ಬೆಳ್ಳಾರೆ: 70 ವರ್ಷದ ಈ ವೃದ್ಧ ದಂಪತಿಗಳಿಗೆ ಬೇಕಿದೆ ಆಸರೆ. ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ(78) , ಬೊಳ್ಳೆಚ್ಚಿ(70) ದಂಪತಿಗಳು 35 ವರ್ಷದಿಂದ ಈ ಸ್ಥಳದಲ್ಲಿ ಪಕ್ಕಾ ಸೂರಿಲ್ಲದೇ ಬದುಕುತ್ತಿದ್ದಾರೆ. ಈಗಲಾದರೂ ಪಕ್ಕಾ ಸೂರು ದೊರಕಿ ಸರಕಾರದ ಸವಲತ್ತು ವೃದ್ದ ದಂಪತಿಗೆ ದೊರೆಯುವಂತಾಗಲಿ ಎಂಬ ಆಶಯ ಸ್ಥಳೀಯರದ್ದು.
ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ ಅವರ ಕುಟುಂಬಕ್ಕೆ 70 ವರ್ಷ ಹಿಂದೆ ಸರಕಾರದಿಂದ ಮಂಜೂರಾದ 4:40 ಎಕ್ರೆ ಸ್ಥಳ ಇತ್ತು. ಅದು ಮಾಣಿಕ ಅವರ ಸಹೋದನ ಹೆಸರಿನಲ್ಲಿದೆ. ಸಹೋದರ ಈಗಾಗಲೇ ಮೃತಪಟ್ಟಿದ್ದು ಅವರ ಮಕ್ಕಳು ಇದೇ ಸ್ಥಳದ ಇನ್ನೊಂದು ಕಡೆ ಕಚ್ಚಾ ಸೂರಿನಲ್ಲಿದ್ದಾರೆ. ತೀರಾ ಕಡುಬಡವರಾದ ಮಾಣಿಕ ಅವರಿಗೆ ಒಬ್ಬ ಪುತ್ರನಿದ್ದು ಆತ ಉದ್ಯೋಗದ ನಿಮಿತ್ತ ದೂರದಲ್ಲಿ ವಾಸ್ತವ್ಯ ಹೊಂದಿದ್ದಾರೆ. ಇವರು ಜೀವನೋಪಾಯಕ್ಕೆ ಅಡಕೆ ಸುಲಿಯುವ ಮುಂತಾದ ಸಣ್ಣಪುಟ್ಟ ಕಾಯಕ ಮಾಡಿ ಜೀವನ ಸಾಗಿಸುತ್ತಿದ್ದಾರೆ. ವೃದ್ದಾಪ್ಯದಲ್ಲಿ ಆರೋಗ್ಯದ ಸಮಸ್ಯೆ ಕಾಡುತ್ತಿದ್ದು ಇವರ ಪತ್ನಿಗೆ ಇತ್ತಿಚೆಗೆ ಕಣ್ಣಿನ ಶಸ್ತ್ರ ಚಿಕಿತ್ಸೆಯಾಗಿದೆ. ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಅತ್ತಿತ್ತ ಓಡಾಡಿದ್ದು ಮಾತ್ರ. ಯಾವುದೆ ಫಲ ನೀಡಿಲ್ಲ. ಹೀಗಾಗಿ ಈ ಕುಟುಂಬಕ್ಕೆ ಸೌಲಭ್ಯ ಸಿಗುವಂತಾಗಲಿ ಎಂಬ ಆಶಯ ಸ್ಥಳೀಯರದ್ದು.
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…