Advertisement
ರಾಷ್ಟ್ರೀಯ

ಈ ಬಾರಿ “ನಿರ್ಮಲ” ಬಜೆಟ್ : ಕೃಷಿಯತ್ತಲೂ ಕಣ್ಣಿಟ್ಟ ಕೇಂದ್ರ ಸರಕಾರ

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ  2019-20ರ ಸಾಲಿನ ಹಣಕಾಸು ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ಕೃಷಿಕರನ್ನೂ ಕೇಂದ್ರೀಕರಿಸಿದೆ.

ಶೂನ್ಯ ಬಂಡವಾಳ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿರುವ ಬಜೆಟ್ ರೈತ ವರ್ಗದ ಆದಾಯವನ್ನು ದ್ವಿಗುಣಗೊಳಿಸಲು ಸರಕಾರವು  ಪ್ರಮುಖ ಬೆಳೆ ಹಾಗೂ ಮಧ್ಯಂತರ ಬೆಳೆಗಳಿಂದ ಗಳಿಸುವ ಆದಾಯದ ಸಮತೋಲನ ಕಾಯ್ದುಕೊಳ್ಳಲು ‘ಶೂನ್ಯ ಬಂಡವಾಳ ಕೃಷಿಗೆ’ ಹೆಚ್ಚು ಒತ್ತು ನೀಡಲಾಗುತ್ತಿದೆ. ಕೃಷಿ ಆಧಾರಿತ ಕೈಗಾರಿಕೆಗಳಲ್ಲಿ ಖಾಸಗಿ ಹೂಡಿಕೆಗೆ ಒತ್ತು ನೀಡಿದೆ. ಕೃಷಿ ಆಧಾರಿತ ಕೈಗಾರಿಕೆಗಳಲ್ಲಿ ಖಾಸಗಿ ಹೂಡಿಕೆಗೆ ಆದ್ಯತೆ, ಮಾರುಕಟ್ಟೆ ವ್ಯವಸ್ಥೆಗೆ 10 ಸಾವಿರ ಹೊಸ ಕೃಷಿಕರ ಸಂಘ ಸ್ಥಾಪಿಸಲು ನಿರ್ಧಾರ, ಧಾನಮಂತ್ರಿ ಕಿಸಾನ್ ಯೋಜನೆಯನ್ನು ಪ್ರಸಕ್ತ ಸಾಲಿಗೂ ಮುಂದುವರೆಸಲಾಗುತ್ತಿದ್ದು, ವಾರ್ಷಿಕ 6 ಸಾವಿರ ರುಗಳನ್ನು ಸರ್ಕಾರ ನೀಡುತ್ತಿದ್ದು, 14.5 ಕೋಟಿ ರೈತರಿಗೆ ಇದರ ಪ್ರಯೋಜನೆ ಸಿಗಲಿದೆ. ಸಾಂಪ್ರದಾಯಿಕ ಕೃಷಿಯನ್ನು ಹೆಚ್ಚು ಉತ್ಪಾದನಾಯುಕ್ತ ಮಾಡಲು ಕ್ಲಸ್ಟರ್ ಮಾದರಿ ಪದ್ಧತಿ ಮೂಲಕ ಸಾಂಪ್ರದಾಯಿಕ ಆಗ್ರೋ ಕೈಗಾರಿಕೆಗಳನ್ನು ಉತ್ತೇಜಿಸಲು ಯೋಜನೆ ರೂಪಿಸಲಾಗಿದೆ. 12.5 ಕೋಟಿ ಸಣ್ಣ ಹಾಗೂ ಮಧ್ಯಮ ರೈತರಿಗೆ (2 ಹೆಕ್ಟೇರ್) ವಾರ್ಷಿಕ ರೂ. 6000 (ಮೂರು ಕಂತಿನಲ್ಲಿ). ನೀಡಲಾಗುತ್ತದೆ . ಮೊದಲ ಕಂತಿನಲ್ಲಿ 3.11 ಕೋಟಿ ರೈತರಿಗೆ ಹಾಗೂ ಎರಡನೇ ಕಂತಿನಲ್ಲಿ 2.66 ಕೋಟಿ ರೈತರಿಗೆ ಸೌಲಭ್ಯ ಸಿಗಲಿದೆ. ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಮೂಲಕ ಮಾಸಿಕ ರೂ. 3000 ಪಿಂಚಣಿ ನೀಡಲಾಗುವುದು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ (PMKSS) ಅಡಿಯಲ್ಲಿ 60 ವರ್ಷ ಮೇಲ್ಪಟ್ಟ ರೈತರಿಗೆ ಪ್ರತಿ ತಿಂಗಳಿಗೆ ರೂ. 3000 ಕೇಂದ್ರ ಸರಕಾರದಿಂದ ನೀಡಲಿದೆ.

ಸೂಟ್ ಕೇಸ್ ಬದಲಿಗೆ ಈ ಬಾರಿ ಭಾರತೀಯ ಪದ್ದತಿಯಂತೆ ಮೊದಲ ಬಾರಿಗೆ ಬಜೆಟ್ ಮಂಡನೆಗೆ ಕೆಂಪು ಬಟ್ಟೆಯಲ್ಲಿ ಬಜೆಟ್ ಪ್ರತಿಯನ್ನು ಸುತ್ತಿ ಸಂಸತ್ ಪ್ರವೇಶಿಸಿದ ನಿರ್ಮಲಾ ಸೀತಾರಾಮನ್ ಗಮನ ಸೆಳೆದರು. ಸೂಟ್ ಕೇಸು ಭಾರತೀಯ ಸಂಸ್ಕೃತಿಯಲ್ಲ, ಅದು ಪಾಶ್ಚಾತ್ಯ ಬಳುವಳಿ ಕೆಂಪು ಬಣ್ಣ ಪಾಶ್ಚಿಮಾತ್ಯ ಗುಲಾಮಗಿರಿಯಿಂದ ಹೊರಬಂದಿರುವ ಸಂಕೇತವಾಗಿರುವುದರಿಂದ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಕೆಂಪು ಬಣ್ಣದ ಬಟ್ಟೆಯಲ್ಲಿ ಗಂಟುಕಟ್ಟಿ ಬಜೆಟ್ ಪ್ರತಿಯನ್ನು ತಂದಿದ್ದಾರೆ ಎಂದು ಸಲಹೆಗಾರರು ಪ್ರತಿಕ್ರಿಯೆ ನೀಡಿದ್ದಾರೆ.
ಬಜೆಟ್ ನಲ್ಲಿ ಕೇಳಿದ್ದು……
  • ರೈಲ್ವೇ ಮೂಲಭೂತ ಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ 2019 ರಿಂದ 2030 ರ ವರೆಗೆ ಪ್ರತೀ ವರ್ಷ ಏರಿಕೆ ಮಾಡುತ್ತಾ 50 ಲಕ್ಷ ಕೋಟಿ ಮೀಸಲಿಡಲಾಗುವುದು
    ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ರೈಲ್ವೇ ಆಧುನೀಕರಣ
  • ವಿಮಾನಯಾನ, ಮಾಧ್ಯಮ , ಅನಿಮೇಶನ್‌, ಜೀವವಿಮಾ ಕ್ಷೇತ್ರಗಳಲ್ಲಿ 100% FDI
  • ಇಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಸರಕಾರದ ಪ್ರಮುಖ ಆದ್ಯತೆ
  • ಮುಂದಿನ 5 ವರ್ಷ ಗಳಲ್ಲಿ ಪ್ರಧಾನಮಂತ್ರಿ ಗ್ರಾಮ‌ಸಡಕ್ ಯೋಜನೆಯಡಿ 1 ಲಕ್ಷ 25,000 ಕಿಮೀ ರಸ್ತೆ‌ ನಿರ್ಮಿಸುವ‌ ಗುರಿ
  • ಬಾಹ್ಯಾಕಾಶ ಯೋಜನೆಗಳಿಗೆ ಬೆಂಬಲವಾಗಿ ಹೊಸದಾಗಿ ಇಸ್ರೋ ಮಾದರಿ NSIL ಸ್ಥಾಪನೆ (New Space India Limited)
  • ಮಹಿಳಾ ಸಬಲೀಕರಣ ಮತ್ತು ಸ್ವ ಉದ್ಯೋಗ ಪ್ರೋತ್ಸಾಹಕ್ಕೆ ಎಲ್ಲಾ ಜಿಲ್ಲೆಗಳಲ್ಲಿ Women self help group ಯೋಜನೆ ಅನುಷ್ಠಾನ
  • 1,2,5,10,20 ರೂಪಾಯಿ ಸರಣಿಯ ಹೊಸ ಮಾದರಿ ನಾಣ್ಯ ಬರುವ ಮಾರ್ಚ್ ‌ಒಳಗಡೆ ಚಲಾವಣೆಗೆ ಬರಲಿದೆ
  • ಎಲೆಕ್ಟ್ರಿಕ್ ವಾಹನಗಳ‌ ಮೇಲಿನ 12% GST 5% ಗೆ ಇಳಿಕೆ
  • 1 ಲೀಟರ್ ಪೆಟ್ರೋಲ್‌ ಡೀಜಲ್‌ಗೆ ಹೆಚ್ಚುವರಿ 1 Rs ಸೆಸ್

ಸೇರಿದಂತೆ ವಿವಿಧ ಕೊಡುಗೆಗಳು , ತೆರಿಗೆಗಳು, ಹೆಚ್ಚುವರಿ ಹೊರೆ ಇದೆ.

ಬಜೆಟ್ ಮುಖ್ಯಾಂಶ ಹೀಗಿದೆ…….

* ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 1 ರೂ. ಸೆಸ್ ಏರಿಕೆ

* ಬಂಗಾರದ ಮೇಲಿನ ಆಮದು ಸುಂಕ ಶೇ. 10ರಿಂದ 12.5ಕ್ಕೆ ಏರಿಕೆ.

* ಡಿಜಿಟಲ್‌ ಪೇಮೆಂಟ್‌ ಗೆ ಉತ್ತೇಜನ. ಕ್ರೆಡಿಕ್‌ ಕಾರ್ಡ್‌ ಪೇಮೆಂಟ್‌ಗಳ ಮೇಲೆ ಶುಲ್ಕ ಇಲ್ಲ.

* ಮಧ್ಯಮ ವರ್ಗದವರ ಗೃಹ ಸಾಲಕ್ಕೆ ತೆರಿಗೆ ವಿನಾಯಿತಿ. 7 ಲಕ್ಷದವರೆಗಿನ ಗೃಹ ಸಾಲಕ್ಕೆ 15 ವರ್ಷ ತೆರಿಗೆ ವಿನಾಯಿತಿ.

* ತೆರಿಗೆ ಪಾವತಿಗೆ ಇನ್ನು ಪ್ಯಾನ್‌ ಕಾರ್ಡ್‌ ಅಥವಾ ಆಧಾರ್‌ ಕಾರ್ಡ್‌ ಇದ್ದರೆ ಸಾಕು

* ಅಟಲ್‌ ಪೆನ್ಷನ್‌, ನ್ಯಾಷನಲ್‌ ಪೆನ್ಷನ್‌ ಯೋಜನೆ ಪಿಎಫ್ಆರ್‌ಡಿಐ ಜೊತೆ ಜೋಡಿಕೆ

* ಜನ್‌ಧನ್‌ ಖಾತೆ ಹೊಂದಿರುವ ಮಹಿಳೆಯರಿಗೆ 5 ಸಾವಿರ ರೂಪಾಯಿ ಓವರ್‌ ಡ್ರಾಫ್ಟ್

* ದೇಶದ ಎಲ್ಲಾ ಮಹಿಳಾ ಸಂಘಗಳಿಗೆ ಬಡ್ಡಿ ವಿನಾಯಿತಿಯಲ್ಲಿ ಸಾಲ

* 60 ವರ್ಷ ಮೇಲ್ಪ ಟ್ಟ ಕಾರ್ಮಿಕರಿಗೆ ತಿಂಗಳಿಗೆ 3 ಸಾವಿರ ರೂ. ಪೆನ್ಷನ್.

* ಸ್ಟ್ಯಾಂಡ್ ಅಪ್ ಯೋಜನೆಗಳ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಹಣದ ನೆರವು

* ಸ್ವಚ್ಛ ಭಾರತ್‌ ಯೋಜನೆಯಡಿ 9.6 ಕೋಟಿ ಶೌಚಾಲಯ ನಿರ್ಮಾಣ. ಗ್ರಾಮೀಣ ಪ್ರದೇಶದಲ್ಲೂ ಘನತ್ಯಾಜ್ಯ ವಿಲೇವಾರಿ ಘಟಕ

* ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ  24 ಲಕ್ಷ ಕುಟುಂಬಗಳಿಗೆ ಸೂರು ಭಾಗ್ಯ. ನೂತನ ತಂತ್ರಜ್ಞಾನದಿಂದ ಆಧುನಿಕ ಮನೆ ನಿರ್ಮಾಣ

*ಜಲಶಕ್ತಿ ಸಚಿವಾಲಯ ಸ್ಥಾಪನೆ. ಜಲಸಂವರ್ಧನೆ, ಕುಡಿಯುವ ನೀರು ಯೋಜನೆಗೆ ಮೊದಲ ಆದ್ಯತೆ.

* ಶೇ .97 ರಷ್ಟು ಗ್ರಾಮಗಳಿಗೆ ಸರ್ವಋತು ಸಾರಿಗೆ ಸೌಲಭ್ಯ, ಮುಂದಿನ ಐದು ವರ್ಷದಲ್ಲಿ 25 ಸಾವಿರ ಕಿ . ಮೀ. ರಸ್ತೆ ನಿರ್ಮಾಣ,1.25 ಲಕ್ಷ ಕಿ. ಮೀ. ರಸ್ತೆ ಮೇಲ್ದರ್ಜೆಗೇರಿಸಲು ನಿರ್ಧಾರ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago