ಬೆಳ್ಳಾರೆ: 70 ವರ್ಷದ ಈ ವೃದ್ಧ ದಂಪತಿಗಳಿಗೆ ಬೇಕಿದೆ ಆಸರೆ. ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ(78) , ಬೊಳ್ಳೆಚ್ಚಿ(70) ದಂಪತಿಗಳು 35 ವರ್ಷದಿಂದ ಈ ಸ್ಥಳದಲ್ಲಿ ಪಕ್ಕಾ ಸೂರಿಲ್ಲದೇ ಬದುಕುತ್ತಿದ್ದಾರೆ. ಈಗಲಾದರೂ ಪಕ್ಕಾ ಸೂರು ದೊರಕಿ ಸರಕಾರದ ಸವಲತ್ತು ವೃದ್ದ ದಂಪತಿಗೆ ದೊರೆಯುವಂತಾಗಲಿ ಎಂಬ ಆಶಯ ಸ್ಥಳೀಯರದ್ದು.
ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ ಅವರ ಕುಟುಂಬಕ್ಕೆ 70 ವರ್ಷ ಹಿಂದೆ ಸರಕಾರದಿಂದ ಮಂಜೂರಾದ 4:40 ಎಕ್ರೆ ಸ್ಥಳ ಇತ್ತು. ಅದು ಮಾಣಿಕ ಅವರ ಸಹೋದನ ಹೆಸರಿನಲ್ಲಿದೆ. ಸಹೋದರ ಈಗಾಗಲೇ ಮೃತಪಟ್ಟಿದ್ದು ಅವರ ಮಕ್ಕಳು ಇದೇ ಸ್ಥಳದ ಇನ್ನೊಂದು ಕಡೆ ಕಚ್ಚಾ ಸೂರಿನಲ್ಲಿದ್ದಾರೆ. ತೀರಾ ಕಡುಬಡವರಾದ ಮಾಣಿಕ ಅವರಿಗೆ ಒಬ್ಬ ಪುತ್ರನಿದ್ದು ಆತ ಉದ್ಯೋಗದ ನಿಮಿತ್ತ ದೂರದಲ್ಲಿ ವಾಸ್ತವ್ಯ ಹೊಂದಿದ್ದಾರೆ. ಇವರು ಜೀವನೋಪಾಯಕ್ಕೆ ಅಡಕೆ ಸುಲಿಯುವ ಮುಂತಾದ ಸಣ್ಣಪುಟ್ಟ ಕಾಯಕ ಮಾಡಿ ಜೀವನ ಸಾಗಿಸುತ್ತಿದ್ದಾರೆ. ವೃದ್ದಾಪ್ಯದಲ್ಲಿ ಆರೋಗ್ಯದ ಸಮಸ್ಯೆ ಕಾಡುತ್ತಿದ್ದು ಇವರ ಪತ್ನಿಗೆ ಇತ್ತಿಚೆಗೆ ಕಣ್ಣಿನ ಶಸ್ತ್ರ ಚಿಕಿತ್ಸೆಯಾಗಿದೆ. ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಅತ್ತಿತ್ತ ಓಡಾಡಿದ್ದು ಮಾತ್ರ. ಯಾವುದೆ ಫಲ ನೀಡಿಲ್ಲ. ಹೀಗಾಗಿ ಈ ಕುಟುಂಬಕ್ಕೆ ಸೌಲಭ್ಯ ಸಿಗುವಂತಾಗಲಿ ಎಂಬ ಆಶಯ ಸ್ಥಳೀಯರದ್ದು.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…