Advertisement
ಸುದ್ದಿಗಳು

ಈ ವೃದ್ದರಿಗೆ ಬೇಕಿದೆ “ಆಸರೆ”ಯ ಊರುಗೋಲು…

Share

ಬೆಳ್ಳಾರೆ: 70 ವರ್ಷದ ಈ ವೃದ್ಧ ದಂಪತಿಗಳಿಗೆ ಬೇಕಿದೆ ಆಸರೆ. ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ(78) , ಬೊಳ್ಳೆಚ್ಚಿ(70) ದಂಪತಿಗಳು 35 ವರ್ಷದಿಂದ ಈ ಸ್ಥಳದಲ್ಲಿ ಪಕ್ಕಾ ಸೂರಿಲ್ಲದೇ ಬದುಕುತ್ತಿದ್ದಾರೆ. ಈಗಲಾದರೂ ಪಕ್ಕಾ ಸೂರು ದೊರಕಿ ಸರಕಾರದ ಸವಲತ್ತು ವೃದ್ದ  ದಂಪತಿಗೆ ದೊರೆಯುವಂತಾಗಲಿ ಎಂಬ ಆಶಯ ಸ್ಥಳೀಯರದ್ದು.

ಅಮರಪಡ್ನೂರು ಗ್ರಾಮದ ಶೇಣಿ ಸಮೀಪ ಕುಳ್ಳಾಜೆಯಲ್ಲಿ ವಾಸ್ತವ್ಯವಿರುವ ಮಾಣಿಕ ಅವರ ಕುಟುಂಬಕ್ಕೆ  70 ವರ್ಷ ಹಿಂದೆ ಸರಕಾರದಿಂದ ಮಂಜೂರಾದ 4:40 ಎಕ್ರೆ ಸ್ಥಳ ಇತ್ತು. ಅದು ಮಾಣಿಕ ಅವರ ಸಹೋದನ  ಹೆಸರಿನಲ್ಲಿದೆ. ಸಹೋದರ ಈಗಾಗಲೇ ಮೃತಪಟ್ಟಿದ್ದು ಅವರ ಮಕ್ಕಳು ಇದೇ ಸ್ಥಳದ ಇನ್ನೊಂದು ಕಡೆ ಕಚ್ಚಾ ಸೂರಿನಲ್ಲಿದ್ದಾರೆ. ತೀರಾ ಕಡುಬಡವರಾದ ಮಾಣಿಕ ಅವರಿಗೆ ಒಬ್ಬ ಪುತ್ರನಿದ್ದು ಆತ ಉದ್ಯೋಗದ ನಿಮಿತ್ತ  ದೂರದಲ್ಲಿ ವಾಸ್ತವ್ಯ ಹೊಂದಿದ್ದಾರೆ. ಇವರು ಜೀವನೋಪಾಯಕ್ಕೆ ಅಡಕೆ ಸುಲಿಯುವ ಮುಂತಾದ ಸಣ್ಣಪುಟ್ಟ ಕಾಯಕ ಮಾಡಿ ಜೀವನ ಸಾಗಿಸುತ್ತಿದ್ದಾರೆ. ವೃದ್ದಾಪ್ಯದಲ್ಲಿ ಆರೋಗ್ಯದ ಸಮಸ್ಯೆ ಕಾಡುತ್ತಿದ್ದು ಇವರ ಪತ್ನಿಗೆ ಇತ್ತಿಚೆಗೆ ಕಣ್ಣಿನ ಶಸ್ತ್ರ ಚಿಕಿತ್ಸೆಯಾಗಿದೆ. ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಅತ್ತಿತ್ತ ಓಡಾಡಿದ್ದು ಮಾತ್ರ. ಯಾವುದೆ ಫಲ ನೀಡಿಲ್ಲ. ಹೀಗಾಗಿ ಈ ಕುಟುಂಬಕ್ಕೆ ಸೌಲಭ್ಯ ಸಿಗುವಂತಾಗಲಿ ಎಂಬ ಆಶಯ ಸ್ಥಳೀಯರದ್ದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

1 hour ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

10 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

10 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago