಂದರೆ ಸತತ ಎರಡು ವರ್ಷ ಕೊಳೆರೋಗದಿಂದ ಅಡಿಕೆ ನಾಶವಾಗಿದೆ. ಅಡಿಕೆ ಬೆಳೆಗಾರರಿಗೆ ಇಡೀ ವರ್ಷದ ಆದಾಯವೂ ಇದೇ ಆಗಿದೆ. ಹೀಗಾಗಿ ಸರಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ಏನು ಮಾಡಬಹುದು  ಎಂಬುದರ ಬಗ್ಗೆ ಚಿಂತನೆ ನಡೆಸಬೇಕಿದೆ. ಏಕೆಂದರೆ ಸತತ ಎರಡು ವರ್ಷಗಳಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೊಗ ಬಾಧಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

12 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

12 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago