Advertisement
ಸುದ್ದಿಗಳು

ಈ ವೃದ್ದರಿಗೆ ಬೇಕಿದೆ “ಆಸರೆ”ಯ ಊರುಗೋಲು…

Share

ಬೆಳ್ಳಾರೆ: 70 ವರ್ಷದ ಈ ವೃದ್ಧ ದಂಪತಿಗಳಿಗೆ ಬೇಕಿದೆ ಆಸರೆ. ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ(78) , ಬೊಳ್ಳೆಚ್ಚಿ(70) ದಂಪತಿಗಳು 35 ವರ್ಷದಿಂದ ಈ ಸ್ಥಳದಲ್ಲಿ ಪಕ್ಕಾ ಸೂರಿಲ್ಲದೇ ಬದುಕುತ್ತಿದ್ದಾರೆ. ಈಗಲಾದರೂ ಪಕ್ಕಾ ಸೂರು ದೊರಕಿ ಸರಕಾರದ ಸವಲತ್ತು ವೃದ್ದ  ದಂಪತಿಗೆ ದೊರೆಯುವಂತಾಗಲಿ ಎಂಬ ಆಶಯ ಸ್ಥಳೀಯರದ್ದು.

Advertisement
Advertisement

ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ ಅವರ ಕುಟುಂಬಕ್ಕೆ  70 ವರ್ಷ ಹಿಂದೆ ಸರಕಾರದಿಂದ ಮಂಜೂರಾದ 4:40 ಎಕ್ರೆ ಸ್ಥಳ ಇತ್ತು. ಅದು ಮಾಣಿಕ ಅವರ ಸಹೋದನ  ಹೆಸರಿನಲ್ಲಿದೆ. ಸಹೋದರ ಈಗಾಗಲೇ ಮೃತಪಟ್ಟಿದ್ದು ಅವರ ಮಕ್ಕಳು ಇದೇ ಸ್ಥಳದ ಇನ್ನೊಂದು ಕಡೆ ಕಚ್ಚಾ ಸೂರಿನಲ್ಲಿದ್ದಾರೆ. ತೀರಾ ಕಡುಬಡವರಾದ ಮಾಣಿಕ ಅವರಿಗೆ ಒಬ್ಬ ಪುತ್ರನಿದ್ದು ಆತ ಉದ್ಯೋಗದ ನಿಮಿತ್ತ  ದೂರದಲ್ಲಿ ವಾಸ್ತವ್ಯ ಹೊಂದಿದ್ದಾರೆ. ಇವರು ಜೀವನೋಪಾಯಕ್ಕೆ ಅಡಕೆ ಸುಲಿಯುವ ಮುಂತಾದ ಸಣ್ಣಪುಟ್ಟ ಕಾಯಕ ಮಾಡಿ ಜೀವನ ಸಾಗಿಸುತ್ತಿದ್ದಾರೆ. ವೃದ್ದಾಪ್ಯದಲ್ಲಿ ಆರೋಗ್ಯದ ಸಮಸ್ಯೆ ಕಾಡುತ್ತಿದ್ದು ಇವರ ಪತ್ನಿಗೆ ಇತ್ತಿಚೆಗೆ ಕಣ್ಣಿನ ಶಸ್ತ್ರ ಚಿಕಿತ್ಸೆಯಾಗಿದೆ. ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಅತ್ತಿತ್ತ ಓಡಾಡಿದ್ದು ಮಾತ್ರ. ಯಾವುದೆ ಫಲ ನೀಡಿಲ್ಲ. ಹೀಗಾಗಿ ಈ ಕುಟುಂಬಕ್ಕೆ ಸೌಲಭ್ಯ ಸಿಗುವಂತಾಗಲಿ ಎಂಬ ಆಶಯ ಸ್ಥಳೀಯರದ್ದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

8 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

8 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

9 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

9 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

9 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

9 hours ago